spot_img

Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ

Date:

ಅಶೋಚ್ಯಾನನ್ವಶೋಚಸ್ತ್ವಂ ಪ್ರಜ್ಞಾವಾದಾಂಶ್ಚ ಭಾಷಸೇ|(2-11) ಶ್ರೀಕೃಷ್ಣ ದುಃಖ ಪಡಬಾರದೆಂದವನಲ್ಲ. ದುಃಖಪಡಬಾರದ್ದಕ್ಕೆ ದುಃಖ ಪಡಬಾರದು- ಇದು ಶ್ರೀಕೃಷ್ಣನ ಮೊತ್ತ ಮೊದಲ ಉದ್ಗಾರ. ದುಃಖಪಡಬೇಕಾದ್ದಕ್ಕೆ ದುಃಖಪಡಬೇಕು. ಎಲ್ಲಿ ಬೇರೆಯವರಿಗೆ ಕಷ್ಟವಾಗುತ್ತದೋ ಅಲ್ಲಿ ದುಃಖ ಪಡಬೇಕು.

“ಪ್ರಜ್ಞಾವಾದಾಂತ’ ಎಂದು ಹೇಳುವ ಬದಲು ಬಹುವಚನ (ಪ್ರಜ್ಞಾವಾದಾಂಶ್ಚ) ಹೇಳಿದ್ದೇಕೆ? ಅರ್ಜುನನ ಪ್ರತಿವಾದಕ್ಕೂ ವಿರುದ್ಧಾರ್ಥಗಳಿವೆ. ಅನೇಕ ವಾದಗಳಿವೆ. ಸ್ಥಿರವಾದಗಳಿಲ್ಲ. ಹಿಂದಿನ ಮಾತಿಗೂ ಮುಂದಿನ ಮಾತಿಗೂ ಸಂಬಂಧವಿಲ್ಲ. ಪ್ರಜ್ಞಾ =ತಿಳಿದುಕೊಂಡವ. ಆದರೆ ವಾಸ್ತವದಲ್ಲಿ ಅರ್ಜುನ ಹಾಗಿಲ್ಲ. “ತುಂಬ ತಿಳಿದುಕೊಂಡವರ ಹಾಗೆ’ ಅರ್ಜುನನಿದ್ದ. ವಾದವನ್ನು ಮಾಡು ಎಂದು ಹೇಳುವುದೇ ವಿನಾ ವಾದವನ್ನು ಹೇಳು ಎಂದು ಹೇಳುವುದಿಲ್ಲ. ನೀನು ಭಾಷಣ ಮಾಡುತ್ತಿದ್ದೀ (ಭಾಷಸೇ) ಎನ್ನುತ್ತಾನೆ.

ಭಾಷಣವೆಂದರೆ ಇನ್ನೊಬ್ಬರಿಗೆ ಮರಳಾಗುವಂತೆ ಮಾತನಾಡುವುದು. ನಿಜವಾಗಿ ಅಲ್ಲಿ ಶಕ್ತಿ ಇಲ್ಲ. ಪ್ರಜ್ಞಾವಾದವೆಂದರೆ ಮನಸ್ಸಿಗೆ ಬಂದಂತೆ ಮಾತನಾಡುವುದು ಎಂಬರ್ಥವೂ ಇದೆ. ಮನುಷ್ಯನ ದೋಷ ತನಗೆ ತೋರಿದ್ದೇ ಪರಮಪ್ರಮಾಣ ಎಂದು ತಿಳಿಯುವುದು. ನನ್ನ ಮನಸ್ಸಿಗೆ ಬಂದದ್ದೇ ಸರಿ ಎಂದು ತಿಳಿದರೆ ಸತ್ಯ ಕಾಣುವುದಿಲ್ಲ. ಮೋಹಕ್ಕೆ ಒಳಗಾಗುವುದು ಸಹಜ, ಅದರಿಂದ ಹೊರಬರುವುದೂ ಅಗತ್ಯ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ತೆಲಂಗಾಣ ಭಾರತದ 29ನೇ ರಾಜ್ಯವಾಗಿ ಹುಟ್ಟಿಕೊಂಡ ದಿನ

ಜೂನ್ 2, 2014 ಭಾರತದ ಇತಿಹಾಸದಲ್ಲಿ ಒಂದು ಮೈಲಿಗಲ್ಲು. ಈ ದಿನ, ದಶಕಗಳ ಸಾಮಾಜಿಕ ಹೋರಾಟದ ನಂತರ ತೆಲಂಗಾಣ ಪ್ರತ್ಯೇಕ ರಾಜ್ಯವಾಗಿ ಅಸ್ತಿತ್ವಕ್ಕೆ ಬಂತು

40 ವರ್ಷದ ನಂತರ ಮುಖದ ಕಾಂತಿಯನ್ನು ಉಳಿಸಿಕೊಳ್ಳಲು 6 ಸುಲಭ ತಂತ್ರಗಳು!

ಸರಿಯಾದ ಪೋಷಣೆ ಮತ್ತು ಜೀವನಶೈಲಿಯ ಸಣ್ಣ ಸಣ್ಣ ಬದಲಾವಣೆಗಳಿಂದ 40 ನಂತರವೂ ಯುವ ತೇಜಸ್ಸನ್ನು ಕಾಪಾಡಿಕೊಳ್ಳಬಹುದು. ಇಲ್ಲಿ ಅದಕ್ಕಾಗಿ 6 ಪರಿಣಾಮಕಾರಿ ವಿಧಾನಗಳು

ಶಿವರಾಜ್ ಕುಮಾರ್ ಅವರ ಧೃಢ ಹೇಳಿಕೆ: “ಕನ್ನಡದ ಬಗ್ಗೆ ನನ್ನ ನಿಷ್ಠೆ ಅನನ್ಯ, ಕ್ಷಮೆ ಕೇಳುವ ಬಾಧ್ಯತೆ ಕಮಲ್ ಹಾಸನ್ ಅವರದು”

ನಟ ಶಿವರಾಜ್ ಕುಮಾರ್ ಅವರು ಕಮಲ್ ಹಾಸನ್ ಅವರ ಇತ್ತೀಚಿನ ವಿವಾದಾತ್ಮಕ ಹೇಳಿಕೆಗಳಿಗೆ ಸ್ಪಷ್ಟ ಪ್ರತಿಕ್ರಿಯೆ ನೀಡಿದ್ದಾರೆ

ಮುಂಗಾರು ಮಳೆಯ ಅಬ್ಬರ: 6 ಜಿಲ್ಲೆಗಳಿಗೆ ರೆಡ್ ಅಲರ್ಟ್

ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಮುಂಗಾರು ಮಳೆ ತನ್ನ ಪೂರ್ಣ ಶಕ್ತಿಯೊಂದಿಗೆ ಆರಂಭವಾಗಿದೆ