spot_img

ಮಹಾಭಾರತ

Date:

spot_img

ಅಲುಗಾಡದೆ ಮೇಲೆತ್ತಿದ ಕೈ ಊರ್ಧ್ವಮುಖವಾಗಿ ಸ್ತಂಭನಗೊಂಡಾಗ ಅನ್ಯ ಮಾರ್ಗವಿಲ್ಲದೆ ಅದೇ ಸ್ಥಿತಿಯಲ್ಲಿ ಶ್ರೀ ಹರಿಯನ್ನು ದೇವರಾಜ ಇಂದ್ರ ಸ್ತುತಿಸಿದ. ಸರ್ವರನ್ನು ಪಾಲಿಸುವ ಶ್ರೀಮನ್ನಾರಾಯಣ ಇಂದ್ರನ ಮೊರೆ ಆಲಿಸಿ ಬಂದಾಗ ಘಟಿಸಿದ ವಿದ್ಯಮಾನಗಳು ತಿಳಿಯಿತು. ಸ್ಥಂಭನೆಗೊಂಡಿರುವ ಇಂದ್ರನ ಕೈಯನ್ನು ಶ್ರೀಹರಿ ನೇವರಿಸಿದಾಗ ಪುನರಪಿ ಚಲನೆ ಹೊಂದಿ ಮೊದಲಿನಂತಾಯಿತು. ತದನಂತರ ಋಷಿ ಪತ್ನಿ ಖ್ಯಾತಿಯಲ್ಲಿ ಪರಿ ಪರಿಯಾಗಿ ರಕ್ಕಸನನ್ನು ಬಿಟ್ಟು ಕೊಡಲು ನಾರಾಯಣನು ಕೇಳಿಕೊಳ್ಳುತ್ತಾನೆ. ಜಗತ್ತಿನ ಪಾಲನೆ ಮಾಡುವಲ್ಲಿ ನನ್ನ ಕರ್ತವ್ಯವೆಸಗಲು ಅವಕಾಶ ಮಾಡಿಕೊಡು ಎಂದು ವಿನಮ್ರತೆಯಿಂದ ನಿವೇದಿಸಿಕೊಳ್ಳುತ್ತಾನೆ. ಇದ್ಯಾವುದಕ್ಕೂ ಜಗ್ಗದೆ ಪ್ರತಿಯಾಡಿದ ಭೃಗುವಲ್ಲಭೆ ನಮ್ಮ ಆಶ್ರಮದಲ್ಲಿ ರಕ್ಷಿತನಾಗಿರುವವನ್ನು ಬಿಟ್ಟು ಕೊಡಲಾಗದು ಎಂದು ನಿರಾಕರಿಸುತ್ತಾಳೆ. ಆಗ ಅನ್ಯ ಮಾರ್ಗವಿಲ್ಲದೆ ಖ್ಯಾತಿದೇವಿ ಶ್ರೀಹರಿ ಸುದರ್ಶನ ಚಕ್ರದಿಂದ ಬಲಿಯಾಗುವಂತಾಯಿತು.

ಆಶ್ರಮಕ್ಕೆ ಮರಳಿ ಬಂದ ಭೃಗು ಮಹರ್ಷಿ ಸತಿಯನ್ನು ಕಾಣದೆ ಹುಡುಕಿದರು. ಆಕೆಯ ಪಾರ್ಥಿವ ಶರೀರ ರುಂಡ ಮುಂಡ ಪ್ರತ್ಯೇಕವಾಗಿ ಧರೆಗುರುಳಿದ ಸ್ಥಿತಿಯಲ್ಲಿದೆ. ಈ ರೀತಿ ತನ್ನ ಧರ್ಮ ಪತ್ನಿಯ ಹತ್ಯೆಗೈದವರು ಯಾರೆಂದು ಜ್ಞಾನ ದೃಷ್ಟಿಯಿಂದ ನೋಡಿದರು. ವಿಷಯ ಅರಿತು ಹರಿಯ ಬಗ್ಗೆ ಅತ್ಯುಗ್ರ ಕೋಪ ತಾಳಿದರು. ಭೃಗು ಕೋಪ ಭಗವಾನ್ ವಿಷ್ಣುವಿಗೆ ಶಾಪವಾಗಿ ಪರಿವರ್ತನೆಗೊಂಡಿತು. “ಹತ್ತು ಜನ್ಮದಲ್ಲಿ ಭೂಮಿಯಲ್ಲಿ ಹುಟ್ಟುವಂತವನಾಗು. ಅದರಲ್ಲೂ ಒಂದು ಜನುಮದಲ್ಲಿ ಪತ್ನಿ ವಿಯೋಗ ಅನುಭವಿಸಿ ನನ್ನ ವೇದನೆ ಏನೆಂದು ಅನುಭವಿಸು” ಎಂದು ಶ್ರೀಮನ್ನಾರಾಯಣನನ್ನೇ ಶಪಿಸಿದರು.

ಯಾರನ್ನಾದರು ಶಪಿಸಿದರೆ ಅಥವಾ ಅನುಗ್ರಹಿಸಿದರೆ ಹೊಂದಿದ ಪುಣ್ಯಬಲ ವಿನಿಯೋಗವಾಗುತ್ತದೆ. ಈಗ ತ್ರಿಮೂರ್ತಿಗಳಿಗೂ ಶಪಿಸಿದ ಭೃಗು ಮಹರ್ಷಿ ಪುಣ್ಯವನ್ನು ಕಳಕೊಂಡಿದ್ದಾರೆ ಅಥವಾ ಪುಣ್ಯಶೂನ್ಯರಾಗಿದ್ದಾರೆ ಎಮ್ನಬಹುದು. ಮತ್ತೆ ಅಂತಹ ದಿವ್ಯ ಬಲ ಸಂಚಯಕ್ಕಾಗಿ ತಪೋ ಮುಖರಾಗಿ ವಿಷ್ಣುವನ್ನು ಕುರಿತಾಗಿ ಸುದೀರ್ಘ ಕಾಲ ಘೋರ ತಪಸ್ಸನ್ನಾಚರಿಸಿ ಒಲಿಸಿಕೊಂಡರು. ಪ್ರಸನ್ನನಾಗಿ ಪ್ರಕಟನಾದ ಶ್ರೀಹರಿಯಲ್ಲಿ ತಾನಿತ್ತ ಶಾಪವನ್ನು ಮುನಿ ವಚನ ಹುಸಿಯಾಗದಂತೆ ನಿಜವಾಗಿಸಲು ಬೇಡಿಕೊಳ್ಳುತ್ತಾರೆ. ದುರುಳರ ವಧೆ – ಇಳೆಯ ಭಾರ ಇಳಿಸುವ ಕೈಂಕರ್ಯಕ್ಕೆ ಈ ಶಾಪ ಅನುಕೂಲವಾಯಿತು ಎಂದು ನುಡಿದ ಹರಿ ಶಾಪ ವಾಕ್ಯ ಸ್ವೀಕರಿಸಿ ಅಂತೆಯೇ ಆಚರಿಸುವ ಅಭಯವನ್ನು ದಯಪಾಲಿಸುತ್ತಾನೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಧ್ವಜ ಸ್ವೀಕಾರ ದಿನ

ಭಾರತವು ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮೊದಲು, 1947ರ ಜುಲೈ 22 ರಂದು, ಭಾರತದ ಸಂವಿಧಾನ ಸಭೆಯು ತ್ರಿವರ್ಣ ಧ್ವಜವನ್ನು ನಮ್ಮ ರಾಷ್ಟ್ರೀಯ ಧ್ವಜವಾಗಿ ಅಂಗೀಕರಿಸಿತು

ಜಡ್ಡಿನಂಗಡಿ ಬಳಿ ವ್ಯಕಿಯೋರ್ವರ ಆಕಸ್ಮಿಕ ಸಾವು

ನೀರೆ ಜಡ್ಡಿನಂಗಡಿ ಬಸ್ಸು ನಿಲ್ದಾಣದ ಬಳಿ ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಮೃತ ಪಟ್ಟ ಘಟನೆ ವರದಿಯಾಗಿದೆ.

ಮೊಣಕೈ ಕಪ್ಪಾಗಲು ಕಾರಣವೇನು? ಸರಳ ಮನೆಮದ್ದಿನಿಂದ ಕಲೆ ಮಾಯವಾಗಿಸಲು ಇಲ್ಲಿದೆ ಪರಿಹಾರ!

ಕಪ್ಪು ಮೊಣಕೈಗಳನ್ನು ನಿವಾರಿಸಲು ಕಡಲೆ ಹಿಟ್ಟು ಮತ್ತು ನಿಂಬೆ ಹಣ್ಣಿನ ಮಿಶ್ರಣ ಅತ್ಯಂತ ಪರಿಣಾಮಕಾರಿ.

ಚೀನಾದಿಂದ ಕ್ರಾಂತಿಕಾರಿ ‘ಪರಮಾಣು ಬ್ಯಾಟರಿ’: 50 ವರ್ಷಗಳ ಕಾಲ ಚಾರ್ಜ್‌ರಹಿತ ವಿದ್ಯುತ್ ಸರಬರಾಜು!

ಚೀನಾದ ನವೋದ್ಯಮವೊಂದು ಹೊಸ ಪರಮಾಣು ಬ್ಯಾಟರಿಯನ್ನು ಅನಾವರಣಗೊಳಿಸಿದ್ದು, ಇದು ಚಾರ್ಜಿಂಗ್ ಅಥವಾ ನಿರ್ವಹಣೆಯ ಅಗತ್ಯವಿಲ್ಲದೆ 50 ವರ್ಷಗಳ ಕಾಲ ವಿದ್ಯುತ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ ಎಂದು ಹೇಳಿಕೊಂಡಿದೆ.