ಸಾರ್ವಜನಿಕ ಗಣೇಶೋತ್ಸವ ಸಮಿತಿ (ರಿ), ಹೆಬ್ರಿ, ಇದರ ಸುವರ್ಣ ಸಂಭ್ರಮದ ಗಣೇಶೋತ್ಸವದ ಅಂಗವಾಗಿ ಆಯೋಜಿಸಿದ್ದ ಮುಕ್ತ ಅಂಡರ್-ಆರ್ಮ್ ಕ್ರಿಕೆಟ್ ಪಂದ್ಯಾಟ ಯಶಸ್ವಿಯಾಗಿ ನಡೆಯಿತು. ಸಮಿತಿಯ ಉಪಾಧ್ಯಕ್ಷ ಮತ್ತು ಹಿರಿಯರಾದ ಹೆಚ್. ಪ್ರಕಾಶ್ ಮಲ್ಯ ಅವರು ಪಂದ್ಯಾಟವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಸಂತೋಷ ಪೂಜಾರಿ ನೆಕ್ಕಾರ್ ಬೆಟ್ಟುರವರು ಮುದ್ರಾಡಿ ಎಂ. ಎನ್. ಡಿ. ಎಸ್. ಎಂ. ಅನುದಾನಿತ ಪ್ರೌಢಶಾಲೆಗೆ 1995-96 ನೆ ಸಾಲಿನ ವಿದ್ಯಾರ್ಥಿಗಳು ಕ್ರೀಡಾ ಪರಿಕರಗಳು ಸೇರಿ ಮೂಲಭೂತ ಸೌಲಭ್ಯಗಳಿಗೆ ಕೊಡಮಾಡಿದ 50,000 ರೂಗಳ ಚೆಕ್ ಮತ್ತು ಕ್ರೀಡಾ ಪರಿಕರಗಳ ಹಸ್ತಾಂತರ ಮಾಡಿದರು.