ಕರ್ನಾಟಕ ರಾಜ್ಯ ದೇವಾಡಿಗರ ಸಂಘ (ರಿ) ಮಂಗಳೂರು – ಉಪಸಂಘ ಹಿರಿಯಡ್ಕದ ಆಶ್ರಯದಲ್ಲಿ ಜೂನ್ 29, 2025 ಭಾನುವಾರ ಗಣಹೋಮ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಿದ್ಯಾರ್ಥಿವೇತನ, ಸನ್ಮಾನ ಮತ್ತು ಪುಸ್ತಕ ವಿತರಣಾ ಸಮಾರಂಭ ಜರುಗಲಿದೆ.
ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡ್ಕ ಇಲ್ಲಿಯ ಪ್ರೌಢಶಾಲಾ ವಿಭಾಗದ ನೂತನ ಎನ್ಸಿಸಿ ನೇವಲ್ ಘಟಕವನ್ನು ಎನ್ ಸಿ ಸಿ ನೆವೆಲ್ ಕಮಾಂಡರ್ ಶ್ರೀ ಅಶ್ವಿನ್ ಎಂ ರಾವ್ ರವರು ದೀಪ ಬೆಳಗಿಸಿ ಉದ್ಘಾಟಿಸಿದರು.
ಉಡುಪಿ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘ (ರಿ), ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಉಡುಪಿ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್, ಹಿರಿಯಡ್ಕ (ಉಡುಪಿ ವಲಯ) ಇವುಗಳ ಸಂಯುಕ್ತ ಆಶ್ರಯದಲ್ಲಿ ಚಿತ್ರಕಲಾ ಶಿಕ್ಷಕರ ಶೈಕ್ಷಣಿಕ ಕಾರ್ಯಾಗಾರ - 2025 ಎಂಬ ಶೈಕ್ಷಣಿಕ, ಸಾಂಸ್ಕೃತಿಕ ಕಾರ್ಯಕ್ರಮವು ಈ ತಿಂಗಳ 28ನೇ ತಾರೀಖು ಶನಿವಾರದಂದು ಬೆಳಿಗ್ಗೆ 10 ಗಂಟೆಗೆ ಹಿರಿಯಡ್ಕದ ಕರ್ನಾಟಕ ಪಬ್ಲಿಕ್ ಸ್ಕೂಲಿನಲ್ಲಿ ನಡೆಯಲಿದೆ.
ಹಿರಿಯಡ್ಕದ ಶ್ರೀ ವಿಶ್ವಕರ್ಮ ಸಮಾಜೋದ್ಧಾರಕ ಸಂಘ (ರಿ) ಕೊಂಡಾಡಿ, ಭಜನೆಕಟ್ಟೆಯಲ್ಲಿ ಹಿಂದುಸ್ಥಾನಿ ಸಂಗೀತ ಶಾಲೆಯ ಉದ್ಘಾಟನಾ ಕಾರ್ಯಕ್ರಮವು ಜೂನ್ 29, 2025ರಂದು ಬೆಳಿಗ್ಗೆ 9:30ಕ್ಕೆ ನಡೆಯಲಿದೆ.