ಬೆಳ್ಮಣ್ಣ್ ಗ್ರಾಮೀಣ ಕಾಂಗ್ರೇಸ್ ಸಮಿತಿಯನ್ನು ಪುನರ್ ರಚಿಸುವ ಬಗ್ಗೆ ಪಕ್ಷದ ಹಿರಿಯರು ಮತ್ತು ಸರ್ವ ಕಾರ್ಯಕರ್ತರ ಸಭೆಯು ದಿನಾಂಕ 29 ಅದಿತ್ಯವಾರ ಸಂಜೆ 5 ಘಂಟೆಗೆ ಬೆಳ್ಮಣ್ಣ್ ಉಮೇಶ್ ಶೆಟ್ಟಿಯವರ ಮನೆಯಲ್ಲಿ ಗ್ರಾಮೀಣ ಸಮಿತಿ ಅಧ್ಯಕ್ಷರಾದ ಪ್ರಭಾಕರ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.
ಕರಕರಿ ಫ್ರೆಂಡ್ಸ್ ಸೇವಾ ಬಳಗ (ರಿ) ಕರ್ನಾಟಕ ಇದರ ಆಶ್ರಯದಲ್ಲಿ ಶಾಂತಿ ಯುವಕ ಮಂಡಲ ಜಾರ್ಕಳ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಮತ್ತು ಹಿಂದೂ ಗ್ರಾಮ ಸಂರಕ್ಷಣಾ ಸಮಿತಿ ಬೈಲೂರು, ವಿಶ್ವಕರ್ಮ ಬ್ರಾಹ್ಮಣ ಸೇವಾ ಸಂಘ ಬೈಲೂರ್,ಹಾಗೂ ಓಂ ಶಕ್ತಿ ಫ್ರೆಂಡ್ಸ್ ನೀರೆ ಕೆರೆ ಪಲ್ಕೆ ಇವರ ಸಹಯೋಗದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ಸರಕಾರಿ ಪದವಿಪೂರ್ವ ಕಾಲೇಜು ಬೈಲೂರು ಇಲ್ಲಿ ಯಶಸ್ವಿಯಾಗಿ ನಡೆಯಿತು.
ಕ್ರಿಯೇಟಿವ್ ಕಾಲೇಜು ಕಾರ್ಕಳದ ಹೊಸ ಪರಿಕಲ್ಪನೆಯಿಂದ ಹುಟ್ಟಿಕೊಂಡಿರುವ ಕ್ರಿಯೇಟಿವ್ ಸ್ಫೂರ್ತಿ ಮಾತು ಸರಣಿ ಕಾರ್ಯಕ್ರಮದ 9ನೇ ಆವೃತ್ತಿಯ ಕಾರ್ಯಕ್ರಮವು ಕಲಿಯುವುದು ಒಂದು ಹಬ್ಬ- ಸಂಭ್ರಮಿಸೋಣ ಎಂಬ ಶೀರ್ಷಿಕೆಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಜರುಗಿತು.