ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ರಾಜ್ಯಾದ್ಯಂತ ಎಲ್ಲಾ ಜಿಲ್ಲಾಸ್ಪತ್ರೆಗಳ ಆವರಣದಿಂದ ತೆರವುಗೊಳಿಸಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಕ್ರಮ ಕೀಳುಮಟ್ಟದ ರಾಜಕಾರಣಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಂಗಾರು ಮಳೆಯ ಸಂದರ್ಭದಲ್ಲಿ ತುರ್ತು ಪರಿಸ್ಥಿತಿಗಳನ್ನು ಸಮರ್ಪಕವಾಗಿ ನಿರ್ವಹಿಸುವ ಉದ್ದೇಶದಿಂದ ಉಡುಪಿ ನಗರಸಭೆ ವ್ಯಾಪ್ತಿಯ ಎಲ್ಲ 35 ವಾರ್ಡ್ ಗಳಿಗೆ ವಿಶೇಷ ನೋಡೆಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಉಡುಪಿ ಹಾಗೂ ಕಾಪು ತಾಲೂಕುಗಳಲ್ಲಿ ಗ್ರಾಮ ಪಂಚಾಯತ್ ಉಪಚುನಾವಣೆಗೆ ಸಂಬಂಧಿಸಿದಂತೆ ಮೇ 28ರಂದು ನಡೆಯಲಿರುವ ಮತ ಎಣಿಕೆ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಯಾಗಿರುವ ಡಾ. ಕೆ. ವಿದ್ಯಾಕುಮಾರಿ ಅವರು ನಿಷೇಧಾಜ್ಞೆ ವಿಧಿಸಿರುವುದಾಗಿ ಪ್ರಕಟಣೆ ತಿಳಿಸಿದೆ.
ಭಾರೀ ಮಳೆಯಿಂದ ಮಧ್ವ ಸರೋವರ ಜಲಕಮಲವಾಗಿ ಪರಿವರ್ತಿತವಾದ ಹಿನ್ನೆಲೆಯಲ್ಲಿ, ಶ್ರೀ ಕೃಷ್ಣ ಹಾಗೂ ಶ್ರೀ ಮುಖ್ಯಪ್ರಾಣ ದೇವರಿಗೆ ಅದ್ದೂರಿಯಾದ ಸಪ್ತೋತ್ಸವಾಂಗ ತೆಪ್ಪೋತ್ಸವ ಮಂಗಳವಾಗಿ ನೆರವೇರಿತು.