ಮಕ್ಕಳಲ್ಲಿ ರಾಷ್ಟ್ರಪ್ರೇಮವನ್ನು ಉದ್ದೀಪನಗೊಳಿಸುವ ಸಲುವಾಗಿ, ಭಾರತದ 78 ನೇ ಸ್ವಾತಂತ್ರೋತ್ಸವ ಸಂಭ್ರಮದ ಪ್ರಯುಕ್ತ ಉಡುಪಿಯ ಗುಂಡಿಬೈಲಿನ ಶ್ರೀ ಅಭಿರಾಮ ಧಾಮ ಸಂಕೀರ್ತನ ಮಂದಿರದಲ್ಲಿ ದೇಶಭಕ್ತಿ ಗೀತೆಗಳ ಗಾಯನ ಸ್ಪರ್ಧೆಯನ್ನು ಇದೇ ತಿಂಗಳ 13 ನೇ ತಾರೀಖಿನಂದು (ಬುಧವಾರ) ಬೆಳಿಗ್ಗೆ 10.30ಕ್ಕೆ ಆಯೋಜಿಸಲಾಗಿದೆ.
ಶಿವಮೊಗ್ಗದ ನೆಹರು ಇಂಡೋರ್ ಸ್ಟೇಡಿಯಂನಲ್ಲಿ ಆಗಸ್ಟ್ 3ರಂದು ನಡೆದ 3ನೇ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ಶಿಪ್ನಲ್ಲಿ ಎರ್ಲಪಾಡಿ ಸರಕಾರಿ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಪ್ರಥ್ವಿ ಚಿನ್ನದ ಪದಕ ಗೆದ್ದು ಸಾಧನೆ ಮಾಡಿದ್ದಾರೆ.
ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವತಿಯಿಂದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ' ಕ್ರಿಯೇಟಿವ್ ಕೆಸರ್ಡೊಂಜಿ ದಿನ ' ಹಸಿರಿನೊಡನೆ ಕಲಿಕೆಯ ಕಾರ್ಯಕ್ರಮವನ್ನು 5 ಆಗಸ್ಟ್ 2025 ರಂದು ಹಿರ್ಗಾನ ಗ್ರಾಮದ ಬೆಂಗಾಲ್ ಗದ್ದೆಯಲ್ಲಿ ಹಮ್ಮಿಕೊಳ್ಳಲಾಯಿತು.
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಪಾಠದ ಗುಣಮಟ್ಟ ಸುಧಾರಿಸಲು ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಇನ್ನು ಮುಂದೆ ಶಾಲಾ ವೇಳೆಯಲ್ಲಿ ಶಿಕ್ಷಕರು ಮೊಬೈಲ್ ಬಳಸುವುದನ್ನು ನಿಷೇಧಿಸಲಾಗಿದೆ.
ದಿನಾಂಕ 05-08-2025 ರ ಮಂಗಳವಾರದಂದು ಡಾ.ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮದರ್ಜೆ ಕಾಲೇಜು ನಿಟ್ಟೆ ಇದರ 38ನೇ ವಿದ್ಯಾರ್ಥಿ ಪರಿಷತ್ ಅನ್ನು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಅಂತರಾಷ್ಟ್ರೀಯ ಸಹಯೋಗಗಳ ನಿರ್ದೇಶಕರಾದ ಪ್ರೋ. ಹರೀಕೃಷ್ಣ ಭಟ್ ಉದ್ಘಾಟಿಸಿದರು.