spot_img

ತೆರೆಗೆ ಬರಲು ಸಜ್ಜಾಗಿದೆ ಕರಾವಳಿಯ ಮತ್ತೊಂದು ಸಿನೆಮಾ “ಲೈಟ್ ಹೌಸ್”

Date:

ಚಿತ್ರದ ಹೆಸರು: ಲೈಟ್ ಹೌಸ್

ಭಾಷೆ : ಕನ್ನಡ

ಅಸ್ತ್ರ ಪ್ರೊಡಕ್ಷನ್ಸ್ ಹಾಗೂ ಅಮ್ಚೆ ಕ್ರಿಯೇಶನ್ಸ್ ಬ್ಯಾನರ್ ಅಡಿಯಲ್ಲಿ ಮೂಡಿ ಬಂದಿರುವ “ಲೈಟ್ ಹೌಸ್” ಕನ್ನಡ ಚಲನಚಿತ್ರ ಇದೇ ಮೇ 16 ರಂದು ತೆರೆಗೆ ಬರಲು ಸಜ್ಜಾಗಿದೆ. ಶ್ರೀ ದತ್ತಾತ್ರೆಯ ಪಾಟ್ಕರ್ ಬಂಟಕಲ್ಲು ಇವರ ನಿರ್ಮಾಣದಲ್ಲಿ, ಸಂದೀಪ್ ಕಾಮತ್ ಅಜೆಕಾರು ಇವರ ನಿರ್ದೇಶನದಲ್ಲಿ ಸಿನೆಮಾ ಮೂಡಿಬಂದಿದ್ದು, ಕರಾವಳಿ ಭಾಗದ ಕಲೆ-ಸಂಸ್ಕೃತಿ-ಆಚಾರ-ವಿಚಾರಗಳನ್ನು ಬಹಳ ಸುಂದರವಾಗಿ ಸಿನೆಮಾದಲ್ಲಿ ತೋಸಿಸಲಾಗಿದೆ. ಚಿತ್ರದ ಬಹುತೇಕ ಎಲ್ಲಾ ಚಿತ್ರೀಕರಣವನ್ನು ಉಡುಪಿಯಲ್ಲಿ ನಡೆಸಲಾಗಿದ್ದು, ಕರಾವಳಿಯ ಸೌಂದರ್ಯವನ್ನು ಸಿನೆಮಾದಲ್ಲಿ ಸೆರೆಹಿಡಿಯಲಾಗಿದೆ. “ಲೈಟ್ ಹೌಸ್” ಸಂಪೂರ್ಣ ಸಾಂಸಾರಿಕ ಚಿತ್ರವಾಗಿದ್ದು, ಇಡೀ ಸಂಸಾರ ಮಕ್ಕಳ ಜೊತೆ ಕೂತು ನೋಡುವ ಸಿನೆಮಾ ಇದಾಗಿದ್ದು, ಪ್ರಸ್ತುತ ಕನ್ನಡ ಮಾದ್ಯಮ ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳು, ನೇತ್ರದಾನದ ಮಹತ್ವ ಹಾಗೂ ಕರಾವಳಿಯ ಕಲೆ-ಸಂಸ್ಕೃತಿಯನ್ನು ಸಮಾಜಕ್ಕೆ ತೋರಿಸುವ ಕಥೆ ಈ ಚಿತ್ರದಲ್ಲಿದೆ.

ಹೆಸರಾಂತ ಕಲಾವಿದರಾದ ಶೋಭರಾಜ್ ಪಾವೂರು, ಮಾನಸಿ ಸುಧೀರ್, ಪ್ರಕಾಶ್ತೂಮಿನಾಡು, ದೀಪಕ್ ರೈ ಪಾಣಾಜೆ, ಪೃಥ್ವಿ ಅಂಬರ್, ರಾಹುಲ್ ಅಮೀನ್, ಶೈಲಶ್ರೀ ಮುಲ್ಕಿ, ಶೀತಲ್‌ ನಾಯಕ್, ಅಚಲ್ ಜಿ ಬಂಗೇರ, ಅಪೂರ್ವ ಮಾಳ, ಚಂದ್ರಕಲಾ ರಾವ್, ತಿಮ್ಮಪ್ಪ ಕುಲಾಲ್‌, ನಮಿತಾ ಕಿರಣ್ ಮುಂತಾದವರು ಚಿತ್ರದ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ.

ಚಿತ್ರದಲ್ಲಿ ಒಟ್ಟು 4 ಹಾಡುಗಳಿದ್ದು ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಹಾಗೂ ಕ್ಲಿಂಗ್ ಜಾನ್ಸನ್ಇವರ ಸಾಹಿತ್ಯಕ್ಕೆ ಹೆಸರಾಂತ ಗಾಯಕರಾದ ವಿಜಯ್ ಪ್ರಕಾಶ್, ವಾಸುಕಿ ವೈಭವ್, ಪೃಥ್ವಿ ಭಟ್, ದಿಯಾ ಹೆಗ್ಡೆ ಚಿತ್ರದ ಹಾಡುಗಳಿಗೆ ಧ್ವನಿ ನೀಡಿರುತ್ತಾರೆ. ಚಿತ್ರದ ಛಾಯಗ್ರಹಣ ಹಾಗೂ ಸಂಕಲನದ ಜವಬ್ದಾರಿಯನ್ನು ಪ್ರಜ್ವಲ್ ಸುವರ್ಣ ವಹಿಸಿಕೊಂಡಿದ್ದು, ಚಿತ್ರಕ್ಕೆ ಸಂಗೀತವನ್ನು ಕಾರ್ತಿಕ್ ಮುಲ್ಕಿ ನೀಡಿರುತ್ತಾರೆ. ಉಡುಪಿ ನಮ್ಮ ಊರು ಹಾಡಿಗೆ ಗಿರಿಧರ್ ದಿವಾನ್ ಸಂಗೀತವನ್ನು ನೀಡಿರುತ್ತಾರೆ.

ಮೇ 16 ರಂದು “ಲೈಟ್ ಹೌಸ್” ಚಲನಚಿತ್ರ ರಾಜ್ಯದ ಬಹುತೇಕ ಕಡೆಗಳಲ್ಲಿ ತೆರೆಕಾಣಲಿದ್ದು ಚಿತ್ರದಲ್ಲಿ ಸಮಾಜದ ಜನತೆಗೆ ಹಾಗೂ ಮಕ್ಕಳಿಗೆ ಅನೇಕ ಸಂದೇಶಗಳು ಇದ್ದು, ಪ್ರತೀ ಒಬ್ಬ ಪೋಷಕರು ತಮ್ಮ ಮಕ್ಕಳೊಂದಿಗೆ ಕೂತು ಸಿನೆಮಾವನ್ನು ನೋಡಬಹುದಾಗಿದೆ ಎಂದು ಚಿತ್ರದ ನಿರ್ದೇಶಕ ಸಂದೀಪ್ ಕಾಮತ್ ಅಜೆಕಾರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಈ ಸಂದರ್ಭದಲ್ಲಿ ಚಿತ್ರನಟಿ ಶೈಲಶ್ರೀ ಮುಲ್ಕಿ, ಯತೀಶ್ ಸುವರ್ಣ , ಮಾರ್ಗದರ್ಶಕರಾದ ಶ್ರೀ ಪುಂಡಲೀಕ ಮರಾಟೆ ಬಂಟಕಲ್ಲು, ಶ್ರೀ ವಿವೇಕ್ ಪಾಟ್ಕರ್ ಬಂಟಕಲ್ಲು, ನಿರ್ಮಾಪಕರಾದ ಶ್ರೀ ದತ್ತಾತ್ರೇಯ ಪಾಟ್ಕರ್ ಬಂಟಕಲ್ಲು ಉಪಸ್ಥಿತರಿರುತ್ತಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಯುವಕರಲ್ಲಿ ಅಧಿಕ ಕೊಲೆಸ್ಟ್ರಾಲ್ ಸಮಸ್ಯೆ

ಅಧಿಕ ಕೊಲೆಸ್ಟ್ರಾಲ್ ಸಾಮಾನ್ಯವಾಗಿ ಯಾವುದೇ ಸ್ಪಷ್ಟ ಲಕ್ಷಣಗಳನ್ನು ತೋರಿಸುವುದಿಲ್ಲ, ಆದರೆ ಅದು ದೇಹದಲ್ಲಿ ಅಪಾಯಕಾರಿ ಮಟ್ಟವನ್ನು ತಲುಪಿದಾಗ ಕೆಲವು ಚಿಹ್ನೆಗಳು ಕಾಣಿಸಿಕೊಳ್ಳಬಹುದು.

ದಿನ ವಿಶೇಷ – ರಾಷ್ಟ್ರೀಯ ವನ್ಯಜೀವಿ ಶಹೀದ್ ದಿನ

ಭಾರತದ ಅರಣ್ಯ ಸಂಪತ್ತು ಮತ್ತು ವನ್ಯಜೀವಿಗಳ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ವನರಕ್ಷಕ ಶಹೀದರ ಸ್ಮೃತಿಗೆ ಅರ್ಪಿತವಾದ ದಿನವೇ ರಾಷ್ಟ್ರೀಯ ವನ್ಯಜೀವಿ ಶಹೀದ್ ದಿನ (National Forest Martyrs Day).

ಬುರುಡೆ ಪ್ರಕರಣ: ಸೌಜನ್ಯ ಸಂಬಂಧಿ ವಿಠಲ್ ಗೌಡನನ್ನು ಸ್ಥಳ ಮಹಜರಿಗೆ ಕರೆ ತಂದ ಎಸ್‌ಐಟಿ

ಪ್ರಕರಣಕ್ಕೆ ಸಂಬಂಧಿಸುದಂತೆ ಸೌಜನ್ಯ ಅವರ ಮಾವನಾದ ವಿಠಲ್ ಗೌಡನನ್ನು ಇಂದು (ಸೆಪ್ಟೆಂಬರ್ 10) ಸಂಜೆ 4:30ರ ಸುಮಾರಿಗೆ ಘಟನಾ ಸ್ಥಳಕ್ಕೆ ಕರೆತಂದು ಸ್ಥಳ ಮಹಜರು ನಡೆಸುತ್ತಿದೆ.

ಕಾರ್ಕಳದ ಎಸ್.ವಿ.ಟಿ. ಶಾಲೆಗೆ ಬಾಲ್-ಬ್ಯಾಡ್ಮಿಂಟನ್‌ನಲ್ಲಿ ದ್ವಿತೀಯ ಸ್ಥಾನ; ಐದು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ಬಾಲ್ - ಬ್ಯಾಡ್ಮಿಂಟನ್ ಪಂದ್ಯಾಟ ದಲ್ಲಿ ಎಸ್.ವಿ.ಟಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಕಾರ್ಕಳ. ಇಲ್ಲಿನ ಬಾಲಕರ ತಂಡವು ದ್ವಿತೀಯ ಸ್ಥಾನಗಳಿಸಿತು