spot_img

ದುಬೈನಿಂದ ಚಿನ್ನ ತಂದ ನಟಿ ರನ್ಯಾ ರಾವ್ ಕಸ್ಟಮ್ಸ್ ಜಾಲದಲ್ಲಿ

Date:

spot_img

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಟಿ ರನ್ಯಾ ರಾವ್ (Ranya Rao) ಅವರನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ದುಬೈನಿಂದ ಬೆಂಗಳೂರಿಗೆ ವಾಪಸಾದ ನಟಿ ಅವರು ಹೆಚ್ಚುವರಿ ಚಿನ್ನವನ್ನು ಅಕ್ರಮವಾಗಿ ಸಾಗಿಸಿದ ಆರೋಪದಲ್ಲಿ ವಿಚಾರಣೆಗೆ ಒಳಪಡುತ್ತಿದ್ದಾರೆ.

ಸೋಮವಾರ (ಮಾರ್ಚ್ 3) ರಂದು ರನ್ಯಾ ರಾವ್ ದುಬೈನಿಂದ ಬೆಂಗಳೂರಿಗೆ ಬಂದಿದ್ದರು. ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಅವರ ಬ್ಯಾಗ್ ಪರಿಶೀಲಿಸಿದಾಗ, ಹೆಚ್ಚುವರಿ ಚಿನ್ನವನ್ನು ಸಾಗಿಸಿದ್ದು ಪತ್ತೆಯಾಗಿದೆ. ಇದು ಸುಮಾರು 14 ಕಿಲೋಗ್ರಾಂ ಚಿನ್ನವಾಗಿದ್ದು, ಇದರ ಮೌಲ್ಯ ಸುಮಾರು 12 ಕೋಟಿ ರೂಪಾಯಿಗಳು ಎಂದು ಅಂದಾಜಿಸಲಾಗಿದೆ.

ರನ್ಯಾ ರಾವ್ ಅವರು ಐಪಿಎಸ್ ಅಧಿಕಾರಿಯೊಬ್ಬರ ಮಲಮಗಳು ಎಂದು ತಿಳಿದುಬಂದಿದೆ. ಸದ್ಯ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಸಂಬಂಧವಾಗಿ ಕಸ್ಟಮ್ಸ್ ಇಲಾಖೆಯು ವಿವರಗಳನ್ನು ಪರಿಶೀಲಿಸುತ್ತಿದೆ ಎಂದು ತಿಳಿದುಬಂದಿದೆ.

ಸಿನಿಮಾರಂಗದಲ್ಲಿ ರನ್ಯಾ ರಾವ್
ರನ್ಯಾ ರಾವ್ ಮೂಲತಃ ಚಿಕ್ಕಮಗಳೂರಿನವರು. ಅವರು 2014ರಲ್ಲಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಸುದೀಪ್ ಅಭಿನಯದ ‘ಮಾಣಿಕ್ಯ’ ಚಿತ್ರದ ಮೂಲಕ ಅವರು ಕನ್ನಡ ಸಿನಿಮಾ ಉದ್ಯಮಕ್ಕೆ ಪರಿಚಿತರಾದರು. ಈ ಚಿತ್ರದಲ್ಲಿ ಅವರು ‘ಮಾನಸ’ ಪಾತ್ರವನ್ನು ನಿರ್ವಹಿಸಿದ್ದರು. ನಂತರ, ಗಣೇಶ್ ಅಭಿನಯದ ‘ಪಟಾಕಿ’ ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದರು.

ಕನ್ನಡದ ಜೊತೆಗೆ, ರನ್ಯಾ ತಮಿಳು ಸಿನಿಮಾರಂಗದಲ್ಲೂ ಕೆಲಸ ಮಾಡಿದ್ದಾರೆ. ‘ನೋ ಎಂಟ್ರಿ’ ಎಂಬ ತಮಿಳು ಚಿತ್ರದಲ್ಲಿ ಅವರು ಕಾಣಿಸಿಕೊಂಡಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಉಪರಾಷ್ಟ್ರಪತಿ ಸ್ಥಾನಕ್ಕೆ ಕರ್ನಾಟಕ ಮೂಲದ ನ್ಯಾಯಮೂರ್ತಿ ಅಬ್ದುಲ್ ನಝೀರ್ ಹೆಸರು ಮುಂಚೂಣಿಯಲ್ಲಿ

ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ತಮ್ಮ ಸ್ಥಾನಕ್ಕೆ ಅನಿರೀಕ್ಷಿತವಾಗಿ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ, ಈ ಮಹೋನ್ನತ ಹುದ್ದೆಗೆ ಕರ್ನಾಟಕದ ಹೆಮ್ಮೆಯ ಪುತ್ರ, ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಸ್. ಅಬ್ದುಲ್ ನಝೀರ್ ಅವರ ಹೆಸರು ಪ್ರಬಲವಾಗಿ ಕೇಳಿಬರುತ್ತಿದೆ.

ಧರ್ಮಸ್ಥಳ ದುರಂತಗಳ ಆಳಕ್ಕೆ ಇಳಿಯಲು ಸಹಾಯವಾಣಿ ಸ್ಥಾಪನೆಗೆ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಶವ ವಿಲೇವಾರಿ ಪ್ರಕರಣವು ಇದೀಗ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಬೋಳದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಅಡ್ಡಿಪಡಿಸಿದ ಬಿಜೆಪಿ ಗ್ರಾ. ಪಂ ಸದಸ್ಯರ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

ಬಿಜೆಪಿ ಪಂಚಾಯತ್ ಸದಸ್ಯರ ದುರ್ನಡತೆಯ ವಿರುದ್ದ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಹಾಗೂ ಬೋಳ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಜಂಟಿ ಆಶ್ರಯದಲ್ಲಿ ಬೋಳ ಗ್ರಾಮ ಪಂಚಾಯತ್ ಕಚೇರಿ ಮುಂಬಾಗದಲ್ಲಿ ಪ್ರತಿಭಟನಾ ಸಭೆ ನಡೆಯಿತು.

ಎಂ.ಆರ್.ಐ. ಯಂತ್ರದಿಂದ ಲೋಹದ ಆಭರಣ ಧರಿಸಿದ ವ್ಯಕ್ತಿಯ ಸಾವು!

ವೈದ್ಯಕೀಯ ಜಗತ್ತಿನಲ್ಲಿ ಅಪರೂಪದ ಆದರೆ ಅತ್ಯಂತ ಗಂಭೀರವಾದ ದುರಂತವೊಂದು ಅಮೆರಿಕದ ನ್ಯೂಯಾರ್ಕ್‌ನಲ್ಲಿ ಸಂಭವಿಸಿದ್ದು, ಮ್ಯಾಗ್ನೆಟಿಕ್ ರೆಸೋನೆನ್ಸ್ ಇಮೇಜಿಂಗ್ (ಎಂ.ಆರ್.ಐ.) ಸ್ಕ್ಯಾನ್ ಯಂತ್ರದ ಪ್ರಬಲ ಕಾಂತೀಯ ಕ್ಷೇತ್ರಕ್ಕೆ ಸೆಳೆದುಕೊಂಡು ವ್ಯಕ್ತಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ