spot_img

ಪೂಜಾ ಹೆಗ್ಡೆ ಟಾಲಿವುಡ್‌ಗೆ ಕಂಬ್ಯಾಕ್‌: ದುಲ್ಕರ್ ಸಲ್ಮಾನ್ ಜೊತೆ ಹೊಸ ಸಿನಿಮಾ

Date:

ಹೈದರಾಬಾದ್: ಬಹುಭಾಷಾ ನಟಿ ಪೂಜಾ ಹೆಗ್ಡೆ ಬಾಲಿವುಡ್‌ನಿಂದ ಮತ್ತೆ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ರಜನಿಕಾಂತ್‌ ಅವರ ‘ಕೂಲಿ’ ಚಿತ್ರದ ‘ಮೋನಿಕಾ’ ಹಾಡಿನಲ್ಲಿ ಸಖತ್‌ ಡ್ಯಾನ್ಸ್‌ ಮಾಡಿ ಗಮನ ಸೆಳೆದಿದ್ದ ಅವರು, ಇದೀಗ ಐದು ವರ್ಷಗಳ ಬಳಿಕ ಟಾಲಿವುಡ್‌ಗೆ ಮರಳಿದ್ದಾರೆ. ಮಾಲಿವುಡ್ ನಟ ದುಲ್ಕರ್ ಸಲ್ಮಾನ್ ಜೊತೆ ಹೊಸ ಚಿತ್ರವೊಂದರಲ್ಲಿ ಅವರು ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

‘DQ41’ ಚಿತ್ರಕ್ಕೆ ಮುಹೂರ್ತ

ದುಲ್ಕರ್‌ ಸಲ್ಮಾನ್‌ರವರ ‘ಲಕ್ಕಿ ಭಾಸ್ಕರ್‌’ ಚಿತ್ರದ ನಂತರದ ಈ ಹೊಸ ಸಿನಿಮಾಗೆ ‘DQ41’ ಎಂದು ತಾತ್ಕಾಲಿಕ ಹೆಸರಿಡಲಾಗಿದೆ. ಚಿತ್ರದ ಮುಹೂರ್ತ ಈಗಾಗಲೇ ನೆರವೇರಿದ್ದು, ಪೂಜಾ ಹೆಗ್ಡೆ ಮತ್ತು ದುಲ್ಕರ್‌ ಸಲ್ಮಾನ್ ಜೊತೆಗಿರುವ ಶೂಟಿಂಗ್‌ನ ಬಿಟಿಎಸ್‌ (BTS) ವಿಡಿಯೋ ಕೂಡ ರಿಲೀಸ್‌ ಆಗಿದೆ. ಇಬ್ಬರೂ ತಾರೆಯರು ಪರಸ್ಪರ ಬಹಳ ಕ್ಯೂಟ್‌ ಆಗಿ ಕಾಣಿಸಿಕೊಂಡಿರುವ ವಿಡಿಯೋ ಚಿತ್ರರಂಗದಲ್ಲಿ ಕುತೂಹಲ ಮೂಡಿಸಿದೆ.

ಈ ಚಿತ್ರಕ್ಕೆ ರವಿ ನೆಲಕುಡಿತಿ ನಿರ್ದೇಶನ ಮಾಡುತ್ತಿದ್ದು, ಇದು ಅವರ ಚೊಚ್ಚಲ ಚಿತ್ರವಾಗಿದೆ. ಸುಧಾಕರ್ ಚೆರುಕುರಿ ಅವರ ‘ಎಸ್‌ಎಲ್‌ವಿ ಸಿನಿಮಾಸ್‌’ ಬ್ಯಾನರ್ ಅಡಿ ನಿರ್ಮಾಣವಾಗಲಿರುವ ಈ ಚಿತ್ರಕ್ಕೆ ಜಿ.ವಿ. ಪ್ರಕಾಶ್ ಕುಮಾರ್ ಸಂಗೀತ ನೀಡಲಿದ್ದಾರೆ. 2020ರಲ್ಲಿ ಸಹಿ ಹಾಕಿದ್ದ 2022ರಲ್ಲಿ ಬಂದ ಚಿರಂಜೀವಿ – ರಾಮ್‌ಚರಣ್‌ ಅವರ ʼಆಚಾರ್ಯʼ ಸಿನಿಮಾದಲ್ಲಿ  ಅವರು ನಾಯಕಿಯಾಗಿ ಕಾಣಿಸಿಕೊಂಡಿದ್ದರು.ವೆಂಕಟೇಶ್‌ ಅವರ ʼF3ʼ ಅತಿಥಿ ಪಾತ್ರದಲ್ಲಿ ಪೂಜಾ ನಟಿಸಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಣಜಾರು : ಬೇಟೆಯ ವೇಳೆ ಗುಂಡು ಹಾರಿಸಿದ ಪ್ರಕರಣ – ಇಬ್ಬರು ಆರೋಪಿಗಳ ಬಂಧನ

ಬೇಟೆಯ ವೇಳೆ ಗುಂಡು ಹಾರಿಸಿ ಅದು ಕಾರು ಮತ್ತು ಮನೆಯ ಬಾಗಿಲಿಗೆ ತಗುಲಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯಡ್ಕ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರಾಜ್ಯ ಮತ್ತು ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ಗಳಲ್ಲಿ 6 ಪದಕಗಳನ್ನು ಗೆದ್ದ ಹಿರಿಯಡ್ಕದ ಗ್ರೀನ್ ಪಾರ್ಕ್ ಶಾಲಾ ವಿದ್ಯಾರ್ಥಿಗಳು

ಕರಾಟೆ ಕ್ರೀಡೆಯಲ್ಲಿ ಹಿರಿಯಡ್ಕದ ಗ್ರೀನ್ ಪಾರ್ಕ್ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.

ಆತ್ಮಹತ್ಯೆ ತಡೆಗಟ್ಟುವಿಕೆಯ ಬಗ್ಗೆ ನಿಟ್ಟೆ ಕಾಲೇಜಿನಲ್ಲಿ ‘ಪ್ರತ್ಯಾಹಾರ್’ ಬೀದಿ ನಾಟಕ

ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆಯ ಅಂಗವಾಗಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ತಾಲೀಮ್ ತಂಡ ಹಾಗೂ ಸಿಒಪಿಇ-ಆದಿತ್ಯ ಬಿರ್ಲಾ ಗ್ರೂಪ್ ನ ಎಂಪವರ್ ಜಂಟಿಯಾಗಿ 'ಪ್ರತ್ಯಾಹಾರ್' ಎಂಬ 15 ನಿಮಿಷಗಳ ಕಾಲದ ಆತ್ಮಹತ್ಯೆ ತಡೆಗಟ್ಟುವಿಕೆಯ ಬಗೆಗಿನ ಬೀದಿ ನಾಟಕವನ್ನು ಸೆ.10 ರಂದು ಕಾಲೇಜಿನ ಆವರಣದಲ್ಲಿ ಏರ್ಪಡಿಸಿತು.

ದಿನ ವಿಶೇಷ – ಸರಗರಿ ಯುದ್ಧ

ಸೆಪ್ಟೆಂಬರ್ 12 ರಂದು ನಾವು ಸ್ಮರಿಸುವುದು ಇತಿಹಾಸದ ಪುಟಗಳಲ್ಲಿ ಚಿರಸ್ಥಾಯಿಯಾಗಿ ಬರೆದುಕೊಂಡ...