spot_img

ಬಾಲಸಂಸ್ಕಾರದಲ್ಲಿ ಕೋಟಿ-ಚೆನ್ನಯ್ಯರ ನೀತಿ ಪಾಠ

Date:

“ಜ್ಞಾನಭಾರತ್-ಬಾಲಸಂಸ್ಕಾರ
ಕೋಟಿ-ಚೆನ್ನಯ್ಯರ ನಡೆ-ನುಡಿ
ಎಂದೆಂದಿಗೂ ಶಾಶ್ವತ” – ಸಂಗೀತಾ ಕುಲಾಲ್


ಗಣಿತನಗರ : ತುಳುನಾಡಿನ ಅವಳಿವೀರರಾದ ಕೋಟಿ ಚೆನ್ನಯ್ಯರು ಅಧರ್ಮದ ವಿರುದ್ಧ, ನ್ಯಾಯದ ಪರವಾಗಿ ಹೋರಾಡಿದ ವೀರಪುರುಷರು. ಹಿರಿಯರಿಗೆ ಗೌರವವನ್ನು, ಶಿಷ್ಟರ ರಕ್ಷಣೆಯನ್ನು ಮಾಡಿ, ಕೊಟ್ಟ ಮಾತನ್ನು ಉಳಿಸಿಕೊಂಡ ಕೋಟಿ-ಚೆನ್ನಯ್ಯರ ಮೌಲ್ಯಯುತ ಜೀವನ ಇಂದಿಗೂ ಎಂದೆಂದಿಗೂ ಮೌಲ್ಯಯುತ ಎಂದು ಜ್ಞಾನಭಾರತ್-ಬಾಲಸಂಸ್ಕಾರದ ಕಾರ್ಯದರ್ಶಿ ಶ್ರೀಮತಿ ಸಂಗೀತಾ ಕುಲಾಲ್ ಹೇಳಿದರು.
ಅವರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ನಡೆಯುವ ಜ್ಞಾನಭಾರತ್ – ಬಾಲ ಸಂಸ್ಕಾರ ಸಾಪ್ತಾಹಿಕ ಸರಣಿಯಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಈ ಸಂದರ್ಭ ವೃಂದದ ಸದಸ್ಯರಾದ ಶ್ರೀಮತಿ ಉಷಾ ರಾವ್ ಯು, ಶ್ರೀಮತಿ ಗಾಯತ್ರಿ ನಾಗೇಶ್, ಶ್ರೀಮತಿ ಚೇತನಾ ಸಂದೀಪ್, ಶ್ರೀಮತಿ ಅಕ್ಷತಾ ಹಾಗೂ ಶ್ರೀಮತಿ ಲಕ್ಷಿ
ಉಪಸ್ಥಿತರಿದ್ದರು. ಬಾಲಸಂಸ್ಕಾರದ ಬಾಲಕ ಬ್ರಜೇಶ್ ಕಾರ್ಯಕ್ರಮ ನಿರೂಪಿಸಿ, ಆಯುಶ್ಯು ಶೆಟ್ಟಿ ವಂದಿಸಿದರು. ಆರಾಧ್ಯ ಶ್ರೀ ರಾಮರಕ್ಷಾಸ್ತೋತ್ರವನ್ನು ಹಾಗೂ ಪ್ರೇರಣಾ ಬೋರ್ಕರ್ ಭಗವದ್ಗೀತೆಯ ಮೊದಲ ಹತ್ತು ಶ್ಲೋಕವನ್ನು ವಾಚಿಸಿದರು. ಬಾಲ-ಸಂಸ್ಕಾರಕ್ಕೆ ಸೇರಲಿಚ್ಚಿಸುವ ಕಾರ್ಕಳ ತಾಲೂಕಿನ ಮಕ್ಕಳ ಪೋಷಕರು ಸಂಸ್ಥೆಯನ್ನು ಸಂಪರ್ಕಿಸಿ ಮಕ್ಕಳ ಹೆಸರನ್ನು ಈ ತಿಂಗಳ 28ನೇ ತಾರಿಕಿನೊಳಗಾಗಿ ನೊಂದಾಯಿಸಿಕೊಳ್ಳಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ
9902192469 ಇವರನ್ನು ಸಂಪರ್ಕಿಸಲುಬಹುದು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಇನ್ಮುಂದೆ ಹಲಸಿನ ಬೀಜ ಬಿಸಾಡಬೇಡಿ! ಆರೋಗ್ಯಕ್ಕೆ ಬೆಟ್ಟದಷ್ಟು ಲಾಭ ನೀಡುವ ಗುಣವಿದೆ

ಈಗ ಹಲಸಿನ ಹಣ್ಣಿನ ಕಾಲ. ರುಚಿ ಮತ್ತು ಸುವಾಸನೆಯಿಂದ ಬಾಯಲ್ಲಿ ನೀರೂರಿಸುವ ಈ ಹಣ್ಣು ಆರೋಗ್ಯಕ್ಕೂ ಅಪಾರ ಲಾಭ ನೀಡುತ್ತದೆ. ಆದರೆ, ಬಹುಪಾಲು ಜನರು ಈ ಹಣ್ಣಿನ ಬೀಜಗಳನ್ನು ಉಪಯೋಗವಿಲ್ಲದ ಅಂಶವೆಂದು ಬಿಸಾಡುತ್ತಾರೆ. ಆದರೆ, ಆರೋಗ್ಯ ತಜ್ಞರ ಪ್ರಕಾರ, ಈ ಬೀಜಗಳಲ್ಲೂ ಅಮೂಲ್ಯ ಪೌಷ್ಟಿಕಾಂಶಗಳು ಅಡಗಿವೆ.

ಉಡುಪಿಯಲ್ಲಿ ಭೀಕರ ರಸ್ತೆ ಅಪಘಾತ: ಎಂ.ಬಿ.ಎ ವಿದ್ಯಾರ್ಥಿ ಹಾಗೂ ತಬಲ ವಾದಕ ಸಂಕೀರ್ತನ್ ದುರ್ಮರಣ

ರಾಷ್ಟ್ರೀಯ ಹೆದ್ದಾರಿ 66ರ ಉಡುಪಿ ಕಿನ್ನಿಮುಲ್ಕಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಉಡುಪಿ: ಎರಡು ದಿನಗಳ ರೋಚಕ ಕಾರ್ಯಾಚರಣೆ ಬಳಿಕ ಒಂಟಿ ಸಲಗ ಸೆರೆ – ಗ್ರಾಮಸ್ಥರಿಗೆ ನಿಟ್ಟುಸಿರು!

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸಿದ್ದಾಪುರ, ಕಮಲಶಿಲೆ ಹಾಗೂ ಹೊಸಂಗಡಿ ಭಾಗಗಳಲ್ಲಿ ಎರಡು ದಿನಗಳ ಕಾಲ ಆತಂಕ ಮೂಡಿಸಿದ್ದ ಒಂಟಿ ಕಾಡಾನೆ ಕೊನೆಗೂ ಅರಣ್ಯ ಇಲಾಖೆಯ ಬಲೆಗೆ ಬಿದ್ದು, ಸಕ್ರೆಬೈಲಿಗೆ ಕಳುಹಿಸಲಾಗಿದೆ.

ಇರ್ವತ್ತೂರು ಕೊಳಕೆ ಶಾಲೆಯಲ್ಲಿ ಉಚಿತ ನೋಟ್ಸ್ ಪುಸ್ತಕ ವಿತರಣೆ

ಸುಮಾರು 15 ವರ್ಷಗಳಿಂದ ಇರ್ವತ್ತೂರು ಕೊಳಕೆ ಶಾಲೆಗೆ ಶಾಲಾ ಹೆಮ್ಮೆಯ ಹಳೆವಿದ್ಯಾರ್ಥಿ ನಿಕಟ ಪೂರ್ವ ಜಿಲ್ಲಾ ಪಂಚಾಯತ್ ಸದಸ್ಯರಾದ ಉದಯ ಎಸ್ ಕೋಟ್ಯಾನ್ ಮತ್ತು ಮುಂಬೈ ಉದ್ಯಮಿ ವಿಠ್ಠಲ ಎಸ್ ಅಮೀನ್ ರವರು ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ಸ್ ಪುಸ್ತಕ ನೀಡುತ್ತಿದ್ದು ,ಈ ಬಾರಿಯೂ ಕೊಡುಗೆ ನೀಡಿ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದ್ದಾರೆ.