spot_img

ಮಹಾಕುಂಭ ಮೇಳದ ಯಶಸ್ಸಿಗಾಗಿ ಮಠ -ಮನೆ ಮಂದಿರಗಳಲ್ಲಿ ಪ್ರಾರ್ಥಿಸಿ – ಪೇಜಾವರ ಶ್ರೀ ಕರೆ

Date:

ಉತ್ತರ ಪ್ರದೇಶ ಪ್ರಯಾಗರಾಜದ ಪವಿತ್ರ ತ್ರಿವೇಣಿ ಸಂಗಮದಲ್ಲಿ 144 ವರ್ಷಗಳಿಗೊಮ್ಮೆ ನಡೆಯುತ್ತಿರುವ ಮಹಾಕುಂಭ ಮೇಳದ ಸಂಪೂರ್ಣ ಯಶಸ್ಸಿಗಾಗಿ ನಾಡಿನ ಸಮಸ್ತ ಸಾಧು ಸಂತರು ಹಾಗೂ ಪ್ರತೀ ಮನೆ ಮಂದಿರಗಳಲ್ಲಿ ಸಮಸ್ತ ಹಿಂದು ಸಮಾಜ ದೇವರ ಮುಂದೆ ದೀಪ ಬೆಳಗಿ ಪ್ರಾರ್ಥಿಸುವಂತೆ ಶ್ರೀ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಅಪೇಕ್ಷಿಸಿದ್ದಾರೆ .

ಮಹಾಕುಂಭ ಮೇಳ ಇಡೀ ಜಗತ್ತಿನ ಒಂದು ಮಹಾಕೌತುಕ . ಪ್ರಪಂಚದ ಅತೀ ದೊಡ್ಡ ಧಾರ್ಮಿಕ ಮೇಳವಾಗಿದೆ . ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನವನ್ನು ಉದ್ದೇಶವಾಗಿಟ್ಟುಕೊಂಡು ದೇಶ ವಿದೇಶಗಳಿಂದ ಕೋಟ್ಯಂತರ ಸನಾತನ ಧರ್ಮೀಯರು ಅತ್ಯಂತ ಧರ್ಮಶ್ರದ್ಧೆಯಿಂದ ಭಾಗವಹಿಸುತ್ತಿದ್ದಾರೆ . ನಮ್ಮ ಆಯುರ್ಮಾನದಲ್ಲಿ ಇದು ಘಟಿಸುತ್ತಿದೆ ಎನ್ನುವುದೇ ಸಮಸ್ತ ಭಾರತೀಯರಿಗೆ ದೊಡ್ಡ ಹೆಮ್ಮೆಯಾಗಿದೆ . 40 ದಿನಗಳ ಈ ಉತ್ಸವದ ಅದ್ಭುತ ಯಶಸ್ಸಿಗಾಗಿ ಗಣ್ಯಾತಿಗಣ್ಯರಿಂದ ಮೊದಲ್ಗೊಂಡು ಕಾರ್ಮಿಕರ ವರೆಗೆ ಲಕ್ಷಾಂತರ ಜನ ಹಗಲಿರುಳೂ ಶ್ರಮಿಸುತ್ತಿದ್ದಾರೆ . ಸುಮಾರು 50 ಕೋಟಿಯಷ್ಟು ಜನ ಭಾಗವಹಿಸುತ್ತಿದ್ದಾರೆ . ಇದರ ಯಶಸ್ಸು ಒಂದು ಮಹಾ ಸವಾಲು .‌ ಮನುಷ್ಯ ಪ್ರಯತ್ನ ಮತ್ತು ಭಗವಂತನ ಅನುಗ್ರಹದಿಂದ ಈ ಮಹೋತ್ಸವ ಯಾರೊಬ್ಬರಿಗೂ ಯಾವೊಂದು ರೀತಿಯ ತೊಂದರೆ , ವಿಘ್ನ , ಹಾನಿಗಳೂ ಇಲ್ಲದೇ ಅತ್ಯಂತ ಯಶಸ್ವಿಯಾಗಬೇಕು . ಆ ಯಶಸ್ಸಿನಿಂದ ಇಡೀ ದೇಶದಲ್ಲಿ ಶಾಂತಿ ಸುಭಿಕ್ಷೆ ಸುರಕ್ಷೆ ಸಮೃದ್ಧಿಗಳು ನೆಲೆಯಾಗಬೇಕು . ಇದಕ್ಕಾಗಿ ದೇವರಲ್ಲಿ ಪ್ರಾರ್ಥಿಸುವುದು ಸಮಸ್ತ ಹಿಂದುಗಳಿಗೂ ಒಂದು ಪವಿತ್ರ ಕರ್ತವ್ಯವಾಗಿದೆ .‌ಆದ್ದರಿಂದ ನಾಡಿನ ಎಲ್ಲ ಮಠಾಧೀಶರು ಸಾಧು ಸಂತರು , ದೇವಳಗಳ ಅರ್ಚಕರು ವೈದಿಕ ವಿದ್ವಾಂಸರು ಹಾಗೂ ಕೋಟ್ಯಂತರ ಹಿಂದುಗಳು ತಮ್ಮ ಮನೆ ಮಠ ಮಂದಿರಗಳಲ್ಲಿ ದೇವರ ಮುಂದೆ ದೀಪಬೆಳಗಿ ಮಹಾಕುಂಭ ಮೇಳದ ಯಶಸ್ಸಿಗಾಗಿ ಪ್ರಾರ್ಥಿಸೋಣ .
ಎಲ್ಲರಿಗೂ ಒಳಿತಾಗಲಿ .

ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು
ಶ್ರೀ ಪೇಜಾವರ ಅಧೋಕ್ಷಜ ಮಠ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬೇಸಿಗೆಯಲ್ಲಿ ವಾಲ್ನಟ್ ಸೇವಿಸುವುದರ ಪ್ರಯೋಜನಗಳು!

ಬೇಸಿಗೆಯಲ್ಲಿ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ನೀರಿನಾಂಶದಿಂದ ಕೂಡಿದ ಹಣ್ಣುಗಳು ಮತ್ತು ತರಕಾರಿಗಳಷ್ಟೇ ಪ್ರಾಮುಖ್ಯತೆ ಡ್ರೈ ಫ್ರೂಟ್ಸ್‌ಗೂ ಇದೆ

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ನಿಷೇಧ: ವಿದ್ಯಾರ್ಥಿಗಳಿಗೆ ಅವಮಾನ, ನ್ಯಾಯಾಲಯದ ಮುಂದೆ ಪ್ರಕರಣ

ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ಯಜ್ಞೋಪವೀತ (ಜನಿವಾರ) ಧರಿಸಿದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ ಪ್ರಕರಣಗಳು ರಾಜ್ಯವ್ಯಾಪಿ ವಿವಾದವಾಗಿ ಪರಿಣಮಿಸಿದೆ.

ಸುಪ್ರೀಂಕೋರ್ಟ್ ಕಾನೂನು ರಚಿಸಿದರೆ ಸಂಸತ್ತಿನ ಅಗತ್ಯವೇನು? – ಬಿಜೆಪಿ ಸಂಸದ ನಿಶಿಕಾಂತ್ ದುಬೆಯ ವಿವಾದಾತ್ಮಕ ಹೇಳಿಕೆ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ನಿಶಿಕಾಂತ್ ದುಬೆ ಅವರು ಸುಪ್ರೀಂಕೋರ್ಟ್ ಕಾನೂನು ರಚನೆಯಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಿದರೆ ಸಂಸತ್ತನ್ನು ಮುಚ್ಚಿಬಿಡಬೇಕು ಎಂದು ವಾದಿಸಿದ್ದಾರೆ

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ವಿಚಿತ್ರ ವಿನಂತಿ: “ಪಾಸ್ ಮಾಡಿ ಸರ್, ನನ್ನ LOVE ನಿಮ್ಮ ಕೈಯಲ್ಲಿ!”

ಸ್ಎಸ್ಎಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆ ಮೌಲ್ಯಮಾಪನದ ಸಂದರ್ಭದಲ್ಲಿ ಒಂದು ವಿಚಿತ್ರ ಘಟನೆ ಬೆಳಗಾವಿಯ ಚಿಕ್ಕೋಡಿಯಲ್ಲಿ ನಡೆದಿದೆ.