spot_img

ಮಹಾಕುಂಭ ಮೇಳದ ಯಶಸ್ಸಿಗಾಗಿ ಮಠ -ಮನೆ ಮಂದಿರಗಳಲ್ಲಿ ಪ್ರಾರ್ಥಿಸಿ – ಪೇಜಾವರ ಶ್ರೀ ಕರೆ

Date:

spot_img

ಉತ್ತರ ಪ್ರದೇಶ ಪ್ರಯಾಗರಾಜದ ಪವಿತ್ರ ತ್ರಿವೇಣಿ ಸಂಗಮದಲ್ಲಿ 144 ವರ್ಷಗಳಿಗೊಮ್ಮೆ ನಡೆಯುತ್ತಿರುವ ಮಹಾಕುಂಭ ಮೇಳದ ಸಂಪೂರ್ಣ ಯಶಸ್ಸಿಗಾಗಿ ನಾಡಿನ ಸಮಸ್ತ ಸಾಧು ಸಂತರು ಹಾಗೂ ಪ್ರತೀ ಮನೆ ಮಂದಿರಗಳಲ್ಲಿ ಸಮಸ್ತ ಹಿಂದು ಸಮಾಜ ದೇವರ ಮುಂದೆ ದೀಪ ಬೆಳಗಿ ಪ್ರಾರ್ಥಿಸುವಂತೆ ಶ್ರೀ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಅಪೇಕ್ಷಿಸಿದ್ದಾರೆ .

ಮಹಾಕುಂಭ ಮೇಳ ಇಡೀ ಜಗತ್ತಿನ ಒಂದು ಮಹಾಕೌತುಕ . ಪ್ರಪಂಚದ ಅತೀ ದೊಡ್ಡ ಧಾರ್ಮಿಕ ಮೇಳವಾಗಿದೆ . ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನವನ್ನು ಉದ್ದೇಶವಾಗಿಟ್ಟುಕೊಂಡು ದೇಶ ವಿದೇಶಗಳಿಂದ ಕೋಟ್ಯಂತರ ಸನಾತನ ಧರ್ಮೀಯರು ಅತ್ಯಂತ ಧರ್ಮಶ್ರದ್ಧೆಯಿಂದ ಭಾಗವಹಿಸುತ್ತಿದ್ದಾರೆ . ನಮ್ಮ ಆಯುರ್ಮಾನದಲ್ಲಿ ಇದು ಘಟಿಸುತ್ತಿದೆ ಎನ್ನುವುದೇ ಸಮಸ್ತ ಭಾರತೀಯರಿಗೆ ದೊಡ್ಡ ಹೆಮ್ಮೆಯಾಗಿದೆ . 40 ದಿನಗಳ ಈ ಉತ್ಸವದ ಅದ್ಭುತ ಯಶಸ್ಸಿಗಾಗಿ ಗಣ್ಯಾತಿಗಣ್ಯರಿಂದ ಮೊದಲ್ಗೊಂಡು ಕಾರ್ಮಿಕರ ವರೆಗೆ ಲಕ್ಷಾಂತರ ಜನ ಹಗಲಿರುಳೂ ಶ್ರಮಿಸುತ್ತಿದ್ದಾರೆ . ಸುಮಾರು 50 ಕೋಟಿಯಷ್ಟು ಜನ ಭಾಗವಹಿಸುತ್ತಿದ್ದಾರೆ . ಇದರ ಯಶಸ್ಸು ಒಂದು ಮಹಾ ಸವಾಲು .‌ ಮನುಷ್ಯ ಪ್ರಯತ್ನ ಮತ್ತು ಭಗವಂತನ ಅನುಗ್ರಹದಿಂದ ಈ ಮಹೋತ್ಸವ ಯಾರೊಬ್ಬರಿಗೂ ಯಾವೊಂದು ರೀತಿಯ ತೊಂದರೆ , ವಿಘ್ನ , ಹಾನಿಗಳೂ ಇಲ್ಲದೇ ಅತ್ಯಂತ ಯಶಸ್ವಿಯಾಗಬೇಕು . ಆ ಯಶಸ್ಸಿನಿಂದ ಇಡೀ ದೇಶದಲ್ಲಿ ಶಾಂತಿ ಸುಭಿಕ್ಷೆ ಸುರಕ್ಷೆ ಸಮೃದ್ಧಿಗಳು ನೆಲೆಯಾಗಬೇಕು . ಇದಕ್ಕಾಗಿ ದೇವರಲ್ಲಿ ಪ್ರಾರ್ಥಿಸುವುದು ಸಮಸ್ತ ಹಿಂದುಗಳಿಗೂ ಒಂದು ಪವಿತ್ರ ಕರ್ತವ್ಯವಾಗಿದೆ .‌ಆದ್ದರಿಂದ ನಾಡಿನ ಎಲ್ಲ ಮಠಾಧೀಶರು ಸಾಧು ಸಂತರು , ದೇವಳಗಳ ಅರ್ಚಕರು ವೈದಿಕ ವಿದ್ವಾಂಸರು ಹಾಗೂ ಕೋಟ್ಯಂತರ ಹಿಂದುಗಳು ತಮ್ಮ ಮನೆ ಮಠ ಮಂದಿರಗಳಲ್ಲಿ ದೇವರ ಮುಂದೆ ದೀಪಬೆಳಗಿ ಮಹಾಕುಂಭ ಮೇಳದ ಯಶಸ್ಸಿಗಾಗಿ ಪ್ರಾರ್ಥಿಸೋಣ .
ಎಲ್ಲರಿಗೂ ಒಳಿತಾಗಲಿ .

ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು
ಶ್ರೀ ಪೇಜಾವರ ಅಧೋಕ್ಷಜ ಮಠ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಇನ್ನೋನೆಕ್ಸ್ಟ್ ಏರಿಯನ್ ಭಾರತ್ ಅಸ್ಟ್ರಾನೋಮಿ ಎಕ್ಸ್‌ಪೋ 1.0ಬಾಹ್ಯಾಕಾಶದ ಕೌತುಕ ಕಂಡು ಬೆರಗಾದ ವಿದ್ಯಾರ್ಥಿಗಳು

ಇನ್ನೋನೆಕ್ಸ್ಟ್ ಮೈಂಡ್ ಪ್ರೈವೇಟ್ ಲಿಮಿಟೆಡ್ (ಏರಿಯನ್ ಭಾರತ್) ಆಶ್ರಯದಲ್ಲಿ ಗುರುವಾರ ನಡೆದ ಆಸ್ಟ್ರಾನೊಮಿ ಎಕ್ಸ್‌ಪೋ 1.0ರ ಆವೃತ್ತಿ ನಗರದ ಮಂತ್ರಿ ಮಾಲ್‌ನ ಐನಾಕ್ಸ್‌ ಚಿತ್ರಮಂದಿರಲ್ಲಿ ಗುರುವಾರ ಉದ್ಘಾಟನೆಗೊಂಡಿತು.

ರೋಬೋಟ್ ‘ಶುವಾಂಗ್ ಶುವಾಂಗ್’ ಪದವಿ ಪಡೆದ ವಿಚಿತ್ರ ಘಟನೆ: ಚೀನಾದಲ್ಲಿ ತಾಂತ್ರಿಕ ಕ್ರಾಂತಿ!

ಚೀನಾದ ಫುಜಿಯನ್ ಪ್ರಾಂತ್ಯದ ಶುವಾನ್ಶಿ ಹೈಸ್ಕೂಲ್‌ನಲ್ಲಿ ನಡೆದ ಪದವಿ ಪ್ರದಾನ ಸಮಾರಂಭವೊಂದು ವಿಶಿಷ್ಟ ಘಟನೆಗೆ ಸಾಕ್ಷಿಯಾಗಿದೆ. "ಶುವಾಂಗ್ ಶುವಾಂಗ್" ಹೆಸರಿನ ಮಾನವಾಕಾರದ ರೋಬೋಟ್ ಒಂದು ಸಮಾರಂಭದಲ್ಲಿ ಭಾಗವಹಿಸಿ, ವೇದಿಕೆಗೆ ನಡೆದು, ಶಿಕ್ಷಕರಿಂದ ಕೈಚಲಾವಣೆ ಮೂಲಕ ಪ್ರಮಾಣಪತ್ರ ಸ್ವೀಕರಿಸಿತು.

ಹಲಸಿನ ಹಣ್ಣು ತಿಂದು ಬ್ರೀಥಲೈಸರ್‌ನಲ್ಲಿ ಫೇಲ್: ಕೇರಳದಲ್ಲಿ ಅಚ್ಚರಿಯ ಘಟನೆ!

ಮದ್ಯಪಾನ ಮಾಡದಿದ್ದರೂ, ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಮೂವರು ಬಸ್ ಚಾಲಕರು ಬ್ರೀಥಲೈಸರ್ ಪರೀಕ್ಷೆಯಲ್ಲಿ ವಿಫಲರಾಗಿ, ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಾಗಿರುವ ವಿಚಿತ್ರ ಘಟನೆ ವರದಿಯಾಗಿದೆ.

ದಿನ ವಿಶೇಷ – ವಿಶ್ವ ಐವಿಎಫ್ ದಿನ

ಈ ದಿನವು ಸಂತಾನೋತ್ಪತ್ತಿ ವಿಜ್ಞಾನದಲ್ಲಿನ ಮಹತ್ವದ ಮೈಲಿಗಲ್ಲನ್ನು ಗುರುತಿಸುತ್ತದೆ ಮತ್ತು ಬಂಜೆತನದಿಂದ ಬಳಲುತ್ತಿರುವ ಅಸಂಖ್ಯಾತ ದಂಪತಿಗಳಿಗೆ ಆಶಯದ ದಾರಿಯನ್ನು ತೆರೆದ ಐವಿಎಫ್ ತಂತ್ರಜ್ಞಾನದ ಪ್ರಗತಿಯನ್ನು ಸ್ಮರಿಸುತ್ತದೆ