spot_img

ವಿವೇಕಾನಂದ ಯೋಗ ಕೇಂದ್ರ ಪುತ್ತೂರು ಇವರಿಂದ ಬೀಚ್ ಸ್ವಚ್ಛತಾ ಕಾರ್ಯಕ್ರಮ

Date:

ವಿವೇಕಾನಂದ ಯೋಗ ಕೇಂದ್ರ ಪುತ್ತೂರು ಶಾಖೆಯ ಯೋಗಾರ್ಥಿಗಳು ತಮ್ಮ ಸಮಾಜ ಸೇವಾ ಕಾರ್ಯಕ್ರಮದ ಅಂಗವಾಗಿ ಗುರುಗಳಾದ ಸತೀಶ್ ಕುಂದರ್ ಇವರ ನೇತೃತ್ವದಲ್ಲಿ ಪಡುಕೆರೆ ಬೀಚ್ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಯೋಗ ಗುರುಗಳಾದ ಸತೀಶ್ ಕುಂದರ್ ಅವರು ಮಾತನಾಡುತ್ತಾ ನಾವೆಲ್ಲ ಯೋಗ ಬಂಧುಗಳು ನಮ್ಮ ವೈಯಕ್ತಿಕ ಸ್ವಾಸ್ಥ್ಯ ಸಂರಕ್ಷಣೆಗಾಗಿ ಪ್ರತಿನಿತ್ಯ ಯೋಗ ಮಾಡುವುದರೊಂದಿಗೆ ನಾವು ಜೀವಿಸುವ ಸಮಾಜದ ಸ್ವಾಸ್ಥ್ಯಕ್ಕಾಗಿ ಇಂತಹ ಪರಿಸರ ಸ್ವಚ್ಛತಾ ಕಾರ್ಯಕ್ರಮಗಳನ್ನು ಕನಿಷ್ಠ ತಿಂಗಳಿಗೆ ಒಂದು ದಿನವಾದರೂ ಹಮ್ಮಿಕೊಂಡು ಇತರರಿಗೆ ಮಾದರಿಯಾಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಯೋಗ ಶಿಕ್ಷಕಿ ಸುನೀತಾ ಚೈತನ್ಯ, ಯೋಗ ಬಂಧುಗಳಾದ ಲಕ್ಷ್ಮಿ ಟೀಚರ್, ಶಕುಂತಲಾ ಶೆಟ್ಟಿ, ಅನುಪಮಾ, ರಾಜೇಶ್ವರಿ ಭಟ್, ಸುನೀತಾ ಶೆಟ್ಟಿ, ಪ್ರೇಮ,ಕವಿತಾ, ವೇದ ಶೆಟ್ಟಿ, ಶಾಂತ, ವಾಣಿ, ಸುಮಿತ್ರ, ಸುಭದ್ರ, ಶುಭ ಶೆಟ್ಟಿ, ರೂಪ, ಮಮತಾ, ಶ್ವೇತಾ ಶೆಟ್ಟಿ, ಭಾರತಿ, ಸುಜಾತ, ಗುಲಾಬಿ, ವಿಜಯಲಕ್ಷ್ಮಿ ಶೆಟ್ಟಿ, ಮಾಲತಿ ಭರತ್ ರಾಜ್, ನೀತ ಶೆಟ್ಟಿ, ಸಂಧ್ಯಾ ಶೆಟ್ಟಿ, ಮಾಲತಿ ಶೆಟ್ಟಿ, ಸಂಧ್ಯಾ ಶೇಟ್, ಚಿತ್ರಕಲಾ, ಗಾಯತ್ರಿ ಭಟ್, ಶ್ರೀ ಲಕ್ಷ್ಮಿ, ಕುಶಲ ಶೆಟ್ಟಿ, ರಾಜೇಶ್ವರಿ ಶೇಟ್, ಚಂದ್ರಪ್ರತಿಮಾ, ಪ್ರೇರಣಾ, ಯಶವಂತ್, ಮನೀಶ್ ಮುಂತಾದವರು ಉಪಸ್ಥಿತರಿದ್ದರು. ಸುಮಾರು ಒಂದು ಗಂಟೆಗಳ ಕಾಲ ಪಡುಕೆರೆ ಬೀಚ್ ಅನ್ನು ಸ್ವಚ್ಛಗೊಳಿಸಲಾಯಿತು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಹಸಿರು ದ್ರಾಕ್ಷಿಯ 6 ಮಹತ್ವದ ಆರೋಗ್ಯ ಲಾಭಗಳು!

ಸಿಹಿ ಮತ್ತು ಸ್ವಲ್ಪ ಹುಳಿ ರುಚಿಯೊಂದಿಗೆ, ದ್ರಾಕ್ಷಿ ಹಣ್ಣು ಆರೋಗ್ಯಕ್ಕೆ ಅತ್ಯಂತ ಲಾಭದಾಯಕವೆಂಬುದು ತಜ್ಞರ ಅಭಿಪ್ರಾಯ. ಪೌಷ್ಟಿಕತೆಯಿಂದ ಸಮೃದ್ಧವಾಗಿರುವ ಈ ಹಣ್ಣು ದೇಹದ ವಿವಿಧ ಅಂಗಾಂಗಗಳಿಗೆ ಬಲ ನೀಡುತ್ತಿದ್ದು, ಹಲವಾರು ಆರೋಗ್ಯ ಸಮಸ್ಯೆಗಳನ್ನು ತಡೆಯುವಲ್ಲಿ ಸಹಕಾರಿ.

ಆರ್‌ಸಿಬಿ ಕಪ್ ಗೆದ್ದ ಖುಷಿಯಲ್ಲಿ ಟ್ವೀಟ್‌ ಮಾಡಿದ ವಿಜಯ್ ಮಲ್ಯಗೆ ಎಸ್‌ಬಿಐ ತಿರುಗುಬಾಣ

ಆರ್‌ಸಿಬಿ ಕಪ್ ಗೆದ್ದ ಖುಷಿಯಲ್ಲಿ ಟ್ವೀಟ್‌ ಮಾಡಿದ ವಿಜಯ್ ಮಲ್ಯಗೆ ಎಸ್‌ಬಿಐ ನಗುಮುಖದ ಇಮೋಜಿಯೊಂದಿಗೆ ಪ್ರತಿಕ್ರಿಯಿಸಿದೆ.

ಬೆವರಿಲ್ಲದೇ ಲಕ್ಷಾಂತರ ರೂಪಾಯಿ ಗಳಿಕೆ: ಮುಂಬೈನ ಆಟೋ ಚಾಲಕನ ಸ್ಮಾರ್ಟ್ ಐಡಿಯಾ

ಹೆಚ್ಚುವರಿ ಶ್ರಮವಿಲ್ಲದೇ ದುಡ್ಡು ಗಳಿಸುವವರ ಕಥೆಗಳು ಅಪರೂಪ, ಆದರೆ ಮುಂಬೈನ ಆಟೋ ಚಾಲಕನೊಬ್ಬ ತನ್ನ ಚತುರತನದಿಂದ ದಿನಕ್ಕೆ ಸಾವಿರಾರು ರೂ. ಗಳಿಸುತ್ತಿರುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಗ್ರಾಮ ಪಂಚಾಯತ್ ವ್ಯಾಪ್ತಿಗೂ ರೆರಾ ಕಡ್ಡಾಯ

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿಯೂ ಬಡಾವಣೆ ಅನುಮೋದನೆಗೆ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ (ರೆರಾ) ನೋಂದಣಿಯನ್ನು ಕಡ್ಡಾಯಗೊಳಿಸಿ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.