spot_img

ಒಂದೇ ಓವರ್​ನಲ್ಲಿ 18 ರನ್… ಬುಮ್ರಾಗೆ ಯದ್ವ ತದ್ವ ಚಚ್ಚಿದ ಸ್ಯಾಮ್ ಕೊನ್​ಸ್ಟಾಸ್

Date:

Australia vs India, 4th Test: ಮೆಲ್ಬೋರ್ನ್​ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ಮೂಲಕ ಸ್ಯಾಮ್ ಕೊನ್​ಸ್ಟಾಸ್ ಅಂತಾರಾಷ್ಟ್ರೀಯ ಕೆರಿಯರ್ ಆರಂಭಿಸಿದ್ದಾರೆ. ಅದು ಸಹ ಸ್ಪೋಟಕ ಅರ್ಧಶತಕ ಬಾರಿಸುವ ಮೂಲಕ ಎಂಬುದು ವಿಶೇಷ. ಅದರಲ್ಲೂ ಬುಮ್ರಾ ಅವರ ಒಂದೇ ಓವರ್​ನಲ್ಲಿ 18 ರನ್​ ಚಚ್ಚುವ ಮೂಲಕ ಸ್ಯಾಮ್ ಇದೀಗ ಇಡೀ ವಿಶ್ವದ ಗಮನ ಸೆಳೆದಿದ್ದಾರೆ.

ಮೆಲ್ಬೋರ್ನ್​​ನಲ್ಲಿ ನಡೆಯುತ್ತಿರುವ 4ನೇ ಟೆಸ್ಟ್ ಪಂದ್ಯದಲ್ಲಿ ಯುವ ದಾಂಡಿಗ ಸ್ಯಾಮ್ ಕೊನ್​ಸ್ಟಾಸ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಅದು ಸಹ ಯಾರ್ಕರ್ ಸ್ಪೆಷಲಿಸ್ಟ್ ಖ್ಯಾತಿಯ ವಿಶ್ವದ ನಂಬರ್ 1 ಬೌಲರ್ ಜಸ್​ಪ್ರೀತ್ ಬುಮ್ರಾ ಅವರನ್ನು ಟಾರ್ಗೆಟ್ ಮಾಡುವ ಮೂಲಕ ಎಂಬುದು ವಿಶೇಷ. ಎಂಸಿಜಿ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ಬ್ಯಾಟ್ ಬೀಸಿದ ಸ್ಯಾಮ್ ಕೊನ್​ಸ್ಟಾಸ್ ಆರಂಭದಲ್ಲೇ ಭಾರತೀಯ ಬೌಲರ್​ಗಳ ಬೆಂಡೆತ್ತಿದರು. ಸಿಡಿಲಬ್ಬರದ ಬ್ಯಾಟಿಂಗ್​ನೊಂದಿಗೆ ಟೆಸ್ಟ್ ಕೆರಿಯರ್ ಶುರು ಮಾಡಿದ ಸ್ಯಾಮ್ ಕೊನ್​ಸ್ಟಾಸ್ ಕೆಲವೇ ಕ್ಷಣಗಳಲ್ಲಿ ತಂಡದ ಸ್ಕೋರ್​​ ಅನ್ನು 50ರ ಗಡಿದಾಟಿಸಿದರು. ಅದರಲ್ಲೂ ಜಸ್​ಪ್ರೀತ್ ಬುಮ್ರಾ ಎಸೆದ 11ನೇ ಓವರ್​​ನಲ್ಲಿ ಸ್ಯಾಮ್ ಬರೋಬ್ಬರಿ 18 ರನ್​ಚಚ್ಚಿದ್ದರು.

ಬುಮ್ರಾ ಎಸೆದ ಈ ಓವರ್​ನ ಮೊದಲ ಎಸೆತದಲ್ಲಿ ಸ್ಯಾಮ್ ಕೊನ್​ಸ್ಟಾಸ್ ಫೋರ್ ಬಾರಿಸಿದರು. ದ್ವಿತೀಯ ಎಸೆತದಲ್ಲಿ ಯಾವುದೇ ರನ್ ಮೂಡಿಬಂದಿರಲಿಲ್ಲ. ಮೂರನೇ ಎಸೆತದಲ್ಲಿ 2 ರನ್ ಕಲೆಹಾಕಿದರು. ನಾಲ್ಕನೇ ಎಸೆತದಲ್ಲಿ ಲಾಂಗ್ ಆನ್​ನತ್ತ ಭರ್ಜರಿ ಸಿಕ್ಸ್ ಸಿಡಿಸಿದರು. ಐದನೇ ಎಸೆತದಲ್ಲಿ ಮತ್ತೊಂದು ಫೋರ್ ಬಾರಿಸಿದರು. ಇನ್ನು ಆರನೇ ಎಸೆತದಲ್ಲಿ 2 ರನ್ ಕಲೆಹಾಕಿದರು. ಈ ಮೂಲಕ ಚೊಚ್ಚಲ ಪಂದ್ಯದಲ್ಲೇ ಜಸ್​ಪ್ರೀತ್ ಬುಮ್ರಾ ಓವರ್​ನಲ್ಲಿ ಸ್ಯಾಮ್ ಕೊನ್​ಸ್ಟಾಸ್ 18 ರನ್​​ಗಳಿಸಿ ಅಬ್ಬರಿಸಿದರು.

ಅಬ್ಬರದೊಂದಿಗೆ ಸ್ಯಾಮ್ ಕೊನ್​ಸ್ಟಾಸ್ ಕೇವಲ 52 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇಂಟ್ರೆಸ್ಟಿಂಗ್ ವಿಷಯ ಎಂದರೆ ಸ್ಯಾಮ್ ಅರ್ಧಶತಕ ಪೂರೈಸುವಾಗ ಆಸ್ಟ್ರೇಲಿಯಾ ತಂಡದ ಸ್ಕೋರ್ 73 ರನ್​ಗಳು. ಅದರಲ್ಲಿ 52 ರನ್​ಗಳನ್ನು ಯುವ ದಾಂಡಿಗನೇ ಕಲೆಹಾಕಿದ್ದರು.

ಮೂಲಕ ಮೊದಲ ಪಂದ್ಯದಲ್ಲಿ ಎದುರಿಸಿದ 65 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 6 ಫೋರ್​​ಗಳೊಂದಿಗೆ 60 ರನ್​ ಬಾರಿಸಿ ರವೀಂದ್ರ ಜಡೇಜಾಗೆ ವಿಕೆಟ್ ಒಪ್ಪಿಸಿದರು. ಈ ಮೂಲಕ 19 ವರ್ಷದ ಸ್ಯಾಮ್ ಕೊನ್​ಸ್ಟಾಸ್ ಸ್ಪೋಟಕ ಇನಿಂಗ್ಸ್​ನೊಂದಿಗೆ ತಮ್ಮ ಟೆಸ್ಟ್ ಕೆರಿಯರ್ ಆರಂಭಿಸಿದ್ದು ವಿಶೇಷ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಐಪಿಎಲ್ ಗೆಲುವಿಗೆ ದೇವರ ಆಶೀರ್ವಾದ? ವಿರಾಟ್-ಅನುಷ್ಕಾ ಭಕ್ತಿಯ ಹಿನ್ನಲೆ ಇದೀಗ ಚರ್ಚೆಗೆ ಕಾರಣ

ಐಪಿಎಲ್ ಟ್ರೋಫಿ ಗೆದ್ದ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ ಭಾವುಕರಾದ ಕ್ಷಣಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಈ ಜೋಡಿ ಪಂದ್ಯಕ್ಕೂ ಮುನ್ನ ದೇವಾಲಯಗಳಿಗೆ ಭೇಟಿ ನೀಡಿ ಪ್ರಾರ್ಥಿಸಿದ್ದ ವಿಚಾರವೂ ಇದೀಗ ಮತ್ತೆ ಬೆಳಕಿಗೆ ಬಂದಿದೆ.

ಆರ್‌ಸಿಬಿ ಅಭಿಮಾನಿ ಮೂಲ್ಕಿ ಮೂಲದ ಅಕ್ಷತಾ ಕಾಲ್ತುಳಿತದಿಂದ ಸಾವು: ಟೀಶರ್ಟ್‌ನಿಂದ ಗುರುತು ಹಚ್ಚಿದ ಪತಿ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ ಸಿದ್ದಾಪುರದ ಅಕ್ಷತಾ (27) ಮೃತಪಟ್ಟಿದ್ದಾರೆ. ಆರ್‌ಸಿಬಿ ಟೀಶರ್ಟ್‌ನಿಂದ ಪತ್ನಿಯ ಗುರುತನ್ನು ಗಂಡ ಆಶಯ್ ಪತ್ತೆ ಹಚ್ಚಿದರು.

ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತದಲ್ಲಿ11 ಮಂದಿ ಮೃತ್ಯು : ಸಿಎಂ ಸಿದ್ದರಾಮಯ್ಯರವರಿಂದ ₹10 ಲಕ್ಷ ಪರಿಹಾರ ಘೋಷಣೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದು, ಸಿದ್ದರಾಮಯ್ಯಮೃತಪಟ್ಟ 11 ಮಂದಿ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ.

“ಇನ್ನು ಕೆಲದಿನ ಸಾಮಾಜಿಕ ಜಾಲತಾಣದಿಂದ ದೂರವಿರುತ್ತೇನೆ” : ಅಭಿಮಾನಿಗಳಿಗೆ ಶಾಕ್ ಕೊಟ್ಟ ಶೋಭಾ ಶೆಟ್ಟಿ

ಬಿಗ್ ಬಾಸ್ ಖ್ಯಾತಿಯ ನಟಿ ಹಾಗೂ ಕನ್ನಡ-ತೆಲುಗು ಚಿತ್ರರಂಗದಲ್ಲಿ ಚಿರಪರಿಚಿತರಾದ ಶೋಭಾ ಶೆಟ್ಟಿ ಇತ್ತೀಚೆಗೆ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ “ನಾನು ಕೆಲವು ದಿನಗಳವರೆಗೆ ಸಾಮಾಜಿಕ ಜಾಲತಾಣದಿಂದ ದೂರವಿರುತ್ತೇನೆ” ಎಂಬ ಪೋಸ್ಟ್ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ.