spot_img

ಒಂದೇ ಓವರ್​ನಲ್ಲಿ 18 ರನ್… ಬುಮ್ರಾಗೆ ಯದ್ವ ತದ್ವ ಚಚ್ಚಿದ ಸ್ಯಾಮ್ ಕೊನ್​ಸ್ಟಾಸ್

Date:

Australia vs India, 4th Test: ಮೆಲ್ಬೋರ್ನ್​ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ಮೂಲಕ ಸ್ಯಾಮ್ ಕೊನ್​ಸ್ಟಾಸ್ ಅಂತಾರಾಷ್ಟ್ರೀಯ ಕೆರಿಯರ್ ಆರಂಭಿಸಿದ್ದಾರೆ. ಅದು ಸಹ ಸ್ಪೋಟಕ ಅರ್ಧಶತಕ ಬಾರಿಸುವ ಮೂಲಕ ಎಂಬುದು ವಿಶೇಷ. ಅದರಲ್ಲೂ ಬುಮ್ರಾ ಅವರ ಒಂದೇ ಓವರ್​ನಲ್ಲಿ 18 ರನ್​ ಚಚ್ಚುವ ಮೂಲಕ ಸ್ಯಾಮ್ ಇದೀಗ ಇಡೀ ವಿಶ್ವದ ಗಮನ ಸೆಳೆದಿದ್ದಾರೆ.

ಮೆಲ್ಬೋರ್ನ್​​ನಲ್ಲಿ ನಡೆಯುತ್ತಿರುವ 4ನೇ ಟೆಸ್ಟ್ ಪಂದ್ಯದಲ್ಲಿ ಯುವ ದಾಂಡಿಗ ಸ್ಯಾಮ್ ಕೊನ್​ಸ್ಟಾಸ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಅದು ಸಹ ಯಾರ್ಕರ್ ಸ್ಪೆಷಲಿಸ್ಟ್ ಖ್ಯಾತಿಯ ವಿಶ್ವದ ನಂಬರ್ 1 ಬೌಲರ್ ಜಸ್​ಪ್ರೀತ್ ಬುಮ್ರಾ ಅವರನ್ನು ಟಾರ್ಗೆಟ್ ಮಾಡುವ ಮೂಲಕ ಎಂಬುದು ವಿಶೇಷ. ಎಂಸಿಜಿ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ಬ್ಯಾಟ್ ಬೀಸಿದ ಸ್ಯಾಮ್ ಕೊನ್​ಸ್ಟಾಸ್ ಆರಂಭದಲ್ಲೇ ಭಾರತೀಯ ಬೌಲರ್​ಗಳ ಬೆಂಡೆತ್ತಿದರು. ಸಿಡಿಲಬ್ಬರದ ಬ್ಯಾಟಿಂಗ್​ನೊಂದಿಗೆ ಟೆಸ್ಟ್ ಕೆರಿಯರ್ ಶುರು ಮಾಡಿದ ಸ್ಯಾಮ್ ಕೊನ್​ಸ್ಟಾಸ್ ಕೆಲವೇ ಕ್ಷಣಗಳಲ್ಲಿ ತಂಡದ ಸ್ಕೋರ್​​ ಅನ್ನು 50ರ ಗಡಿದಾಟಿಸಿದರು. ಅದರಲ್ಲೂ ಜಸ್​ಪ್ರೀತ್ ಬುಮ್ರಾ ಎಸೆದ 11ನೇ ಓವರ್​​ನಲ್ಲಿ ಸ್ಯಾಮ್ ಬರೋಬ್ಬರಿ 18 ರನ್​ಚಚ್ಚಿದ್ದರು.

ಬುಮ್ರಾ ಎಸೆದ ಈ ಓವರ್​ನ ಮೊದಲ ಎಸೆತದಲ್ಲಿ ಸ್ಯಾಮ್ ಕೊನ್​ಸ್ಟಾಸ್ ಫೋರ್ ಬಾರಿಸಿದರು. ದ್ವಿತೀಯ ಎಸೆತದಲ್ಲಿ ಯಾವುದೇ ರನ್ ಮೂಡಿಬಂದಿರಲಿಲ್ಲ. ಮೂರನೇ ಎಸೆತದಲ್ಲಿ 2 ರನ್ ಕಲೆಹಾಕಿದರು. ನಾಲ್ಕನೇ ಎಸೆತದಲ್ಲಿ ಲಾಂಗ್ ಆನ್​ನತ್ತ ಭರ್ಜರಿ ಸಿಕ್ಸ್ ಸಿಡಿಸಿದರು. ಐದನೇ ಎಸೆತದಲ್ಲಿ ಮತ್ತೊಂದು ಫೋರ್ ಬಾರಿಸಿದರು. ಇನ್ನು ಆರನೇ ಎಸೆತದಲ್ಲಿ 2 ರನ್ ಕಲೆಹಾಕಿದರು. ಈ ಮೂಲಕ ಚೊಚ್ಚಲ ಪಂದ್ಯದಲ್ಲೇ ಜಸ್​ಪ್ರೀತ್ ಬುಮ್ರಾ ಓವರ್​ನಲ್ಲಿ ಸ್ಯಾಮ್ ಕೊನ್​ಸ್ಟಾಸ್ 18 ರನ್​​ಗಳಿಸಿ ಅಬ್ಬರಿಸಿದರು.

ಅಬ್ಬರದೊಂದಿಗೆ ಸ್ಯಾಮ್ ಕೊನ್​ಸ್ಟಾಸ್ ಕೇವಲ 52 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇಂಟ್ರೆಸ್ಟಿಂಗ್ ವಿಷಯ ಎಂದರೆ ಸ್ಯಾಮ್ ಅರ್ಧಶತಕ ಪೂರೈಸುವಾಗ ಆಸ್ಟ್ರೇಲಿಯಾ ತಂಡದ ಸ್ಕೋರ್ 73 ರನ್​ಗಳು. ಅದರಲ್ಲಿ 52 ರನ್​ಗಳನ್ನು ಯುವ ದಾಂಡಿಗನೇ ಕಲೆಹಾಕಿದ್ದರು.

ಮೂಲಕ ಮೊದಲ ಪಂದ್ಯದಲ್ಲಿ ಎದುರಿಸಿದ 65 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 6 ಫೋರ್​​ಗಳೊಂದಿಗೆ 60 ರನ್​ ಬಾರಿಸಿ ರವೀಂದ್ರ ಜಡೇಜಾಗೆ ವಿಕೆಟ್ ಒಪ್ಪಿಸಿದರು. ಈ ಮೂಲಕ 19 ವರ್ಷದ ಸ್ಯಾಮ್ ಕೊನ್​ಸ್ಟಾಸ್ ಸ್ಪೋಟಕ ಇನಿಂಗ್ಸ್​ನೊಂದಿಗೆ ತಮ್ಮ ಟೆಸ್ಟ್ ಕೆರಿಯರ್ ಆರಂಭಿಸಿದ್ದು ವಿಶೇಷ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬೇಸಿಗೆಯಲ್ಲಿ ವಾಲ್ನಟ್ ಸೇವಿಸುವುದರ ಪ್ರಯೋಜನಗಳು!

ಬೇಸಿಗೆಯಲ್ಲಿ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ನೀರಿನಾಂಶದಿಂದ ಕೂಡಿದ ಹಣ್ಣುಗಳು ಮತ್ತು ತರಕಾರಿಗಳಷ್ಟೇ ಪ್ರಾಮುಖ್ಯತೆ ಡ್ರೈ ಫ್ರೂಟ್ಸ್‌ಗೂ ಇದೆ

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ನಿಷೇಧ: ವಿದ್ಯಾರ್ಥಿಗಳಿಗೆ ಅವಮಾನ, ನ್ಯಾಯಾಲಯದ ಮುಂದೆ ಪ್ರಕರಣ

ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ಯಜ್ಞೋಪವೀತ (ಜನಿವಾರ) ಧರಿಸಿದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ ಪ್ರಕರಣಗಳು ರಾಜ್ಯವ್ಯಾಪಿ ವಿವಾದವಾಗಿ ಪರಿಣಮಿಸಿದೆ.

ಸುಪ್ರೀಂಕೋರ್ಟ್ ಕಾನೂನು ರಚಿಸಿದರೆ ಸಂಸತ್ತಿನ ಅಗತ್ಯವೇನು? – ಬಿಜೆಪಿ ಸಂಸದ ನಿಶಿಕಾಂತ್ ದುಬೆಯ ವಿವಾದಾತ್ಮಕ ಹೇಳಿಕೆ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ನಿಶಿಕಾಂತ್ ದುಬೆ ಅವರು ಸುಪ್ರೀಂಕೋರ್ಟ್ ಕಾನೂನು ರಚನೆಯಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಿದರೆ ಸಂಸತ್ತನ್ನು ಮುಚ್ಚಿಬಿಡಬೇಕು ಎಂದು ವಾದಿಸಿದ್ದಾರೆ

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ವಿಚಿತ್ರ ವಿನಂತಿ: “ಪಾಸ್ ಮಾಡಿ ಸರ್, ನನ್ನ LOVE ನಿಮ್ಮ ಕೈಯಲ್ಲಿ!”

ಸ್ಎಸ್ಎಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆ ಮೌಲ್ಯಮಾಪನದ ಸಂದರ್ಭದಲ್ಲಿ ಒಂದು ವಿಚಿತ್ರ ಘಟನೆ ಬೆಳಗಾವಿಯ ಚಿಕ್ಕೋಡಿಯಲ್ಲಿ ನಡೆದಿದೆ.