spot_img

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53 ನೇ ಉಚಿತ ಸಾಮೂಹಿಕ ವಿವಾಹ

Date:

spot_img

ಸುದ್ದಿ:
53ನೇ ಉಚಿತ ಸಾಮೂಹಿಕ ವಿವಾಹವು 2025ರ ಮೇ 3ರಂದು ಸಂಜೆ 6.48ಕ್ಕೆ ಬೆಳ್ತಂಗಡಿಯ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಗೋಧೂಳಿ ಲಗ್ನದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದ ವರನಿಗೆ ಧೋತಿ, ಶಾಲು, ವಧುವಿಗೆ ಸೀರೆ, ಕುಪ್ಪಸ, ಮಂಗಳಸೂತ್ರ, ಹೂವಿನ ಮಾಲೆಯನ್ನು ನೀಡಲಾಗುವುದು. ಮದುವೆಯ ಎಲ್ಲ ಖರ್ಚು ವೆಚ್ಚವನ್ನು ಕ್ಷೇತ್ರವೇ ಭರಿಸಲಿದೆ. ಈ ಯೋಜನೆಯಲ್ಲಿ ಎರಡನೇ ಮದುವೆಗೆ ಅವಕಾಶವಿಲ್ಲ.

1972ರಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಪ್ರೇರಣೆಯಿಂದ ಆರಂಭವಾದ ಉಚಿತ ಸಾಮೂಹಿಕ ವಿವಾಹ ಸರಳ ವಿವಾಹ ಪದ್ಧತಿ, ವರದಕ್ಷಿಣೆಯನ್ನು ತಡೆಯುವಿಕೆಗೆ ಪ್ರೇರಣೆ ನೀಡುತ್ತದೆ. ಈ ಕಾರ್ಯಕ್ರಮದ ಮೂಲಕ ಇಲ್ಲಿಯವರೆಗೆ ಒಟ್ಟು 12,900 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 25, 2025.

ಹೆಚ್ಚಿನ ಮಾಹಿತಿಗಾಗಿ: ಆಸಕ್ತರು ದೂರವಾಣಿ ಸಂಖ್ಯೆ 08256-266644 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನಾಲ್ಕು ಬಾರಿ ಕರೆ ಮಾಡಿದರೂ ಉತ್ತರಿಸದ ಮೋದಿ: ವರದಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಇತ್ತೀಚಿನ ವಾರಗಳಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕನಿಷ್ಠ ನಾಲ್ಕು ಬಾರಿ ಕರೆ ಮಾಡಿದ್ದಾರೆ. ಆದರೆ, ಮೋದಿ ಕರೆಗಳನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ ಎಂದು ಜರ್ಮನ್‌ನ ಪ್ರಮುಖ ಪತ್ರಿಕೆಯೊಂದು ವರದಿ ಮಾಡಿದೆ.

ಬಾಳೆ ಹೂವು: ಆರೋಗ್ಯಕ್ಕೆ ಅಮೃತ, ರುಚಿಗೆ ರಾಜ

ರಂಭಾ ಪುಷ್ಪ, ಕದಲೀ ಪುಷ್ಪ ಎಂದು ಕರೆಯಲ್ಪಡುವ ಬಾಳೆ ಕುಂಡಿಗೆಯು ಔಷಧೀಯ ಗುಣಗಳನ್ನು ಹೊಂದಿದೆ.

ಪ್ರಿಯಕರನ ಜೊತೆ ಸೇರಿ ಅತ್ತೆಯನ್ನೇ ಕೊಂದ ಸೊಸೆ

ಪ್ರಿಯಕರನ ಜೊತೆ ಸೇರಿ ಸೊಸೆಯೊಬ್ಬಳು ರಾಗಿ ಮುದ್ದೆಯಲ್ಲಿ ನಿದ್ರೆ ಮಾತ್ರೆ ಬೆರೆಸಿ ಅತ್ತೆಯನ್ನು ಕೊಲೆಗೈದಿರುವ ಆಘಾತಕಾರಿ ಘಟನೆ ಅಜ್ಜಂಪುರ ತಾಲ್ಲೂಕಿನ ತಡಗ ಗ್ರಾಮದಲ್ಲಿ ನಡೆದಿದೆ.

ʻದಸರಾ ಸಾಂಸ್ಕೃತಿಕ ಆಚರಣೆ, ಧಾರ್ಮಿಕ ಆಚರಣೆಯಲ್ಲʼ : ಶೋಭಾ ಕರಂದ್ಲಾಜೆ ಹೇಳಿಕೆಗೆ ಡಿಕೆಶಿ ತಿರುಗೇಟು

ಬಾನು ಮುಷ್ತಾಕ್‌ ಚಾಮುಂಡಿಬೆಟ್ಟ ಹತ್ತುವಂತಿಲ್ಲ ಎಂಬ ಶೋಭಾ ಕರಂದ್ಲಾಜೆ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆಶಿ, ʻಚಾಮುಂಡಿಬೆಟ್ಟ ಕೇವಲ ಹಿಂದೂಗಳ ಆಸ್ತಿಯಲ್ಲ. ಎಲ್ಲ ಸಮುದಾಯದವರೂ ಅಲ್ಲಿಗೆ ಹೋಗುತ್ತಾರೆʼ ಎಂದು ಹೇಳಿದರು.