spot_img

ರಾಜ್ಯದಲ್ಲಿ 88 ಪಾಕ್ ಪ್ರಜೆಗಳು; ಭಟ್ಕಳದಲ್ಲಿ 10 ಮಂದಿ , ಮಂಗಳೂರಿನಲ್ಲಿ 3 ಮಂದಿ ಮಹಿಳೆಯರು

Date:

spot_img

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು 88 ಪಾಕಿಸ್ಥಾನಿ ಪ್ರಜೆಗಳು ನೆಲೆಸಿದ್ದಾರೆ. ಇವರಲ್ಲಿ ಅಲ್ಪಾವಧಿ ವೀಸಾ ಹೊಂದಿರುವವರು ಮುಂದಿನ ಎರಡು ದಿನಗಳಲ್ಲಿ ಭಾರತ ತೊರೆಯಬೇಕಾಗಿದೆ. ಪಹಲ್ಗಾಮ್ ಘಟನೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಇಲಾಖೆ ನಿರ್ದೇಶನದಂತೆ ವಿದೇಶಾಂಗ ಸಚಿವಾಲಯ ನೀಡಿದ ಆದೇಶದಂತೆ ಕ್ರಮ ಜರುಗಿಸಲಾಗುತ್ತಿದೆ.

ಉತ್ತರಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದು, ದೀರ್ಘಕಾಲಿಕ ವೀಸಾ ಹೊಂದಿರುವವರಿಗೆ ವಾಪಸಿನ ನಿಯಮ ಅನ್ವಯಿಸದು ಎಂದು ಸ್ಪಷ್ಟಪಡಿಸಿದರು. 88 ಪಾಕ್ ಪ್ರಜೆಯರಲ್ಲಿ ನಾಲ್ವರು ವೈದ್ಯಕೀಯ ಕಾರಣಕ್ಕಾಗಿ ಭಾರತಕ್ಕೆ ಆಗಮಿಸಿದ್ದಾಗಿ ತಿಳಿದುಬಂದಿದ್ದು, ಅವರಿಗೂ ನಾಲ್ಕು ದಿನಗಳಲ್ಲಿ ದೇಶ ತೊರೆಯುವಂತೆ ಸೂಚನೆ ನೀಡಲಾಗಿದೆ.

ಭಟ್ಕಳದಲ್ಲಿ 10 ಮಂದಿ ಮಹಿಳೆಯರು ಮತ್ತು ಅವರ ಮೂವರು ಮಕ್ಕಳು, ಹೊನ್ನಾವರದ ವಲ್ಕಿ ಹಾಗೂ ಕಾರವಾರದ ತೇಲಿರಾಂಜಿ ಗಲ್ಲಿಯಲ್ಲಿ ತಲಾ ಒಬ್ಬರು ನೆಲೆಸಿದ್ದಾರೆ. ಈ ಮಹಿಳೆಯರು ನವಾಯತ್ ಮುಸ್ಲಿಂ ಸಮುದಾಯಕ್ಕೆ ಸೇರಿದವರು. ಮಕ್ಕಳ ತಂದೆ ಭಾರತೀಯರು ಎಂಬ ಕಾರಣದಿಂದ ಅವರನ್ನು ವಾಪಸು ಕಳುಹಿಸುವ ಪ್ರಕ್ರಿಯೆಗೆ ಒಳಪಡುವುದಿಲ್ಲ.

ವಲ್ಕಿಯ ಯುವತಿಯನ್ನು ಪಾಕಿಸ್ಥಾನದಲ್ಲಿ ಮದುವೆ ಮಾಡಿ ತವರಿನಲ್ಲೇ ನೆಲೆಸಿಸಲಾಗಿದೆ. ಮತ್ತೊಬ್ಬರು ಪಾಕಿಸ್ಥಾನಿ ಪಾಸ್‌ಪೋರ್ಟ್ ಮೂಲಕ ಬಂದು ಭಾರತದ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಇವರಲ್ಲಿ ಒಬ್ಬರ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣವಿದ್ದು, ಜಾಮೀನು ದೊರೆತಿದೆ.

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಮೂರು ಪಾಕಿಸ್ಥಾನಿ ಮಹಿಳೆಯರು ವಾಸಿಸುತ್ತಿದ್ದಾರೆ. ಅವರು 12-13 ವರ್ಷಗಳ ಹಿಂದೆಯೇ ಮದುವೆಯಾಗಿ ನಗರಕ್ಕೆ ಬಂದು ನೆಲೆಸಿದ್ದಾರೆ. ಒಬ್ಬರು ವಾಮಂಜೂರು, ಮತ್ತೊಬ್ಬರು ಫಳ್ನೀರ್‌ನಲ್ಲಿ ವಾಸವಿದ್ದು, ಮತ್ತೊಬ್ಬರ ಬಗ್ಗೆ ಮಾಹಿತಿ ಶೀಘ್ರವೇ ಲಭಿಸಲಿದೆ.

ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ಮಾಹಿತಿ ನೀಡಿದ್ದು, ಅವರು ದೀರ್ಘಕಾಲಿಕ ವೀಸಾ ಯೋಜನೆಯಡಿ ಭಾರತಕ್ಕೆ ಬಂದಿದ್ದು, ವಿದೇಶಾಂಗ ಸಚಿವಾಲಯದ ಮುಂದಿನ ನಿರ್ದೇಶನದ ಮೇಲೆ ಕ್ರಮ ಜರುಗಿಸಲಾಗುವುದು ಎಂದರು. ಜಿಲ್ಲೆಯ ಬೇರೆ ಯಾವುದೇ ಪ್ರದೇಶದಲ್ಲಿ ಪಾಕಿಸ್ಥಾನಿ ಪ್ರಜೆಗಳು ನೆಲೆಸಿಲ್ಲವೆಂದು ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಉಪರಾಷ್ಟ್ರಪತಿ ಸ್ಥಾನಕ್ಕೆ ಕರ್ನಾಟಕ ಮೂಲದ ನ್ಯಾಯಮೂರ್ತಿ ಅಬ್ದುಲ್ ನಝೀರ್ ಹೆಸರು ಮುಂಚೂಣಿಯಲ್ಲಿ

ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ತಮ್ಮ ಸ್ಥಾನಕ್ಕೆ ಅನಿರೀಕ್ಷಿತವಾಗಿ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ, ಈ ಮಹೋನ್ನತ ಹುದ್ದೆಗೆ ಕರ್ನಾಟಕದ ಹೆಮ್ಮೆಯ ಪುತ್ರ, ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಸ್. ಅಬ್ದುಲ್ ನಝೀರ್ ಅವರ ಹೆಸರು ಪ್ರಬಲವಾಗಿ ಕೇಳಿಬರುತ್ತಿದೆ.

ಧರ್ಮಸ್ಥಳ ದುರಂತಗಳ ಆಳಕ್ಕೆ ಇಳಿಯಲು ಸಹಾಯವಾಣಿ ಸ್ಥಾಪನೆಗೆ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಶವ ವಿಲೇವಾರಿ ಪ್ರಕರಣವು ಇದೀಗ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಬೋಳದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಅಡ್ಡಿಪಡಿಸಿದ ಬಿಜೆಪಿ ಗ್ರಾ. ಪಂ ಸದಸ್ಯರ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

ಬಿಜೆಪಿ ಪಂಚಾಯತ್ ಸದಸ್ಯರ ದುರ್ನಡತೆಯ ವಿರುದ್ದ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಹಾಗೂ ಬೋಳ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಜಂಟಿ ಆಶ್ರಯದಲ್ಲಿ ಬೋಳ ಗ್ರಾಮ ಪಂಚಾಯತ್ ಕಚೇರಿ ಮುಂಬಾಗದಲ್ಲಿ ಪ್ರತಿಭಟನಾ ಸಭೆ ನಡೆಯಿತು.

ಎಂ.ಆರ್.ಐ. ಯಂತ್ರದಿಂದ ಲೋಹದ ಆಭರಣ ಧರಿಸಿದ ವ್ಯಕ್ತಿಯ ಸಾವು!

ವೈದ್ಯಕೀಯ ಜಗತ್ತಿನಲ್ಲಿ ಅಪರೂಪದ ಆದರೆ ಅತ್ಯಂತ ಗಂಭೀರವಾದ ದುರಂತವೊಂದು ಅಮೆರಿಕದ ನ್ಯೂಯಾರ್ಕ್‌ನಲ್ಲಿ ಸಂಭವಿಸಿದ್ದು, ಮ್ಯಾಗ್ನೆಟಿಕ್ ರೆಸೋನೆನ್ಸ್ ಇಮೇಜಿಂಗ್ (ಎಂ.ಆರ್.ಐ.) ಸ್ಕ್ಯಾನ್ ಯಂತ್ರದ ಪ್ರಬಲ ಕಾಂತೀಯ ಕ್ಷೇತ್ರಕ್ಕೆ ಸೆಳೆದುಕೊಂಡು ವ್ಯಕ್ತಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ