ನಾರಾಯಣಪೇಟೆಯಲ್ಲಿ ಪೈಶಾಚಿಕ ಕೃತ್ಯ: 10 ವರ್ಷದ ಮಗಳ ಮೇಲೆ ಕುಡುಕ ತಂದೆಯಿಂದ ಲೈಂಗಿಕ ದೌರ್ಜನ್ಯ!

Date:

spot_img

ನಾರಾಯಣಪೇಟೆ : “ಅಪ್ಪಾ ಬೇಡಪ್ಪಾ, ನನ್ನ ಹತ್ತಿರ ಬರಬೇಡಿ” ಎಂದು ಪುಟ್ಟ ಮಗಳು ಆರ್ತನಾಧ ಮಾಡಿದ್ದರೂ, ಕರುಣೆ ತೋರದ ಕುಡುಕ ತಂದೆ ತನ್ನದೇ 10 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪೈಶಾಚಿಕ ಘಟನೆ ತೆಲಂಗಾಣದ ನಾರಾಯಣಪೇಟೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಈ ಘಟನೆ ಜುಲೈ 25ರಂದು ಮರಿಕಲ್ ಮಂಡಲ ವ್ಯಾಪ್ತಿಯಲ್ಲಿ ನಡೆದಿದ್ದು, ಇಡೀ ಸಮಾಜವನ್ನು ಬೆಚ್ಚಿಬೀಳಿಸಿದೆ.

ಮನೆಯಲ್ಲೇ ನಿರ್ದಯಿ ಕೃತ್ಯ

ಸರ್ಕಾರಿ ಶಾಲೆಯಲ್ಲಿ ಐದನೇ ತರಗತಿ ಓದುತ್ತಿದ್ದ ಬಾಲಕಿ, ಇತ್ತೀಚೆಗೆ ನಾಯಿ ಕಚ್ಚಿದ ಹಿನ್ನೆಲೆಯಲ್ಲಿ ಹಾಸ್ಟೆಲ್ ಬಿಟ್ಟು ಮನೆಗೆ ಮರಳಿದ್ದಳು. ಜುಲೈ 25ರ ಮಧ್ಯಾಹ್ನ, ತಾಯಿ ದಿನಗೂಲಿ ಕೆಲಸಕ್ಕೆ ತೆರಳಿದ್ದಾಗ, ಮದ್ಯಪಾನ ಮಾಡಿದ್ದ ತಂದೆ ಮನೆಗೆ ಬಂದು ಮಗುವಿನ ಮೇಲೆ ಕಿರುಕುಳ ನೀಡಿದ್ದಾನೆ. ತನ್ನದೇ ಮಗಳ ಆಕ್ರಂದನ, ಬೇಡಿಕೆಗಳನ್ನು ನಿರ್ಲಕ್ಷಿಸಿ, ಆಕೆಯ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದಾನೆ.

ರಕ್ತಸ್ರಾವದಿಂದ ಬಳಲುತ್ತಿದ್ದ ಬಾಲಕಿ, ಆಸ್ಪತ್ರೆಗೆ ದಾಖಲು

ಬಾಲಕಿಯ ಕಿರುಚಾಟ ಕೇಳಿ ಓಡಿಬಂದ ಸ್ಥಳೀಯರಿಗೆ ಆಕೆ ರಕ್ತಸ್ರಾವದಿಂದ ನರಳುತ್ತಿರುವುದು ಕಂಡುಬಂದಿದೆ. ತಕ್ಷಣ ಆಕೆಯನ್ನು ಅಕ್ಕಪಕ್ಕದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪ್ರಾಥಮಿಕ ಚಿಕಿತ್ಸೆಯ ಬಳಿಕ ಪರಿಸ್ಥಿತಿ ಗಂಭೀರವಾಗಿದ್ದರಿಂದ ಮಾರಿಕಲ್ ಸರ್ಕಾರಿ ಆಸ್ಪತ್ರೆಗೆ, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮೆಹಬೂಬ್‌ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸರಿಂದ ತನಿಖೆ, ಆರೋಪಿ ಪತ್ತೆಗೆ ಬಲೆ

ವೈದ್ಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಪ್ರಕರಣ ದಾಖಲಿಸಿಕೊಳ್ಳುವಂತೆ ಕುಟುಂಬಕ್ಕೆ ಸೂಚಿಸಿದ್ದಾರೆ. ತಾಯಿ ನೀಡಿದ ದೂರಿನನ್ವಯ ಪೋಕ್ಸೋ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಘಟನೆ ಬಳಿಕ ಆರೋಪಿ ತಂದೆ ತಲೆಮರೆಸಿಕೊಂಡಿದ್ದು, ಪೊಲೀಸರು ಆತನ ಶೋಧ ಕಾರ್ಯ ನಡೆಸುತ್ತಿದ್ದಾರೆ. “ಬಾಳಿಗೆ ರಕ್ಷಕನಾಗಬೇಕಿದ್ದ ತಂದೆಯೇ ಹೇಗೆ ಇಂತಹ ಹೀನಕೃತ್ಯಕ್ಕೆ ಇಳಿಯಬಲ್ಲನು?” ಎಂಬ ಪ್ರಶ್ನೆ ಇಡೀ ಗ್ರಾಮದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ