spot_img

ಜೋಳಿಗೆ ಕಟ್ಟಿದ್ದ ಸೀರೆ ಕುತ್ತಿಗೆಗೆ ಸುತ್ತಿಕೊಂಡು ಶಿಶು ಸಾವನ್ನಪ್ಪಿದ ದಾರುಣ ಘಟನೆ

Date:

spot_img

ಉಡುಪಿ: ಉಡುಪಿ ತಾಲೂಕಿನ ಪುತ್ತೂರು ಗ್ರಾಮದ ನಿಟ್ಟೂರಿನಲ್ಲಿ ಜೋಳಿಗೆ ಕಟ್ಟಿದ್ದ ಸೀರೆ ಕುತ್ತಿಗೆಗೆ ಸುತ್ತಿಕೊಂಡು ಒಂದು ವರ್ಷದ ಹೆಣ್ಣು ಮಗು ದುರ್ಮರಣಕ್ಕೀಡಾಗಿರುವ ದಾರುಣ ಘಟನೆ ನಡೆದಿದೆ.

ಮೃತ ಶಿಶುವನ್ನು ಅಯ್ಯಪ್ಪ ಎಂಬವರ ಮಗಳು ಕಾಳಮ್ಮ (1) ಎಂದು ಗುರುತಿಸಲಾಗಿದೆ. ಅಯ್ಯಪ್ಪ ಕಳೆದ ಮೂರು ವರ್ಷಗಳಿಂದ ಉಡುಪಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಘಟನೆ ಸಂಭವಿಸಿದ ದಿನವಾದ ಬುಧವಾರ ಬೆಳಗ್ಗೆ ಅವರ ಪತ್ನಿ ಕಾಳಮ್ಮನನ್ನು ಜೋಳಿಯಲ್ಲಿ ಮಲಗಿಸಿ ಕೆಲಕಾಲ ಮನೆಯ ಕೆಲಸಕ್ಕಾಗಿ ಹೊರ ಹೋಗಿದ್ದರು.

ಮರುಕ್ಷಣ ಮನೆಗೆ ವಾಪಸಾಗಿ ಬಂದಾಗ ಜೋಳಿಗೆ ಕಟ್ಟಿದ್ದ ಸೀರೆ ಕಾಳಮ್ಮನ ಕುತ್ತಿಗೆಗೆ ಸುತ್ತಿಕೊಂಡು ಉಸಿರುಗಟ್ಟಿದ್ದ ದೃಶ್ಯ ಕಂಡುಬಂದಿದೆ. ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾದರೂ ಮಗುವನ್ನು ಉಳಿಸಲಾಗಲಿಲ್ಲ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗೂಗಲ್ ಮ್ಯಾಪ್​ನ ತಪ್ಪು ನಿರ್ದೇಶನ: ಮುಂಬೈನ ಕಂದಕಕ್ಕೆ ಜಾರಿದ ಕಾರು

ತಂತ್ರಜ್ಞಾನದ ಮುಂದುವರಿದ ಬೆಳವಣಿಗೆಗಳು ಜೀವನವನ್ನು ಸರಳಗೊಳಿಸಿರುವ ಜೊತೆಗೆ, ಕೆಲವು ಅನಿರೀಕ್ಷಿತ ಅಪಾಯಗಳಿಗೂ ಕಾರಣವಾಗುತ್ತಿವೆ.

ಜಾರ್ಖಂಡ್ ನ ಗುಮ್ಲಾ ಕಾಡಿನಲ್ಲಿ ಮೂವರು PLFI ನಕ್ಸಲರ ಎನ್‌ಕೌಂಟರ್, ಶಸ್ತ್ರಾಸ್ತ್ರ ವಶಕ್ಕೆ

ಖಚಿತ ಮಾಹಿತಿ ಮೇರೆಗೆ ಕಾರ್ಯಪ್ರವೃತ್ತರಾದ ಭದ್ರತಾ ಪಡೆಗಳು ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ನಡೆಸಿದ ಭೀಕರ ಕಾರ್ಯಾಚರಣೆಯಲ್ಲಿ PLFI ಸಂಘಟನೆಯ ಮೂವರು ನಕ್ಸಲರನ್ನು ಹತ್ಯೆ ಮಾಡುವಲ್ಲಿ ಯಶಸ್ವಿ

ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್‌ಗೆ ನೂತನ ಸಾರಥಿ: ಉಷಾ ಅಂಚನ್‌ಗೆ ಅಧ್ಯಕ್ಷ ಪಟ್ಟ

ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್‌ಗೆ ನೂತನ ಅಧ್ಯಕ್ಷರಾಗಿ ನೆಲ್ಯಾಡಿಯ ಹಿರಿಯ ಕಾಂಗ್ರೆಸ್ ನಾಯಕಿ, ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯೆ ಹಾಗೂ ಪ್ರಸ್ತುತ ದ.ಕ. ಜಿಲ್ಲಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಉಷಾ ಅಂಚನ್ ಅವರನ್ನು ನೇಮಕ ಮಾಡಲಾಗಿದೆ.

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಕಾಸರಗೋಡಿನ ಖ್ಯಾತ ಯೂಟ್ಯೂಬರ್ “ಸಾಲು ಕಿಂಗ್” ಬಂಧನ

ಕಾಸರಗೋಡು ಮೂಲದ ಜನಪ್ರಿಯ ಯೂಟ್ಯೂಬರ್ ಒಬ್ಬನನ್ನು ಅಪ್ರಾಪ್ತ ಬಾಲಕಿಗೆ ವಿವಾಹದ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕೋಝಿಕ್ಕೋಡ್‌ನ ಕೊಯಿಲಾಂಡಿ ಪೊಲೀಸರು ಬಂಧಿಸಿದ್ದಾರೆ