
ಬೆಂಗಳೂರು: ಧರ್ಮಸ್ಥಳ ಸುತ್ತಮುತ್ತ ನೂರಾರು ಶವಗಳನ್ನು ಹೂತು ಹಾಕಿದ್ದಾಗಿ ಆರೋಪಿಸಿ ತಾವೇ ಹೋರಾಟದ ಮೂಲಕ ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸುವಂತೆ ‘ಬುರುಡೆ ಗ್ಯಾಂಗ್’ ಇದೀಗ ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿರುವುದು ತೀವ್ರ ಅಚ್ಚರಿ ಮೂಡಿಸಿದೆ.
ಮಾಸ್ಕ್ ಮ್ಯಾನ್ ಚಿನ್ನಯ್ಯ ಅವರು ಈ ಇಡೀ ವಿಷಯ ಒಂದು ಷಡ್ಯಂತ್ರ ಎಂದು ಹೇಳಿಕೆ ನೀಡಿದ ಬಳಿಕ ‘ಬುರುಡೆ ಗ್ಯಾಂಗ್’ ಸಂಕಷ್ಟಕ್ಕೆ ಸಿಲುಕಿದೆ. ತಮ್ಮ ವಿರುದ್ಧ ಎಸ್ಐಟಿ ತನಿಖೆ ಮುಂದುವರೆಸಿರುವ ಹಿನ್ನೆಲೆಯಲ್ಲಿ ಬಂಧನದಿಂದ ಪಾರಾಗಲು ಈ ಗುಂಪು ಯತ್ನ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.
ಹೈಕೋರ್ಟ್ಗೆ ಮೊರೆ ಹೋದವರು ಯಾರು?
- ಅಂತರರಾಷ್ಟ್ರೀಯ ಮಟ್ಟದಲ್ಲಿ ಧರ್ಮಸ್ಥಳ ವಿರುದ್ಧ ಅಪಪ್ರಚಾರ ನಡೆದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ, ಜಯಂತ್, ಗಿರೀಶ್ ಮಟ್ಟಣ್ಣನವರ್, ವಿಠ್ಠಲ್ ಗೌಡ ಅವರು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
- ವಿಚಾರಣೆ: ಇಂದು (ಗುರುವಾರ) ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ನೇತೃತ್ವದ ಏಕಸದಸ್ಯ ಪೀಠದ ಮುಂದೆ ಈ ಅರ್ಜಿಯ ವಿಚಾರಣೆ ನಡೆಯಲಿದೆ.
ತಾವೇ ಹೋರಾಟ ಮಾಡಿ ಹಾಕಿಸಿದ್ದ ಅತ್ಯಂತ ಮಹತ್ವದ ದೂರನ್ನು ಇದೀಗ ವಜಾಗೊಳಿಸುವಂತೆ ಕೋರಿ ಬುರುಡೆ ಗ್ಯಾಂಗ್ ಹೈಕೋರ್ಟ್ ಮೆಟ್ಟಿಲೇರಿರುವುದು ಪ್ರಕರಣದಲ್ಲಿ ಹೊಸ ತಿರುವು ಪಡೆದಿದೆ.



































