spot_img

ಬನ್ನಂಜೆ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ ಯಶಸ್ವಿಯಾಗಿ ನಡೆಯಿತು

Date:

ಬನ್ನಂಜೆ: ದಿನಾಂಕ 7 ಜನವರಿ 25 ಮಂಗಳವಾರ ಸಮಯ ಬೆಳಿಗ್ಗೆ 9 :00 ರಿಂದ ಸಂಜೆ 5:00 ರವರೆಗೆ ಬನ್ನಂಜೆ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಉಡುಪಿ ಡಿಸ್ಟ್ರಿಕ್ಟ್ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಷನ್(ರಿ) ಮತ್ತು ಉಡುಪಿ ಡಿಸ್ಟ್ರಿಕ್ಟ್ ಸೈನೇಜ್ ಅಸೋಸಿಯೇಷನ್ (ರಿ) ಇವರ ಜಂಟಿ ಸಹಭಾಗಿತ್ವದಲ್ಲಿ ಡಾಕ್-ಸೇವಾ; ಜನ್-ಸೇವಾ-ಅಂಚೆ ಜನ ಸಂಪರ್ಕ ಅಭಿಯಾನದಡಿ ಆಧಾರ್ ನೋಂದಣಿ ಹಾಗು ತಿದ್ದುಪಡಿ ಶಿಬಿರವನ್ನು ಉಡುಪಿ ಅಂಚೆ ಕಛೇರಿಯ ಸಹಾಯಕ ಅಧೀಕ್ಷಕ ಶ್ರೀಯುತ ಕೃಷ್ಣರಾಜ ವಿಠಲಭಟ್ ದೀಪ ಬೆಳಗಿಸುವುದರ ಮುಖೇನ ಉದ್ಘಾಟಿಸಿ ಕಾರ್ಯಕ್ರಮದ ಯಶಸ್ವಿಗೆ ಶುಭಹಾರೈಸಿದರು..
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂಘದ ಗೌರವಾಧ್ಯಕ್ಷ ರಾದ ಶ್ರೀಯುತ ದಾಮೋದರ್ ಪೈ ಕುಂದಾಪುರ ರವರು ಕಾರ್ಯಕ್ರಮದ ಆಯೋಜನೆಯ ಉದ್ದೇಶದ ಕುರಿತು ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಫ್ಲೆಕ್ಸ್ ಅಸೋಸಿಯೇಶನ್ ಅಧ್ಯಕ್ಷರಾದ ಶ್ರೀಯುತ ದಿನೇಶ್ ಎಂ ಕೆ ಮೂಡಬಿದ್ರೆ ಉಡುಪಿ ಜಿಲ್ಲಾ ಸೈನೇಜ್ ಅಸೋಸಿಯೇಶನ್ ಅಧ್ಯಕ್ಷರಾದ ಶ್ರೀಯುತ ರಾಜೇಶ್ ಕುಮಾರ್ ಅಂಬಾಡಿ ಉಪಸ್ಥಿತರಿದ್ದರು..
ಜಂಟಿ ಸಂಘದ ಸದಸ್ಯರು ಹಾಗೂ ಸಾರ್ವಜನಿಕರು ತಮ್ಮ ಹೊಸ ಆಧಾರ್ ನೋಂದಣಿ /ಪರಿಷ್ಕರಣೆ ಹಾಗೂ ಎಲ್ಲಾ ರೀತಿಯ ತಿದ್ದುಪಡಿಗಳ ಲಾಭ ಪಡೆದು, ಅಭಿಯಾನವನ್ನು ಯಶಸ್ವಿಗೊಳಿಸಿದರು.ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ಹರೀಶ್ ಕಡೆಕಾರ್, ರಿಜ್ವಾನ್ ಕಟಪಾಡಿ, ಸಂದೀಪ್ ಮಣಿಪಾಲ್, ಸಂತೋಷ್ ಬ್ರಹ್ಮಾವರ್, ರಾಜೇಶ್ ಬೆಳ್ಮಣ್, ಅಮೃತ್ ಸಾಲಿಗ್ರಾಮ, ಮಧುಸೂಧನ್ ಮಲ್ಪೆ, ಲ್ಯಾನ್ಸಿ ಕಲ್ಮಾಡಿ ಮತ್ತಿತರರು ಉಪಸ್ಥಿತರಿದ್ದರು.
ಸಂಘದ ಪ್ರಧಾನ ಕಾರ್ಯದರ್ಶಿಯವರಾದ ಶ್ರೀಯುತ ಹರೀಶ್ ಅಮೀನ್ ಸಂತೆಕಟ್ಟೆ ಸ್ವಾಗತಿಸಿ, ಸಂಘಟನಾ ಕಾರ್ಯದರ್ಶಿ ಯವರಾದ ಶ್ರೀಯುತ ಸುನೀಲ್ ಬ್ರಹ್ಮಾವರ ಧನ್ಯವಾದ ತಿಳಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಆರ್‌ಸಿಬಿ ಅಭಿಮಾನಿ ಮೂಲ್ಕಿ ಮೂಲದ ಅಕ್ಷತಾ ಕಾಲ್ತುಳಿತದಿಂದ ಸಾವು: ಟೀಶರ್ಟ್‌ನಿಂದ ಗುರುತು ಹಚ್ಚಿದ ಪತಿ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ ಸಿದ್ದಾಪುರದ ಅಕ್ಷತಾ (27) ಮೃತಪಟ್ಟಿದ್ದಾರೆ. ಆರ್‌ಸಿಬಿ ಟೀಶರ್ಟ್‌ನಿಂದ ಪತ್ನಿಯ ಗುರುತನ್ನು ಗಂಡ ಆಶಯ್ ಪತ್ತೆ ಹಚ್ಚಿದರು.

ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತದಲ್ಲಿ11 ಮಂದಿ ಮೃತ್ಯು : ಸಿಎಂ ಸಿದ್ದರಾಮಯ್ಯರವರಿಂದ ₹10 ಲಕ್ಷ ಪರಿಹಾರ ಘೋಷಣೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದು, ಸಿದ್ದರಾಮಯ್ಯಮೃತಪಟ್ಟ 11 ಮಂದಿ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ.

“ಇನ್ನು ಕೆಲದಿನ ಸಾಮಾಜಿಕ ಜಾಲತಾಣದಿಂದ ದೂರವಿರುತ್ತೇನೆ” : ಅಭಿಮಾನಿಗಳಿಗೆ ಶಾಕ್ ಕೊಟ್ಟ ಶೋಭಾ ಶೆಟ್ಟಿ

ಬಿಗ್ ಬಾಸ್ ಖ್ಯಾತಿಯ ನಟಿ ಹಾಗೂ ಕನ್ನಡ-ತೆಲುಗು ಚಿತ್ರರಂಗದಲ್ಲಿ ಚಿರಪರಿಚಿತರಾದ ಶೋಭಾ ಶೆಟ್ಟಿ ಇತ್ತೀಚೆಗೆ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ “ನಾನು ಕೆಲವು ದಿನಗಳವರೆಗೆ ಸಾಮಾಜಿಕ ಜಾಲತಾಣದಿಂದ ದೂರವಿರುತ್ತೇನೆ” ಎಂಬ ಪೋಸ್ಟ್ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ.

ಆರ್‌ಸಿಬಿ ವಿಜಯೋತ್ಸವ ದುರಂತ: ಕಾಲ್ತುಳಿತದಲ್ಲಿ 11 ಅಭಿಮಾನಿಗಳ ಸಾವು – ವಿರಾಟ್ ಕೊಹ್ಲಿ ಹಾಗೂ ಆರ್‌ಸಿಬಿಯಿಂದ ಸಂತಾಪ

ಆರ್‌ಸಿಬಿ ವಿಜಯೋತ್ಸವ ದುರಂತದ ಕುರಿತು ಪ್ರತಿಕ್ರಿಯಿಸಿರುವ ಆರ್‌ಸಿಬಿ ತಾರೆ ವಿರಾಟ್ ಕೊಹ್ಲಿ, ಇನ್‌ಸ್ಟಾಗ್ರಾಮ್‌ನಲ್ಲಿ ಶೋಕದ ಭಾವನೆ ಹಂಚಿಕೊಂಡಿದ್ದು, “ಈ ದುಃಖದ ಸುದ್ದಿ ಕೇಳಿ ನಾನು ಶಬ್ದವಿಲ್ಲದವನಾಗಿದ್ದೇನೆ. ಹೃದಯ ಒಡೆದುಹೋಗಿದೆ” ಎಂದು ಬರೆದುಕೊಂಡಿದ್ದಾರೆ.