spot_img

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ : ಬೆಳ್ತಂಗಡಿಯಲ್ಲಿ ನಾಲ್ಕು ತಾಣಗಳಲ್ಲಿ ಸ್ಥಳ ಮಹಜರು

Date:

ಬೆಳ್ತಂಗಡಿ: ಮೇ 27ರಂದು ನಡೆದಿದ್ದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಪ್ರಮುಖ ಇಬ್ಬರು ಆರೋಪಿಗಳನ್ನು ಪೊಲೀಸರು ಜೂನ್ 2ರಂದು ಬೆಳ್ತಂಗಡಿಯ ನಾಲ್ಕು ಪ್ರಮುಖ ಸ್ಥಳಗಳಿಗೆ ಕರೆದುಕೊಂಡು ಹೋಗಿ ಸ್ಥಳ ಮಹಜರು ನಡೆಸಿದ್ದಾರೆ.

ಕೊಲೆ ಪ್ರಕರಣದಲ್ಲಿ ಬಂಧಿತರಾದ ಬಂಟ್ವಾಳ ತಾಲೂಕಿನ ಮುಂಡರ ಕೋಡಿ ನಿವಾಸಿ ದೀಪಕ್ (21) ಹಾಗೂ ತೆಂಕಬೆಳ್ಳೂರು ಗ್ರಾಮದ ಸುಮಿತ್ ಆಚಾರ್ಯ (27) ಎಂಬವರನ್ನು ಬಂಟ್ವಾಳ ಉಪವಿಭಾಗದ ಪೊಲೀಸ್ ಅಧಿಕಾರಿ ವಿಜಯ ಪ್ರಸಾದ್ ಅವರ ನೇತೃತ್ವದಲ್ಲಿ ಸ್ಥಳಗಳ ಪತ್ತೆ ಕಾರ್ಯಕ್ಕಾಗಿ ಬಿಗಿ ಭದ್ರತೆಯೊಂದಿಗೆ ಕರೆತರುವುದು ನಡೆದಿದ್ದು, ಗುರುವಾಯನಕೆರೆ ಅಂಗಡಿ, ಬೆಳ್ತಂಗಡಿ ಸಂತೆಕಟ್ಟೆ ಮೊಬೈಲ್ ಶಾಪ್, ಮೂರು ಮಾರ್ಗದ ಬಳಿ ಇರುವ ಚರಂಡಿ ಮತ್ತು ಉಜಿರೆಯ ನಿಡಿಗಲ್ ನದಿಯ ಬಳಿ ಸ್ಥಳ ಪರಿಶೀಲನೆ ನಡೆಸಲಾಯಿತು.

ಪೊಲೀಸ್ ತನಿಖೆಯ ಪ್ರಕಾರ, ಕೊಲೆ ಮಾಡಿದ ಬಳಿಕ ಆರೋಪಿಗಳು ಬೈಕ್‌ನಲ್ಲಿ ಬೆಳ್ತಂಗಡಿ ಕಡೆಗೆ ಪ್ರಯಾಣಿಸಿ, ಮಾರ್ಗಮಧ್ಯದಲ್ಲಿ ಹೊಸ ರೈನ್‌ಕೋಟ್ ಖರೀದಿಸಿ, ಮೊಬೈಲ್ ಶಾಪ್‌ನಲ್ಲಿ ಹೊಸ ಸಿಮ್ ಕಾರ್ಡ್ ಪಡೆದುಕೊಂಡು ನಂತರ ಆ ಸಿಮ್ ಅನ್ನು ಚರಂಡಿಗೆ ಎಸೆದು, ತಮ್ಮ ಮೊಬೈಲ್‌ ಫೋನ್ ಅನ್ನು ನಿಡಿಗಲ್ ನದಿಗೆ ಎಸೆದು, ಚಿಕ್ಕಮಗಳೂರು ಕಡೆಗೆ ಪರಾರಿಯಾದ ಕಾರಣ ಈ ಸ್ಥಳಗಳ ಮಹಜರು ಪ್ರಮುಖವಾಗಿತ್ತು.

ಪ್ರಕರಣದಲ್ಲಿ ಒಟ್ಟು ಐವರನ್ನು ಬಂಧಿಸಿರುವ ಪೊಲೀಸರು, ಅವರ ನಡವಳಿಕೆ ಪತ್ತೆ ಹಚ್ಚಲು ಸ್ಥಳ ಮಹಜರು ಪ್ರಕ್ರಿಯೆ ಮುಂದುವರಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ರಿ. ಇದರ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮ

ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ರಿ. ಇದರ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮವು ಅಧ್ಯಕ್ಷರಾದ ಶ್ರೀಯುತ ಎಮ್ ಕೆ ದಿನೇಶ್ ಮೂಡಬಿದ್ರಿಯವರ ಅಧ್ಯಕ್ಷತೆಯಲ್ಲಿ ದೀಪ ಬೆಳಗಿಸುದರ ಮುಖೇನ ಉದ್ಯಾವರ ನಿತ್ಯಾನಂದ ಸಭಾಂಗಣದಲ್ಲಿ ನಡೆಯಿತು.

ಹಿಂದೂ ಹೆಣ್ಣು ಮಕ್ಕಳ ಮೇಲೆ ಪುರುಷ ಪೇದೆಯ ದೌರ್ಜನ್ಯ ಎಷ್ಟು ಸಮಂಜಸ ? ? – ಶ್ರೀಮತಿ ರಮಿತಾ ಶೈಲೇಂದ್ರ ಕಾರ್ಕಳ

ಹಿಂದೂ ಹೆಣ್ಣು ಮಕ್ಕಳ ಮೇಲೆ ಪುರುಷ ಪೇದೆಯ ದೌರ್ಜನ್ಯ ಎಷ್ಟು ಸಮಂಜಸ ?ಎಂದು ಶ್ರೀಮತಿ ರಮಿತಾ ಶೈಲೇಂದ್ರ ಕಾರ್ಕಳರವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಮೇಲ್‌ನಲ್ಲಿ ಅಡಗಿರುವ 5 ಮಹತ್ವದ ವೈಶಿಷ್ಟ್ಯಗಳು: ಇಮೇಲ್ ಬಳಕೆ ಇನ್ನಷ್ಟು ಸುಲಭ

ಜಿಮೇಲ್‌ನಲ್ಲಿರುವ 5 ಮಹತ್ವದ ವೈಶಿಷ್ಟ್ಯಗಳು ನಮ್ಮ ದೈನಂದಿನ ಕೆಲಸವನ್ನು ಇನ್ನಷ್ಟು ಸುಲಭ ಮತ್ತು ಪರಿಣಾಮಕಾರಿಯಾಗಿಸುತ್ತವೆ.

ಕಾರ್ಕಳ‌ ಕಾಂಗ್ರೇಸ್ ಆಶ್ರಯದಲ್ಲಿ ನಾರಾಯಣಗುರು ಜಯಂತಿ

ಬ್ಲಾಕ್ ಕಾಂಗ್ರೆಸ್ ಸಹಯೋಗದಲ್ಲಿ ಪಳ್ಳಿ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಿತು