spot_img

27ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಮೇಘಾ ಶೆಟ್ಟಿ: ಗ್ರೀನ್ ಸೀರೆಯ ಸಖತ್ ಬೋಲ್ಡ್ ಲುಕ್ ವೈರಲ್!

Date:

spot_img

ಬೆಂಗಳೂರು: ಕನ್ನಡ ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟಿ ಮೇಘಾ ಶೆಟ್ಟಿ ಅವರು ಆಗಸ್ಟ್ 4ರಂದು ತಮ್ಮ 27ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರು ಮಾಡಿಸಿಕೊಂಡಿರುವ ಒಂದು ವಿಶೇಷ ಫೋಟೋಶೂಟ್‌ನ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅವರ ಸ್ಟನ್ನಿಂಗ್ ಲುಕ್‌ಗೆ ಅಭಿಮಾನಿಗಳು ಮನಸೋತಿದ್ದಾರೆ.

ನಟಿ ಮೇಘಾ ಶೆಟ್ಟಿ ಅವರು ಫಿಟ್‌ನೆಸ್, ಡಯೆಟ್, ಯೋಗ ಮತ್ತು ಸೌಂದರ್ಯದ ಬಗ್ಗೆ ಹೆಚ್ಚು ಕಾಳಜಿ ಹೊಂದಿದ್ದು, ಆಗಾಗ ತಮ್ಮ ಫೋಟೋಶೂಟ್ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಈ ಬಾರಿ ವೈರಲ್ ಆಗಿರುವ ಫೋಟೋಗಳಲ್ಲಿ ಅವರು ಹಸಿರು ಬಣ್ಣದ ಸೀರೆಯಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

ಯಾವುದೇ ವಿನ್ಯಾಸವಿಲ್ಲದ ಸರಳ ಹಸಿರು ಸೀರೆಯನ್ನು ಸ್ಲೀವ್‌ಲೆಸ್ ಬ್ಲೌಸ್‌ನೊಂದಿಗೆ ಧರಿಸಿ, ಕ್ಲಾಸಿಕ್ ಆಗಿಯೂ ಮಿಂಚಿದ್ದಾರೆ. ಅವರ ಅಂದಕ್ಕೆ ಈ ಸೀರೆ ಹೊಸ ಮೆರುಗು ನೀಡಿದಂತಿದೆ. ಸರಳ ಮೇಕಪ್, ಫ್ರೀ ಹೇರ್ ಸ್ಟೈಲ್ ಮತ್ತು ವಿಭಿನ್ನವಾದ ಮೂಗುತಿಯನ್ನು ಧರಿಸುವ ಮೂಲಕ ಅವರು ಹೆಚ್ಚು ಹೈಲೈಟ್ ಆಗಿದ್ದಾರೆ. ಸೀರೆಯನ್ನು ಕೂಡ ಬಹಳ ವಿಭಿನ್ನವಾಗಿ ತೊಟ್ಟಿದ್ದು, ಗ್ಲಾಮರಸ್ ಆಗಿ ಕಾಣುತ್ತಿದ್ದಾರೆ. ಹಸಿರು ಬಣ್ಣದ ಬ್ಯಾಕ್‌ಗ್ರೌಂಡ್‌ನಲ್ಲಿ ನೈಟ್ ಎಫೆಕ್ಟ್‌ನಲ್ಲಿ ಈ ಫೋಟೋಶೂಟ್ ಮಾಡಿಸಿಕೊಂಡಿದ್ದು, ‘ಮೂಗುತಿ ಸುಂದರಿ’ಯಂತೆ ಕ್ಲಾಸಿಕಲ್ ಆಗಿಯೂ ಕಾಣಿಸುತ್ತಿದ್ದಾರೆ. ಈ ಫೋಟೋಗಳು ಪಡ್ಡೆ ಹುಡುಗರ ನಿದ್ದೆಗೆಡಿಸಿವೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚಾಮರಾಜನಗರದಲ್ಲಿ ದುರಂತ: ಹಣ್ಣು ಎಂದು ವಿಷದ ಕಾಯಿ ತಿಂದ 12 ಮಕ್ಕಳು ಆಸ್ಪತ್ರೆಗೆ ದಾಖಲು!

ಯಳಂದೂರು ತಾಲ್ಲೂಕಿನ ಯರಿಯೂರು ಗ್ರಾಮದಲ್ಲಿ ಹಣ್ಣು ಎಂದು ತಿಳಿದು ವಿಷದ ಕಾಯಿ ತಿಂದಿದ್ದರಿಂದ 12 ಮಕ್ಕಳು ಅಸ್ವಸ್ಥಗೊಂಡ ಘಟನೆ ನಡೆದಿದೆ.

ಸೌದಿ ಅರೇಬಿಯಾದಲ್ಲಿ ಒಂದೇ ದಿನ 8 ಜನರಿಗೆ ಮರಣದಂಡನೆ

ಸೌದಿ ಅರೇಬಿಯಾದಲ್ಲಿ ಶನಿವಾರ ಒಂದೇ ದಿನ 8 ಮಂದಿಗೆ ಮರಣದಂಡನೆ ವಿಧಿಸಲಾಗಿದ್ದು, ಇದು ದೇಶದ ಇತಿಹಾಸದಲ್ಲೇ ಒಂದೇ ದಿನದಲ್ಲಿ ನೀಡಿದ ಅತಿ ಹೆಚ್ಚು ಶಿಕ್ಷೆಯಾಗಿದೆ.

ಬೆಂಗಳೂರು-ಕೋಲ್ಕತ್ತಾ ವಿಮಾನದಲ್ಲಿ ತಾಂತ್ರಿಕ ದೋಷ: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ!

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೋಲ್ಕತ್ತಾಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಕೂಡಲೇ ಅದನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ.

ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಕೋರ್ಟ್ ತೀರ್ಪಿಗೆ ತಲೆಬಾಗಬೇಕು ಎಂದ ನಿಖಿಲ್ ಕುಮಾರಸ್ವಾಮಿ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು ₹11.5 ಲಕ್ಷ ದಂಡ ವಿಧಿಸಿದ ಬೆನ್ನಲ್ಲೇ, ಈ ತೀರ್ಪಿನ ಕುರಿತು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.