ಅಹಮದಾಬಾದ್ ವಿಮಾನ ದುರಂತ: ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ !

Date:

spot_img

ಅಹಮದಾಬಾದ್: ದೇಶದ ಇತಿಹಾಸದಲ್ಲೇ ಅತ್ಯಂತ ಭೀಕರವಾದ ವಿಮಾನ ದುರಂತಗಳಲ್ಲಿ ಒಂದಾದ ಅಹಮದಾಬಾದ್‌ನಲ್ಲಿ ಗುರುವಾರ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ 265 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಲಂಡನ್‌ಗೆ ತೆರಳುತ್ತಿದ್ದ ಬೋಯಿಂಗ್ 787-8 ಗ್ರೀಮ್ ಲೈನರ್ ವಿಮಾನವು ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಅಹಮದಾಬಾದ್‌ನ ಮೆಡಿಕಲ್ ಕಾಲೇಜು ಕಾಂಪೌಂಡ್‌ಗೆ ಬಡಿದಿದೆ.

ಈ ಭೀಕರ ದುರಂತದಲ್ಲಿ ಭಾರತೀಯರೊಂದಿಗೆ ಬ್ರಿಟನ್, ಕೆನಡಾ ಮತ್ತು ಪೋರ್ಚುಗೀಸ್ ಪ್ರಜೆಗಳೂ ಸಾವನ್ನಪ್ಪಿದ್ದಾರೆ. ಓರ್ವ ಪ್ರಯಾಣಿಕ ಮಾತ್ರ ಪವಾಡಸದೃಶವಾಗಿ ಬದುಕುಳಿದಿದ್ದಾರೆ. ಮೃತರ ಪೈಕಿ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿಯವರೂ ಇದ್ದಾರೆ ಎಂಬ ಮಾಹಿತಿ ದೃಢವಾಗಿದೆ.

ಪ್ರಧಾನಿ ನರೇಂದ್ರ ಮೋದಿ ಜೂನ್ 13ರಂದು ಬೆಳಿಗ್ಗೆ 9 ಗಂಟೆಗೆ ಅಹಮದಾಬಾದ್ ತಲುಪಿದ್ದು, ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಅವರು ಗಾಯಾಳುಗಳನ್ನು ನೋಡಲು ಸಿವಿಲ್ ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದರು. ವಿಮಾನ ನಿಲ್ದಾಣದಲ್ಲಿ ನಾಗರಿಕ ವಿಮಾನಯಾನ ಸಚಿವ ರಾಮ್ ಎಂ ನಾಯ್ಡು ಹಾಗೂ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ಮೋದಿ ಅವರನ್ನು ಸ್ವಾಗತಿಸಿದರು.

ಘಟನೆ ನಡೆದ ತಕ್ಷಣವೇ ಪ್ರಧಾನಿ ಮೋದಿ ಉನ್ನತ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಸಮಗ್ರ ಮಾಹಿತಿ ಪಡೆದು, ತಕ್ಷಣದ ನೆರವು ಒದಗಿಸಲು ಸೂಚನೆ ನೀಡಿದ್ದರು. ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕೂಡ ಕಿಂಜರಪ್ಪು ಅವರನ್ನು ಸಂಪರ್ಕಿಸಿ ಮಾಹಿತಿ ಪಡೆದರು. ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೂ ಮಾಹಿತಿ ನೀಡಲಾಯಿತು.

ಅಮಿತ್ ಶಾ ಹಾಗೂ ನಾಯ್ಡು ಅಹಮದಾಬಾದ್‌ಗೆ ತುರ್ತಾಗಿ ತೆರಳಿದ್ದು, ಆಸ್ಪತ್ರೆಯಲ್ಲಿ ಗಾಯಾಳುಗಳ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದರು. ರಕ್ಷಣಾ ಕಾರ್ಯಾಚರಣೆ ಜೋರಾಗಿ ಸಾಗುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.