
ಹರಿಯಾಣದ ಸೋನಿಪತ್ನಲ್ಲಿ ಬಿಜೆಪಿ ನಾಯಕ ಮತ್ತು ಮುಂಡ್ಲಾನಾ ಮಂಡಲದ ಅಧ್ಯಕ್ಷ ಸುರೇಂದ್ರ ಜವಾಹ್ರಾ ಅವರನ್ನು ಹೋಳಿ ಹಬ್ಬದ ಸಂದರ್ಭದಲ್ಲಿ (ಮಾರ್ಚ್ 14) ಶುಕ್ರವಾರ ರಾತ್ರಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಈ ಘಟನೆ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ.
ವರದಿಗಳ ಪ್ರಕಾರ, ಜವಾಹ್ರಾ ಅವರು ತಮ್ಮ ಕುಟುಂಬ ಮತ್ತು ಪಕ್ಷದ ಕಾರ್ಯಕರ್ತರೊಂದಿಗೆ ಹೋಳಿ ಆಚರಿಸಿ ರಾತ್ರಿ ಸುಮಾರು 9 ಗಂಟೆಗೆ ಮನೆಗೆ ಮರಳುತ್ತಿದ್ದ ಸಮಯದಲ್ಲಿ ನೆರೆಹೊರೆಯವರೊಂದಿಗೆ ವಾಗ್ವಾದ ಉಂಟಾಗಿತ್ತು. ನಂತರ ಆರೋಪಿಗಳು ಪಿಸ್ತೂಲ್ ಹಿಡಿದು ಅವರನ್ನು ಬೆನ್ನಟ್ಟಿ, ಪಕ್ಕದ ಅಂಗಡಿಯೊಂದರಲ್ಲಿ ಮೂರು ಸುತ್ತು ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ.