spot_img

ಬಾಬಾ ಸಾಹೆಬ್ ಅಂಬೇಡ್ಕರ್ ಬಗ್ಗೆ ಅಮಿತ್ ಶಾ ನೀಡಿದ ಹೇಳಿಕೆ ಖಂಡನೀಯ.

Date:

ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಂಗ್ರೆಸ್ಸಿನ ಕುತಂತ್ರವನ್ನು ಬಯಲಿಗೆಳೆದಿದ್ದಾರೆಯೇ ಹೊರತು ಸಂವಿಧಾನ ಶಿಲ್ಪಿ ಅಂಬೇಡ್ಕರ್ ರವರನ್ನು ಅವಮಾನಿಸಿಲ್ಲ ಎಂದು ತನ್ನ ಸಚಿವನ ಪರವಾಗಿ ಪ್ರಧಾನಿ ಮೋದಿ ನೀಡಿರುವ ಹೇಳಿಕೆ ಪ್ರಧಾನಿ ಹುದ್ದೆಗೆ ಭೂಷಣವಲ್ಲ. ಬಾಬಾ ಸಾಹೆಬ್ ಅಂಬೇಡ್ಕರ್ ಬಗ್ಗೆ ಅಮಿತ್ ಶಾ ನೀಡಿದ ಹೇಳಿಕೆ ಖಂಡನೀಯ. ಇದು ಬಿಜೆಪಿ ನಾಯಕರ ಸಂವಿಧಾನ ವಿರೋಧಿ ನೀತಿಯನ್ನು ಪ್ರತಿಪಾದಿಸುತ್ತದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹೇಳಿದೆ.
ಇತಿಹಾಸ ಅರಿಯದವರು ಇತಿಹಾಸ ನಿರ್ಮಿಸಲು ಸಾಧ್ಯವಿಲ್ಲ. ಊರ ಹೊರಗಿರ ಬೇಕಾದವನನ್ನು ಊರೊಳಗೆ ಕರೆದು ಊರನ್ನು ಆಳುವ ಅವಕಾಶ ಮಾಡಿ ಕೊಟ್ಟದ್ದೇ ಅಂಬೇಡ್ಕರ್ ನೇತೃತ್ವ ದಲ್ಲಿ ರಚನೆಗೊಂಡ ಸಂವಿಧಾನ. ಅಂತಹ ಸಂವಿಧಾನವನ್ನೇ ಬದಲಿಸಲು ಹೊರಟವರಿಗೆ ಅಂಬೇಡ್ಕರ್ ಹೆಸರಿನ ಉಲ್ಲೇಖ ಅಪತ್ಯ ಆಗುವುದರಲ್ಲಿ ಆಶ್ಚರ್ಯ ಇಲ್ಲ. ದೇಶದಲ್ಲಿ ಶತಶತಮಾನ ಗಳಿಂದ ಸಾಮಾಜಿಕ ಸಮಾನತೆಯ ಸಮಸಮಾಜ ನಿರ್ಮಾಣಕ್ಕಾಗಿ ಮನುವಾದಿ ಸಂಸ್ಕೃತಿ ವರ್ಣಭೇದ ಲಿಂಗ ತಾರತಮ್ಯದ ವಿರುದ್ಧ ಹೋರಾಡುತ್ತಲೇ ಬಂದ ಪುಳೆ ಪೆರಿಯಾರ್ ನಾರಾಯಣಗುರು ಬಸವಾದಿ ಶರಣರ ಸಂತರ ಹೆಸರನ್ನು ಇತಿಹಾಸದ ಪುಟಗಳಿಂದ ಅಳಿಸಿ ಹಾಕಲು ಷಢ್ಯಂತ್ರ ನಡೆಸಿದವರು ಯಾರು ಎನ್ನುವುದನ್ನು ಅದೇ ಇತಿಹಾಸ ದಾಖಲಿಸಿಕೊಂಡಿದೆ. ದೆಹಲಿ ರಾಜಪಥ ಪರೇಡಿನಲ್ಲಿ ನಾರಾಯಣ ಗುರುಗಳ ಸ್ತಬ್ಧಚಿತ್ರ ನಿರಾಕರಣೆ ಇದಕ್ಕೊಂದು ಇತ್ತೀಚಿನ ಉದಾಹರಣೆ ಎಂದು ಕಾಂಗ್ರೆಸ್ ಹೇಳಿದೆ.
ಅಂಬೇಡ್ಕರ್ ರಚಿಸಿದ ಸಂವಿಧಾನದ ಮಾರ್ಗಸೂಚಿ ಮೌಲ್ಯದಡಿಯಲ್ಲಿ ಕಳೆದ ಸುಮಾರು 6 ದಶಕಗಳ ಕಾಲ ಪ್ರಧಾನಿ ನೆಹರೂ ಇಂದಿರಾ ಆದಿಯಾಗಿ ಪ್ರಧಾನಿ ಮನಮೋಹನ ಸಿಂಗ್ ವರೆಗಿನ ಆಡಳಿತಾವದಿಯಲ್ಲಿ ವಿಶ್ವದ ಅಭಿವೃದ್ಧಿಶೀಲ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ 3 ನೇ ಸ್ಥಾನದಲ್ಲಿತ್ತು. ಆದರೆ ಕಳೆದ 10ವರ್ಷಗಳ ಪ್ರಧಾನಿ ಮೋದಿ ನೇತೃತ್ವದ ಸಂವಿಧಾನವನ್ನೇ ಬದಲಿಸಲು ಹೊರಟ ಆಡಳಿತ ದೇಶವನ್ನು ಆರ್ಥಿಕವಾಗಿ 164 ನೇ ಸ್ಥಾನಕ್ಕೆ ಇಳಿಸಿತಷ್ಟೇ ಅಲ್ಲ 55ಲಕ್ಷ ಕೋಟಿ ಇದ್ದ ಸಾಲವನ್ನು ಸುಮಾರು 150 ಲಕ್ಷ ಕೋಟಿಗೆ‌ ಏರಿಸಿ ಯುವಜನರಲ್ಲಿ ನಿರುಧ್ಯೋಗ ತಾಂಡವವಾಡುವಂತೆ ಮಾಡಿತು. ಬಹು:ಶ ಇದನ್ನೇ ಅಭಿವೃದ್ಧಿ ಎಂದು ವ್ಯಾಖ್ಯಾನಿಸುವ ಮೋದಿ ಶಾ ಪರಿವಾರಕ್ಕೆ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಹೆಸರು ಉಲ್ಲೇಖ ಒಂದು ಹುಚ್ಚು ಮನಸ್ಥಿತಿಯಾಗಿ ಕಂಡು ಬಂದಿರುವುದರಲ್ಲಿ ಅಶ್ಚರ್ಯವಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನಚಂದ್ರ ಪಾಲ್ ನಕ್ರೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಕಟಣೆಗಾಗಿ:
Bipinchandra Pal Nakre,
Spokesperson,
Udupi District Congress,
UDUPI-Dist.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಲ್ನಾಡ್ ಐಕಾನ್ ಅಶ್ವತ್ಥ್ ಎಸ್.ಎಲ್. ಅವರಿಗೆ ಒಕ್ಕಲಿಗ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸನ್ಮಾನ

ಸೆಪ್ಟೆಂಬರ್ 2ರಂದು ನಡೆದ ಕೊಪ್ಪ ತಾಲ್ಲೂಕು ಒಕ್ಕಲಿಗರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಮುದಾಯದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜರುಗಿತು.

ಸೆಪ್ಟೆಂಬರ್ 12ರಂದು ನೀರೆ ಗ್ರಾಮ ಪಂಚಾಯತ್‌ನ ನೂತನ ಕಛೇರಿ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ

ನೀರೆ ಗ್ರಾಮ ಪಂಚಾಯತ್‌ನ ನೂತನ ಕಛೇರಿ ಕಟ್ಟಡ, ಸಭಾಭವನ, ಸಂಜೀವಿನಿ ಸಭಾಭವನ ಹಾಗೂ ಗ್ರಾಮ ಆಡಳಿತ ಅಧಿಕಾರಿಯವರ ಕಛೇರಿ ಉದ್ಘಾಟನಾ ಕಾರ್ಯಕ್ರಮ ದಿನಾಂಕ 12.09.2025ರಂದು ಬೆಳಿಗ್ಗೆ 9.30ಗೆ ಸರಿಯಾಗಿ ನೆರವೇರಲಿರುವುದು.

ಗುಣಮಟ್ಟದ ಬೋಧನೆಗೆ ಸಂದ ಗೌರವ: ಉಡುಪಿ ಜಿಲ್ಲೆಯ 15 ಶಿಕ್ಷಕರು ಪ್ರಶಸ್ತಿಗೆ ಆಯ್ಕೆ

ಗುಣಮಟ್ಟದ ಶಿಕ್ಷಣ ಮತ್ತು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ತಮ್ಮನ್ನು ತೊಡಗಿಸಿಕೊಂಡ ಉಡುಪಿ ಜಿಲ್ಲೆಯ 15 ಮಂದಿ ಶಿಕ್ಷಕರು, 2025-26ನೇ ಸಾಲಿನ ಜಿಲ್ಲಾ ಮಟ್ಟದ 'ಉತ್ತಮ ಶಿಕ್ಷಕ ಪ್ರಶಸ್ತಿ'ಗೆ ಭಾಜನರಾಗಿದ್ದಾರೆ.

ಜಿಎಸ್‌ಟಿ ಸುಧಾರಣೆ: ಮೋದಿ ಸರ್ಕಾರದಿಂದ ಜನಸಾಮಾನ್ಯರಿಗೆ ನವರಾತ್ರಿಯ ಶಕ್ತಿ, ದೀಪಾವಳಿಯ ಬೆಳಕು – ಶ್ರೀನಿಧಿ ಹೆಗ್ಡೆ

ನಾಲ್ಕು ಸ್ಲಾಬ್ ಗಳಲ್ಲಿದ್ದ ಜಿ.ಎಸ್.ಟಿ ತೆರಿಗೆ ಮಿತಿಯನ್ನು ಎರಡು ಸ್ಲಾಬ್ ಮಾಡುವ ಮೂಲಕ ಔಷಧಿ, ಜೀವವಿಮೆಯೂ ಸೇರಿದಂತೆ ಹಲವು ಅಗತ್ಯ ವಸ್ತುಗಳ ಮೇಲಿನ ತೆರಿಗೆ ಕಡಿಮೆ ಮಾಡಲಾಗಿದೆ.