
ಉತ್ತರ ಪ್ರದೇಶದ ಬ್ರಹ್ಮಪುರಿಯ ಇಂದಿರಾ ನಗರದಲ್ಲಿ ಪತ್ನಿಯೊಬ್ಬಳು ಪತಿಯನ್ನು ಕೊಂದು, ದೇಹವನ್ನು ತುಂಡಾಗಿ ಕತ್ತರಿಸಿ ಡ್ರಮ್ನಲ್ಲಿ ಸಿಮೆಂಟ್ ಹಾಕಿ ಮುಚ್ಚಿಟ್ಟಿರುವ ಘಟನೆ ಬೆಳಕಿಗೆ ಬಂದಿದೆ.
ಖಾಸಗಿ ಹಡಗು ಕಂಪನಿಯ ಉದ್ಯೋಗಿ ಸೌರಭ್ ರಜಪೂತ್ (29) ಮೃತ ವ್ಯಕ್ತಿಯಾಗಿದ್ದು, ಅವರು ಮಾರ್ಚ್ 4 ರಂದು ನಾಪತ್ತೆಯಾಗಿದ್ದರು. ಪತ್ನಿ ಮುಸ್ಕಾನ್ (27) ಮತ್ತು ಆಕೆಯ ಪ್ರಿಯಕರ ಸಾಹಿಲ್ (25) ಅವರು ಸೇರಿಕೊಂಡು ಈ ಕೊಲೆ ನಡೆಸಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ.
ಮಾ. 4ರಂದು ಸೌರಭ್ನನ್ನು ಚಾಕುವಿನಿಂದ ಇರಿದು ಕೊಂದು, ಆತನ ದೇಹವನ್ನು ತುಂಡಾ ತುಂಡಾಗಿ ಕತ್ತರಿಸಿ ಡ್ರಮ್ನಲ್ಲಿ ತುಂಬಿ ಸಿಮೆಂಟ್ ಹಾಕಿ ಮುಚ್ಚಿದ್ಧಾರೆ. ಬಳಿಕ ಪತ್ನಿ ಮುಸ್ಕಾನ್, ಪತಿಯ ಫೋನ್ನಿಂದ ಕುಟುಂಬಸ್ಥರಿಗೆ ಸಂದೇಶ ಕಳುಹಿಸಿ ತಪ್ಪುದಾರಿ ತೋರಿಸಲು ಯತ್ನಿಸಿದ್ದಳು.
ಈ ವೇಳೆ ಮುಸ್ಕಾನ್ ತನ್ನ ಪ್ರಿಯಕರ ಸಾಹಿಲ್ ಜೊತೆ ಪ್ರವಾಸಕ್ಕೆ ತೆರಳಿದ್ದಳು. ಸದ್ಯ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.