spot_img

ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ಅನಿಲ್ ಕುಂಬ್ಳೆ ನೇಮಕ : ಸಚಿವ ಈಶ್ವರ ಖಂಡ್ರೆ ಘೋಷಣೆ

Date:

ಬೆಂಗಳೂರು: ರಾಜ್ಯದ ಅರಣ್ಯ ಇಲಾಖೆಗಾಗಿ ಖ್ಯಾತ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನೇಮಕ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, “ಅನಿಲ್ ಕುಂಬ್ಳೆ ಅವರಿಗೆ ವನ್ಯಜೀವಿಗಳು ಹಾಗೂ ಅರಣ್ಯಗಳ ಬಗ್ಗೆ ಅಪಾರ ಕಾಳಜಿ ಇದೆ. ಈ ನಿಟ್ಟಿನಲ್ಲಿ ಅವರು ಯಾವುದೇ ಸಂಭಾವನೆ ಸ್ವೀಕರಿಸದೆ ಈ ಹೊಣೆಗಾರಿಕೆಯನ್ನು ನಿರ್ವಹಿಸಲು ಸಮ್ಮತಿಸಿದ್ದಾರೆ” ಎಂದು ತಿಳಿಸಿದ್ದಾರೆ.

ವನ್ಯಜೀವಿ ಸಂರಕ್ಷಣೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ನೇಮಕಾತಿ ಮಾಡಲಾಗುತ್ತಿದೆ. ಖ್ಯಾತಿ ಹಾಗೂ ಜನಪ್ರೀಯತೆ ಹೊಂದಿರುವ ಕುಂಬ್ಳೆ ನೇಮಕಾತಿಯಿಂದ ಅರಣ್ಯ ರಕ್ಷಣೆ ಹಾಗೂ ವನ್ಯಜೀವಿ ಸಂರಕ್ಷಣೆಗೆ ಸಹಕಾರಿಯಾಗಲಿದೆ ಎಂದು ಸಚಿವರು ಅಭಿಪ್ರಾಯಪಟ್ಟರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಎನ್‌ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಎಸಿಪಿಗೆ ಭಡ್ತಿ!

ಭೂಗತ ಜಗತ್ತಿಗೆ ಸಿಂಹಸ್ವಪ್ನವಾಗಿದ್ದ ಮುಂಬೈನ ಕ್ರೈಂ ಬ್ರಾಂಚ್‌ ಅಧಿಕಾರಿ ದಯಾ ನಾಯಕ್‌ ಅವರಿಗೆ ಎಸಿಸಿಪಿ (ಅಸಿಸ್ಟಂಟ್ ಕಮಿಷನರ್ ಆಫ್ ಪೊಲೀಸ್) ಹುದ್ದೆಗೆ ಭಡ್ತಿ ಲಭಿಸಿದೆ.

ಮಂಗಳೂರು ಎನ್‌ಎಚ್ 66ರಲ್ಲಿ ಭೀಕರ ಅಪಘಾತ: ಕಾರು ರಾಜ ಕಾಲುವೆಗೆ ಬಿದ್ದು ಫೋಟೋಗ್ರಾಫರ್ ಸಾವು

ರಾಷ್ಟ್ರೀಯ ಹೆದ್ದಾರಿ 66ರ ಕೋಡಿಕಲ್ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ನಿಯಂತ್ರಣ ತಪ್ಪಿ ರಾಜ ಕಾಲುವೆಗೆ ಬಿದ್ದ ಪರಿಣಾಮವಾಗಿ ಕಾರು ಚಾಲಕನಾಗಿದ್ದ ಫೋಟೋಗ್ರಾಫರ್ ಸಾವನ್ನಪ್ಪಿದ್ದಾರೆ.

ನಿಮ್ಮ ಹಿತ್ತಲಲ್ಲೇ ಅರಿಯದ ಅಚ್ಚರಿಯ ಔಷಧ! – ತುಂಬೆ ಗಿಡದ ಆರೋಗ್ಯ ಗುಣಗಳು

ಬಿಳಿ ತುಂಬೆ (White Balsam) ಗಿಡ ವಿಶಿಷ್ಟವಾದ ಆರೋಗ್ಯ ಗುಣಗಳನ್ನು ಹೊಂದಿದ್ದು, ಜ್ವರದಿಂದ ಹಿಡಿದು ತಲೆನೋವಿನವರೆಗಿನ ಸಮಸ್ಯೆಗಳಿಗೆ ಮನೆಮದ್ದಾಗಿ ಬಳಸಬಹುದಾಗಿದೆ.

ಕೊಲೆಗಳಿಗೆ ಬಿಜೆಪಿ-ಸಂಘ ಪರಿವಾರದವರೇ ಕಾರಣ! – ದಿನೇಶ್ ಗುಂಡೂರಾವ್

ಮಂಗಳೂರಿನಲ್ಲಿ ನಡೆಯುತ್ತಿರುವ ಸರಣಿ ಕೊಲೆಗಳಿಗೆ ಬಿಜೆಪಿ ಮತ್ತು ಸಂಘ ಪರಿವಾರದವರೇ ಕಾರಣ ಎಂದು ತೀವ್ರ ಟೀಕೆ ಮಾಡಿದ್ದಾರೆ.