spot_img

ಅಂಕೋಲಾ ಶಿರೂರಿನ ಭೂಕುಸಿತ ಪ್ರಕರಣ: ಕೊನೆಗೂ ಗುತ್ತಿಗೆದಾರ ಕಂಪನಿಯ ವಿರುದ್ಧ ಪ್ರಕರಣ ದಾಖಲು!

Date:

spot_img

ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಕಳೆದ ವರ್ಷದ ಜುಲೈನಲ್ಲಿ ಸಂಭವಿಸಿದ ಭೂಕುಸಿತಕ್ಕೆ ಸಂಬಂಧಿಸಿದಂತೆ ಕೊನೆಗೂ ಗುತ್ತಿಗೆದಾರ ಕಂಪನಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಭೂಕುಸಿತದಲ್ಲಿ 11 ಮಂದಿ ಮೃತಪಟ್ಟಿದ್ದರು, ಆದರೂ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿರಲಿಲ್ಲ.

ಜಿಲ್ಲಾ ಎಸ್‌ಪಿ ನಾರಾಯಣ್ ಅವರ ಸೂಚನೆಯ ಮೇರೆಗೆ, ವೃತ್ತ ಪೊಲೀಸ್ ಇನ್ಸ್‌ಪೆಕ್ಟರ್ ಚಂದ್ರಶೇಖರ್ ಮಠಪತಿ ಅವರು ಐಆರ್‌ಬಿ ಅಧಿಕಾರಿಗಳಾದ ರವೀಂದ್ರ ಡಿ. ಮಹೇಶ್ಕರ್, ರವೀಂದ್ರ ದುರಿವಾಲ್, ಜಶ್ ರಾಮ್ರೆಸ್, ದೀಪಾಲಿ ಹೌಸ್ಕರ್, ವಿಜಯ್ ಭಟ್, ಬಜರಂಗ್ ಲಾಲ್ ಗುಪ್ತಾ, ಸಂದೀಪ್ ಜೇ ಸಾಹ್, ಪೃಥ್ವಿ ಸವಾಲಾ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ನ್ಯಾಯಾಲಯದ ಆದೇಶದಿಂದ ಪ್ರಭಾವ:
ಈ ಸಂಬಂಧ ನ್ಯಾಯಾಲಯದ ಮೊರೆ ಹೋಗಲಾಗಿತ್ತು, ಮತ್ತು ಫೆಬ್ರವರಿ 24 ರಂದು ಅಂಕೋಲಾ ನ್ಯಾಯಾಲಯವು ಗುತ್ತಿಗೆದಾರರ ವಿರುದ್ಧ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿತ್ತು. ಆದರೆ, ಎರಡು ದಿನಗಳ ಹಿಂದೆ ಈ ಆದೇಶ ಪಾಲಿಸದ ಕಾರಣ ಸಾರ್ವಜನಿಕರು ಅಂಕೋಲಾ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದರು.

ಈ ಸಂದರ್ಭ, ಮತ್ತೆ ನ್ಯಾಯಾಲಯದ ಮೊರೆ ಹೋಗುವುದಾಗಿ ಸಾರ್ವಜನಿಕರು ಎಚ್ಚರಿಕೆ ನೀಡಿದ ಬೆನ್ನಲ್ಲೇ, ಜಿಲ್ಲಾ ಎಸ್‌ಪಿ ಗುತ್ತಿಗೆದಾರ ಕಂಪನಿಯ ವಿರುದ್ಧ ಪ್ರಕರಣ ದಾಖಲಿಸುವಂತೆ ಸೂಚನೆ ನೀಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಜ್ಞಾನಸುಧಾ : ಮೌಲ್ಯಸುಧಾ-38ರಲ್ಲಿ ‘ಕಾರ್ಗಿಲ್ ವಿಜಯ ದಿವಸ’

ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ಮೌಲ್ಯಸುಧಾ ಮಾಲಿಕೆ-38ನ್ನು ಕಾರ್ಗಿಲ್ ವಿಜಯದಿವಸದ ಶುಭಸಂದರ್ಭದಲ್ಲಿ ಆಯೋಜಿಸಲಾಗಿದೆ.

ಪುತ್ತಿಗೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರದ ಪ್ರಯುಕ್ತ ಇಂದಿನಿಂದ ಆರಂಭಗೊಂಡ ಅಷ್ಟಮಂಗಲ ಪ್ರಶ್ನಾ ಚಿಂತನೆ

ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಜೀರ್ಣೋದ್ದಾರ ಮಾಡಬೇಕೆಂದು ಶ್ರೀ ಪುತ್ತಿಗೆ ಮಠ , ಅರ್ಚಕರು ಮತ್ತು ಊರಿನ ಹತ್ತು ಸಮಸ್ತರ ಸಹಭಾಗಿತ್ವದಲ್ಲಿ ಇಂದು ದಿನಾಂಕ 25.07.2025ರಂದು ಶ್ರೀ ಕ್ಷೇತ್ರದಲ್ಲಿ ಅಷ್ಟ ಮಂಗಳ ಪ್ರಶ್ನೆಯು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಆರಂಭಗೊಂಡಿತು.

ಕಮಲ್ ಹಾಸನ್ ರಾಜ್ಯಸಭೆ ಪ್ರವೇಶ: ತಮಿಳಿನಲ್ಲಿ ಪ್ರಮಾಣ ವಚನ ಸ್ವೀಕಾರ!

ಬಹುಭಾಷಾ ನಟ ಕಮಲ್ ಹಾಸನ್ ಅವರು ಶುಕ್ರವಾರ (ಜುಲೈ 25) ಮೊದಲ ಬಾರಿಗೆ ರಾಜ್ಯಸಭೆಗೆ ಪ್ರವೇಶಿಸಿದ್ದು, ತಮಿಳು ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಮದ್ಯ, ತಂಬಾಕು, ತಂಪು ಪಾನೀಯಗಳ ಬೆಲೆ ಶೇ.50ರಷ್ಟು ಹೆಚ್ಚಳಕ್ಕೆ WHO ಕರೆ: ಕುಡುಕರಿಗೆ ಮತ್ತೊಂದು ಶಾಕ್!

ಕರ್ನಾಟಕದಲ್ಲಿ ಮದ್ಯದ ಬೆಲೆ ಈಗಾಗಲೇ ಗಣನೀಯವಾಗಿ ಏರಿಕೆ ಕಂಡಿದೆ. ಕಳೆದ ಎರಡು ವರ್ಷಗಳಲ್ಲಿ ಮೂರು ಬಾರಿ ಬೆಲೆ ಹೆಚ್ಚಳವಾಗಿದ್ದು, ಬಿಯರ್ ದರವೂ ಏರಿಕೆಯಾಗಿದೆ.