
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನೆಲೆ ಪುನೀತ್ ಕೆರೆಹಳ್ಳಿಯವರ ವಿರುದ್ಧ ಮಂಗಳೂರಿನ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೂನ್ 3 ರಂದು ರಾತ್ರಿ 8 ಗಂಟೆ ಸುಮಾರಿಗೆ ಸೋಶಿಯಲ್ ಮೀಡಿಯಾ ಮಾನಿಟರಿಂಗ್ ಕಾರ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿ ಫೇಸ್ಬುಕ್ ಪರಿಶೀಲನೆ ನಡೆಸುತ್ತಿದ್ದ ಸಂದರ್ಭದಲ್ಲಿ ಪುನೀತ್ ಕೆರೆಹಳ್ಳಿ ಅವರ ಖಾತೆಯಲ್ಲಿ ಪ್ರಕಟಗೊಂಡಿದ್ದ ಒಂದು ವಿವಾದಾತ್ಮಕ ರೀಲ್ಸ್ ಮೇಲೆ ದೂರು ದಾಖಲಿಸಲಾಗಿದೆ. ಈ ರೀಲ್ಸ್ನಲ್ಲಿ ಅವರು ಬೆಂಗಳೂರಿನ ಕೆಲ ಪ್ರದೇಶಗಳ ಹೆಸರನ್ನು ಉಲ್ಲೇಖಿಸಿ ವಿವಾದ ಉಂಟುಮಾಡುವ ರೀತಿಯ ಹೇಳಿಕೆ ನೀಡಿದ್ದಾರೆ ಎಂಬುದು ದೂರಿನಲ್ಲಿ ಉಲ್ಲೇಖವಾಗಿದೆ.
ಈ ಕುರಿತು ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಮತ್ತು ಮುಂದಿನ ತನಿಖೆ ನಡೆಯುತ್ತಿದೆ.