spot_img

ಕಾರ್ಕಳದ ಡಾ ಟಿ ಎಂ ಎ ಪೈ ರೋಟರಿ ಆಸ್ಪತ್ರೆಯಲ್ಲಿ ಹೊಸ ವೈದ್ಯಕೀಯ ಸೇವೆಗಳ ಸೇರ್ಪಡೆ

Date:

ಕಾರ್ಕಳ, 7 ಏಪ್ರಿಲ್ 2025: ಕಾರ್ಕಳದ ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಹೊಸ ವೈದ್ಯಕೀಯ ಸೇವೆಗಳನ್ನು ಆರಂಭಿಸಲಾಗಿದೆ. ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಎಂಡೋಕ್ರಿನೊಲೊಜಿ (ಅಂತಃಸ್ರಾವಶಾಸ್ತ್ರ) ತಜ್ಞರಾದ ಡಾ. ಅನುದೀಪ್ ಗದ್ದಂ ಮತ್ತು ಡಾ. ಅವಿವರ್ ಅವಸ್ಥಿ ಅವರು ಪ್ರತೀ ಬುಧವಾರ ಮದ್ಯಾಹ್ನದ ತನಕ ಸಮಾಲೋಚನೆಗೆ ಲಭ್ಯವಿದ್ದಾರೆ. ಮಧುಮೇಹ, ಥೈರಾಯ್ಡ್ ಅಸ್ವಸ್ಥತೆಗಳು ಮತ್ತು ಹಾರ್ಮೋನುಗಳ ಅಸಮತೋಲನದಂತಹ ಇತರ ಅಂತಃಸ್ರಾವಶಾಸ್ತ್ರದ ಸಮಸ್ಯೆಗಳನ್ನು ಎದುರಿಸುತ್ತಿರುವವರು ಈಗ ತಜ್ಞರ ಸಲಹೆ ಮತ್ತು ಆರೈಕೆ ಪಡೆಯಬಹುದು. ಇವರೊಂದಿಗೆ ಮೂತ್ರಶಾಸ್ತ್ರ ತಜ್ಞರಾದ ಡಾ. ಎಲ್.ಕೆ. ಗಣೇಶ್, ಮೂಳೆ ಮತ್ತು ಕೀಲು ತಜ್ಞರಾದ ಡಾ. ಅರವಿಂದ್ ಶಾನಭಾಗ್, ಮತ್ತು ಮನೋವೈದ್ಯಶಾಸ್ತ್ರ ತಜ್ಞರಾದ ಡಾ. ಗೌರವ್ ಕಿಣಿ ಹೊಸದಾಗಿ ಸೇರ್ಪಡೆಯಾಗಿದ್ದಾರೆ. ಇದು ಸ್ಥಳೀಯ ಸಮುದಾಯಕ್ಕೆ ಉತ್ತಮ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ. ಈ ಸೇವೆಯು ಕಾರ್ಕಳ ಮತ್ತು ಸುತ್ತಮುತ್ತಲಿನ ಪ್ರದೇಶಗಳ ರೋಗಿಗಳು ಸ್ಥಳೀಯವಾಗಿ ವಿಶೇಷ ವೈದ್ಯಕೀಯ ಆರೈಕೆಯನ್ನು ಸುಲಭವಾಗಿ ಪಡೆಯುವುದನ್ನು ಖಚಿತಪಡಿಸುತ್ತದೆ.

ಈ ಪ್ರತಿಷ್ಠಿತ ತಜ್ಞರನ್ನು ನಮ್ಮ ತಂಡಕ್ಕೆ ಸ್ವಾಗತಿಸಲು ನಾವು ಸಂತೋಷಪಡುತಿದ್ದೇವೆ. ಅವರ ಪರಿಣತಿಯು ಕಾರ್ಕಳದ ಜನರಿಗೆ ಉತ್ತಮ ಗುಣಮಟ್ಟದ ವೈದ್ಯಕೀಯ ಸೇವೆಯನ್ನು ನೀಡಲು ಸಹಕಾರಿಯಾಗಿದೆ ಎಂದು ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ ಕೀರ್ತಿನಾಥ ಬಲ್ಲಾಳ ತಿಳಿಸಿದ್ದಾರೆ .

ತಜ್ನ್ಯ ವೈದ್ಯರ ಲಭ್ಯತೆಯ ದಿನಗಳು ಮತ್ತು ಸಮಯದ ಕುರಿತು ಮಾಹಿತಿ, ಪೂರ್ವ ನಿಗಧಿ (ಅಪಾಯಿಂಟ್ ಮೆಂಟ್) , ಹಾಗೂ ಹೆಚ್ಚಿನ ಮಾಹಿತಿಗಾಗಿ 9731601150/08258-230583 ಅನ್ನು ಸಂಪರ್ಕಿಸಬಹುದು.

ಡಾ ಕೀರ್ತಿನಾಥ ಬಲ್ಲಾಳ
ಮುಖ್ಯ ವೈದ್ಯಾಧಿಕಾರಿ,ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆ ಕಾರ್ಕಳ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಫುಟ್‌ಬಾಲ್ : ಕಾರ್ಕಳ ಜ್ಞಾನಸುಧಾ ತಂಡ ಜಿಲ್ಲಾಮಟ್ಟಕ್ಕೆ

ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

‘ಸೇವಾ ಪಾಕ್ಷಿಕ ಅಭಿಯಾನ’ ಯಶಸ್ವಿಗೊಳಿಸಲು ಕುತ್ಯಾರು ನವೀನ್ ಶೆಟ್ಟಿ ಕರೆ

ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಕ್ರಿಯೇಟಿವ್ ಕಾಲೇಜಿನಲ್ಲಿ ಗುರುದೇವೋಭವ ಕಾರ್ಯಕ್ರಮ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ, 'ಕ್ರಿಯೇಟಿವ್ ಗುರುದೇವೋಭವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.

ಕಾರ್ಕಳ ಜ್ಞಾನಸುಧಾ – ಶಿಕ್ಷಕರ ದಿನಾಚರಣೆಸಾವಧಾನದ ಮನಸ್ಥಿತಿ ಗೌರವದ ಉಪಸ್ಥಿತಿ : ವಸಂತ್ ಆಚಾರ್

ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಂದರ್ಭ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದರು.