
ಪುತ್ತೂರು: ಮುಂಡೂರು ಗ್ರಾಮದ ಪುತ್ತಿಲ ಮನೆಯಲ್ಲಿ ವಾಸವಿರುವ ಅರುಣ್ ಕುಮಾರ್ ಪುತ್ತಿಲ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಜಾರಿಗೆ ಸಂಬಂಧಿಸಿದಂತೆ ವಿಚಾರಣೆ ನಿಗದಿಯಾಗಿದೆ.
ಕಂದಾಯ ಇಲಾಖೆಯ ಸಹಾಯಕ ಆಯುಕ್ತರವರು ಈ ಸಂಬಂಧ ಜೂನ್ 6ರಂದು ವಿಚಾರಣೆ ನಡೆಯಲಿರುವುದಾಗಿ ತಿಳಿಸಿದ್ದಾರೆ. ಪುತ್ತಿಲ ಅವರು ತಾವು ಅಥವಾ ತಮ್ಮ ಪರವಾಗಿ ನ್ಯಾಯವಾದಿಯ ಮೂಲಕ ಈ ವಿಚಾರಣೆಗೆ ತಪ್ಪದೆ ಹಾಜರಾಗುವಂತೆ ಸೂಚಿಸಲಾಗಿದೆ.
ಅವರು ಹಾಜರಾಗದೇ ಇದ್ದರೆ, ಈ ಪ್ರಕರಣದಲ್ಲಿ ಆಸಕ್ತಿ ಇಲ್ಲವೆಂದು ಪರಿಗಣಿಸಿ, ಲಭ್ಯವಿರುವ ದಾಖಲೆಗಳ ಆಧಾರದ ಮೇಲೆ ಏಕಪಕ್ಷೀಯ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.