spot_img

ಏಷ್ಯಾ ಕಪ್‌ 2025: ಭಾರತ ತಂಡದಿಂದ ಗಿಲ್‌, ಸಿರಾಜ್‌, ಅಯ್ಯರ್‌ಗೆ ಕೊಕ್‌? ಆಯ್ಕೆ ಸಮಿತಿ ದಿಟ್ಟ ನಿರ್ಧಾರಕ್ಕೆ ಸಜ್ಜು

Date:

spot_img

ಮುಂಬೈ : ಏಷ್ಯಾ ಕಪ್‌ 2025ರ ಭಾರತ ತಂಡದ ಆಯ್ಕೆ ಕುತೂಹಲ ಮೂಡಿಸಿದ್ದು, ಆಗಸ್ಟ್ 19ರಂದು ನಡೆಯಲಿರುವ ಆಯ್ಕೆ ಸಮಿತಿಯ ಸಭೆಯಲ್ಲಿ ಕೆಲವೊಂದು ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಅಜಿತ್‌ ಅಗರ್ಕರ್‌ ನೇತೃತ್ವದ ಸಮಿತಿಯು ಮೂವರು ದೊಡ್ಡ ಆಟಗಾರರನ್ನು ತಂಡದಿಂದ ಹೊರಗಿಡಬಹುದು ಎನ್ನಲಾಗಿದೆ.

ಶುಭಮನ್ ಗಿಲ್‌ಗೆ ಸ್ಥಾನವಿಲ್ಲ?

ಕ್ರಿಕ್‌ಬಜ್‌ ವರದಿಯ ಪ್ರಕಾರ, ಟೆಸ್ಟ್ ನಾಯಕ ಶುಭಮನ್‌ ಗಿಲ್‌ ಅವರು ಏಷ್ಯಾ ಕಪ್‌ ತಂಡದಲ್ಲಿ ಸ್ಥಾನ ಪಡೆಯುವುದು ಕಷ್ಟ ಎನ್ನಲಾಗಿದೆ. ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದರೂ, ಅಭಿಷೇಕ್‌ ಶರ್ಮಾ ಮತ್ತು ಸಂಜು ಸ್ಯಾಮ್ಸನ್‌ ಈಗಾಗಲೇ ಆರಂಭಿಕರಾಗಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಒಂದು ವೇಳೆ, ಮುಖ್ಯ ಕೋಚ್ ಗೌತಮ್ ಗಂಭೀರ್ ಅವರು ಗಿಲ್ ಆಯ್ಕೆಯನ್ನು ಬಲವಾಗಿ ಬೆಂಬಲಿಸಿದರೆ, ಮೀಸಲು ಆರಂಭಿಕರಾಗಿರುವ ಯಶಸ್ವಿ ಜೈಸ್ವಾಲ್‌ಗೆ ಅವಕಾಶ ಕಷ್ಟವಾಗಬಹುದು.

ಸಿರಾಜ್ ಮತ್ತು ಶಮಿಗೆ ನಿರಾಸೆ

ವೇಗಿ ಮೊಹಮ್ಮದ್‌ ಸಿರಾಜ್‌ ಅವರು ಇಂಗ್ಲೆಂಡ್ ಸರಣಿಯಲ್ಲಿ ಗರಿಷ್ಠ ವಿಕೆಟ್ ಪಡೆದಿದ್ದರೂ ಏಷ್ಯಾ ಕಪ್‌ಗೆ ಆಯ್ಕೆಯಾಗುವುದು ಅನುಮಾನ. ಜಸ್ಪ್ರೀತ್‌ ಬುಮ್ರಾ ಅವರು ತಂಡಕ್ಕೆ ಮರಳುತ್ತಿರುವ ಕಾರಣ ಸಿರಾಜ್‌ಗೆ ಸ್ಥಾನ ಸಿಗದೇ ಇರಬಹುದು. ಆಯ್ಕೆ ಸಮಿತಿಯು ಅರ್ಶದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ ಮತ್ತು ಹರ್ಷಿತ್ ರಾಣಾ ಅವರನ್ನು ವೇಗಿಗಳಾಗಿ ಪರಿಗಣಿಸಿದೆ ಎಂದು ವರದಿಯಾಗಿದೆ. ಮೊಹಮ್ಮದ್ ಶಮಿ ಅವರನ್ನೂ ಸಹ ಆಯ್ಕೆ ಮಾಡಲಾಗುವುದಿಲ್ಲ ಎನ್ನಲಾಗಿದೆ.

ಶ್ರೇಯಸ್ ಅಯ್ಯರ್‌ಗೆ ಇಲ್ಲ ಸ್ಥಾನ

ಮಧ್ಯಮ ಕ್ರಮಾಂಕದಲ್ಲಿ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದರೂ ಶ್ರೇಯಸ್‌ ಅಯ್ಯರ್‌ ಅವರಿಗೂ ಏಷ್ಯಾ ಕಪ್‌ ತಂಡದಲ್ಲಿ ಸ್ಥಾನ ಸಿಗದು ಎನ್ನಲಾಗಿದೆ. ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ ಮತ್ತು ರಿಂಕು ಸಿಂಗ್ ಮಧ್ಯಮ ಕ್ರಮಾಂಕದಲ್ಲಿ ಖಚಿತ ಆಯ್ಕೆಗಳಾಗಿದ್ದಾರೆ. ಆಲ್‌ರೌಂಡರ್ ಸ್ಥಾನಕ್ಕಾಗಿ ಶಿವಂ ದುಬೆ ಮತ್ತು ವಾಷಿಂಗ್ಟನ್ ಸುಂದರ್ ಅವರು ಹಾರ್ದಿಕ್ ಪಾಂಡ್ಯ ಜೊತೆ ಪೈಪೋಟಿ ನಡೆಸುತ್ತಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಶ್ರೀ ಕ್ಷೇ.ಧ.ಗ್ರಾ.ಯೋಜನೆ ಉಡುಪಿ ತಾಲೂಕು : ಮಹಿಳಾ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್(ರಿ.) ಉಡುಪಿ ತಾಲೂಕು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಹಿರಿಯಡಕ ವಲಯ, ಕೊಡಿಬೆಟ್ಟು ಕುದಿ 82 ಕಾರ್ಯಕ್ಷೇತ್ರದ ಧರ್ಮ ದೇವತೆ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವು ಇಂದು ವಿಷ್ಣುಮೂರ್ತಿ ಪ್ರೌಢಶಾಲೆ, ಕೊಡಿಬೆಟ್ಟು ಕುದಿ 82 ಇಲ್ಲಿ ನಡೆಯಿತು.

ನಿಟ್ಟೆ ಬ್ರಹ್ಮಾಕುಮಾರಿಸ್ ಬೃಂದಾವನ್ ಧ್ಯಾನ ಕೇಂದ್ರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಕಾರ್ಕಳದ ನಿಟ್ಟೆ ಬ್ರಹ್ಮಾಕುಮಾರಿಸ್ ಬೃಂದಾವನ್ ಧ್ಯಾನ ಕೇಂದ್ರದಲ್ಲಿ ಆಗಸ್ಟ್ 17ರಂದು ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಭಕ್ತಿ, ಸಂಭ್ರಮಗಳಿಂದ ಆಚರಿಸಲಾಯಿತು.

ಗೆಳೆಯರ ಬಳಗ ದಿಡಿಂಬಿರಿ ಇವರ ವತಿಯಿಂದ 2ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಬಜಗೋಳಿ ದಿಡಿಂಬಿರಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವು ದಿನಾಂಕ 17/08/2025 ರಂದು ನಡೆಯಿತು.

ಸಮಾಜ ಕಂಟಕ ಮಹೇಶ್ ಶೆಟ್ಟಿ ತಿಮರೋಡಿಯನ್ನು ತಕ್ಷಣ ಬಂಧಿಸುವಂತೆ ಉಡುಪಿ ಜಿಲ್ಲಾ ಬಿಜೆಪಿ ಆಗ್ರಹ

ಧಾರ್ಮಿಕ ಕ್ಷೇತ್ರದ ಬಗ್ಗೆ ಯಾರೇ ಒಳ್ಳೆಯ ಮಾತುಗಳನ್ನಾಡಿದರೂ ಅವರ ಚಾರಿತ್ರ್ಯಹರಣ ಮಾಡುವ ಮೂಲಕ ಬಾಯಿ ಮುಚ್ಚಿಸುವ ಷಡ್ಯಂತ್ರ ರೂಪಿಸುತ್ತಿರುವ ಅಪಾಯಕಾರಿ ರೌಡಿ ಮನಸ್ಥಿತಿಯನ್ನು ಹೊಂದಿರುವ ಮಹೇಶ್ ಶೆಟ್ಟಿ ತಿಮರೋಡಿಯನ್ನು ತಕ್ಷಣ ಬಂಧಿಸಿ ಕಾನೂನಾತ್ಮಕ ಶಿಕ್ಷೆಗೆ ಒಳಪಡಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಸರಕಾರವನ್ನು ಆಗ್ರಹಿಸಿದ್ದಾರೆ.