ಬೈಕ್ ಸಮೇತ ನದಿ ದಾಟಲು ಯತ್ನ – ನೀರಿನಲ್ಲಿ ಬೈಕ್ ಕೊಚ್ಚಿ ಹೋದರೂ ಯುವಕರಿಬ್ಬರೂ ಸಾಹಸದಿಂದ ಪಾರು

Date:

spot_img

ಬೆಳ್ತಂಗಡಿ : ಕೆಲಸದ ನಿಮಿತ್ತ ಬೈಕ್ ಸಮೇತ ನದಿಯನ್ನು ದಾಟುತ್ತಿದ್ದ ಇಬ್ಬರು ಯುವಕರು, ನದಿಯಲ್ಲಿ ಬೈಕ್ ಕೊಚ್ಚಿ ಹೋದರೂ ತಮ್ಮ ಚಾತುರ್ಯದಿಂದ ಪವಾಡ ಸದೃಶ ರೀತಿಯಲ್ಲಿ ಪಾರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಹಿತ್ತಿಲಪೇಲ ಪ್ರದೇಶದಲ್ಲಿ ನಡೆದಿದೆ.

ಕರಿಯ ಮಲೆಕುಡಿಯ ಎಂಬುವವರ ಮಗ ಸತೀಶ್ ಹಾಗೂ ಸುಳ್ಯೋಡಿ ಮೂಲದ ಸಂಜೀವ ಪೂಜಾರಿ ಎಂಬ ಯುವಕರು, ಸವಣಾಲು ಗ್ರಾಮದ ಮಂಜದಬೆಟ್ಟುವಿನಿಂದ ಹಿತ್ತಿಲಪೇಲ ಕಡೆಗೆ ಕೆಲಸಕ್ಕೆ ತೆರಳುತ್ತಿದ್ದರು. ಈ ನಡುವೆ ಕೂಡುಜಾಲು ಎಂಬಲ್ಲಿ ಹರಿಯುತ್ತಿದ್ದ ನದಿಯನ್ನು ಬೈಕ್ ಸಮೇತ ದಾಟುವ ಸಂದರ್ಭದಲ್ಲಿ , ಆಕಸ್ಮಿಕವಾಗಿ ನೀರಿನ ಪ್ರವಾಹಕ್ಕೆ ಬೈಕ್ ಕೊಚ್ಚಿ ಹೋಗಿದೆ.

ಘಟನೆಯ ಸಮಯದಲ್ಲಿ ತಕ್ಷಣ ಪ್ರತಿಕ್ರಿಯಿಸಿದ ಯುವಕರು ಸಮೀಪದಲ್ಲಿದ್ದ ಬಳ್ಳಿಯನ್ನು ಹಿಡಿದು ಸಿನಿಮೀಯ ಶೈಲಿಯಲ್ಲಿ ತಮ್ಮ ಜೀವವನ್ನು ಉಳಿಸಿಕೊಂಡಿದ್ದಾರೆ. ಬೈಕ್ ನದಿಯಲ್ಲಿ ಕೊಚ್ಚಿಹೋದರೂ ಜೀವ ಉಳಿದಿರುವುದೇ ಭಾಗ್ಯ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ವಿಳಂಬ: ಹೈಕಮಾಂಡ್ ನಿರ್ಧಾರ ಶೀಘ್ರ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಮತ್ತೆ ವಿಳಂಬಗೊಂಡಿದೆ. ಹೈಕಮಾಂಡ್ ಅನುಮೋದನೆಗಾಗಿ ನಾಯಕರು ಕಾಯುತ್ತಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

ಇಂಡಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ 16 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ನೋಟ್ ಪತ್ತೆಯಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಐಐಟಿ ರೂರ್ಕಿಯಲ್ಲಿ ರಾಜಕೀಯ ಪೋಸ್ಟ್‌ಗೆ ನಿಷೇಧ: ಜಾಲತಾಣದಲ್ಲಿ ಆಕ್ರೋಶ

ಐಐಟಿ ರೂರ್ಕಿ ತನ್ನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ರಾಜಕೀಯ ಪೋಸ್ಟ್ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಂಚೊಟ್ಟಿಯಲ್ಲಿ ಜುಲೈ 26 ರಂದು ‘ಕೆಸರ್ಡ್ ಒಂಜಿ ದಿನ’ ಕ್ರೀಡಾಕೂಟ!

ಬೊಮ್ಮಾರಬೆಟ್ಟು ಗ್ರಾಮಸ್ಥರಿಗಾಗಿ ಹಿರಿಯಡ್ಕ ಮಂಚೊಟ್ಟಿಯಲ್ಲಿ 'ಕೆಸರ್ಡ್ ಒಂಜಿ ದಿನ' ಗ್ರಾಮೀಣ ಕ್ರೀಡಾಕೂಟ ಆಯೋಜನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ