ಅತ್ತೂರಿನಲ್ಲಿ ಜನನಿ ಮಿತ್ರ ಮಂಡಳಿಯ ರಜತ ಮಹೋತ್ಸವ ಸಂಭ್ರಮ: ಫೆ. 14 ರಂದು ಧಾರ್ಮಿಕ ಹಾಗೂ ಸಾಂಸ್ಕೃತಿಕ ಹಬ್ಬ!

Date:

spot_img

ಕಾರ್ಕಳ : ತಾಲೂಕಿನ ನಿಟ್ಟೆ ಗ್ರಾಮದ ಅತ್ತೂರು ವಾಂಟ್ರಾಯಿ ಪದವಿನ ‘ಜನನಿ ಮಿತ್ರ ಮಂಡಳಿ (ರಿ)’ ಇದರ ರಜತ ಮಹೋತ್ಸವ ಸಂಭ್ರಮವು ಫೆಬ್ರವರಿ 14, 2026 ರ ಶನಿವಾರದಂದು ಅತ್ಯಂತ ಸಡಗರದಿಂದ ಜರುಗಲಿದೆ. ಮಂಡಳಿಯ ವಾರ್ಷಿಕೋತ್ಸವದ ಅಂಗವಾಗಿ ಧಾರ್ಮಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಸರಣಿಯನ್ನೇ ಆಯೋಜಿಸಲಾಗಿದೆ.

ಶನಿವಾರ ಬೆಳಿಗ್ಗೆ 10 ಗಂಟೆಗೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯೊಂದಿಗೆ ಕಾರ್ಯಕ್ರಮಗಳು ಆರಂಭವಾಗಲಿವೆ. ಮಧ್ಯಾಹ್ನ 12.30 ಕ್ಕೆ ಮಹಾಪೂಜೆ ನೆರವೇರಲಿದ್ದು, ತದನಂತರ ಭಕ್ತಾದಿಗಳಿಗೆ ಮಹಾ ಅನ್ನಸಂತರ್ಪಣೆ ನಡೆಯಲಿದೆ. ಅಪರಾಹ್ನ ಭಜನಾ ಕಾರ್ಯಕ್ರಮಗಳು ಸಾಗಲಿದ್ದು, ಸಂಜೆ 4 ರಿಂದ 6 ರವರೆಗೆ ಸ್ಥಳೀಯ ಭಜನಾ ತಂಡಗಳಿಂದ ಆಕರ್ಷಕ ‘ಕುಣಿತ ಭಜನೆ’ ಜರುಗಲಿದೆ.

ಸಾಂಸ್ಕೃತಿಕ ವೈವಿಧ್ಯದ ಭಾಗವಾಗಿ ಸಂಜೆ 6 ಗಂಟೆಗೆ ಕಾರ್ಕಳದ ಪ್ರಸಿದ್ಧ ‘ತೆಲಿಕೆದ ತೆನಾಲಿ’ ತಂಡದಿಂದ ‘ಬಲಿ ತೆಲಿಪಾಲೆ’ ಹಾಸ್ಯ ರಸಮಂಜರಿ ಕಾರ್ಯಕ್ರಮ ಪ್ರೇಕ್ಷಕರನ್ನು ರಂಜಿಸಲಿದೆ. ನಂತರ ಸ್ಥಳೀಯ ಕಲಾವಿದರಿಂದ ಜಾನಪದ ನೃತ್ಯ ಹಾಗೂ ವಿವಿಧ ಕಲಾ ಪ್ರದರ್ಶನಗಳು ನಡೆಯಲಿವೆ. ರಾತ್ರಿ 8.30 ಕ್ಕೆ ಗುಂಡ್ಯಡ್ಕ ಹಿಂದೂ ರುದ್ರಭೂಮಿಯ ನವೀಕೃತ ಕಟ್ಟಡದ ಉದ್ಘಾಟನೆ ಹಾಗೂ ರಜತ ಮಹೋತ್ಸವದ ಸಭಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾತ್ರಿ 10 ಗಂಟೆಗೆ ಸಾಯಿಶಕ್ತಿ ಕಲಾ ಬಳಗದಿಂದ ‘ಜೋಡು ಜೀಟಿಗೆ’ ಎಂಬ ಪೌರಾಣಿಕ ತುಳು ನಾಟಕ ಪ್ರದರ್ಶನಗೊಳ್ಳುವ ಮೂಲಕ ವಾರ್ಷಿಕೋತ್ಸವಕ್ಕೆ ತೆರೆ ಬೀಳಲಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.