spot_img

ಬಾಬಾ ಸಿದ್ದಿಖಿ ಹತ್ಯೆ ಪ್ರಕರಣದ ಮಾಸ್ಟರ್‌ಮೈಂಡ್ ಝೀಶಾನ್ ಅಖ್ತರ್ ಕೆನಡಾದಲ್ಲಿ ಬಂಧನ!

Date:

spot_img

ಮುಂಬೈ: ಎನ್‌ಸಿಪಿ ಮುಖಂಡ ಹಾಗೂ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಖಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಶಂಕಿತನಾಗಿದ್ದ ಝೀಶಾನ್ ಅಖ್ತರ್ ನನ್ನು ಕೆನಡಾದಲ್ಲಿ ಬಂಧಿಸಲಾಗಿದೆ. ಮಂಗಳವಾರ (ಜೂನ್ 10) ಈತನನ್ನು ಅಲ್ಲಿನ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಮುಂಬೈ ಪೊಲೀಸ್ ಮೂಲಗಳು ದೃಢಪಡಿಸಿವೆ.

2024ರ ಅಕ್ಟೋಬರ್ 12ರಂದು, ಸಿದ್ದಿಖಿಯ ಪುತ್ರ ಶಾಸಕ ಝೀಶಾನ್ ಸಿದ್ದಿಖಿಯ ಕಚೇರಿಯ ಹೊರಭಾಗದಲ್ಲಿ ನಡೆದಿದ್ದ ಗುಂಡಿನ ದಾಳಿ ಪ್ರಕರಣದಲ್ಲಿ ಮೂರು ಅಪರಿಚಿತರು ಬಾಬಾ ಸಿದ್ದಿಖಿಯನ್ನು ಹೊಡೆದುರುಳಿಸಿದ್ದರು. ಈ ಪ್ರಕರಣದ ಪ್ರಮುಖ ಮಾಸ್ಟರ್‌ಮೈಂಡ್ ಆಗಿ ಗುರುತಿಸಲ್ಪಟ್ಟ ಝೀಶಾನ್ ಅಖ್ತರ್ ಘಟನೆಯ ನಂತರ ದೇಶದಿಂದ ಪರಾರಿಯಾಗಿದ್ದ.

ಪೊಲೀಸ್ ತನಿಖೆ ಪ್ರಕಾರ, ಅಖ್ತರ್ ಲಾರೆನ್ಸ್ ಬಿಷ್ನೋಯ್ ನ ಆಪ್ತನಾಗಿದ್ದು, ವಿಕ್ರಮ್ ಬ್ರಾರ್ ಗ್ಯಾಂಗ್‌ನ ಜೊತೆಗೂ ಸಹ ನಂಟು ಹೊಂದಿದ್ದ ಎನ್ನಲಾಗಿದೆ. ಈತನ ವಿರುದ್ಧ ಹೆಚ್ಚಿನ ಆರೋಪಗಳು ಹೊರಬಿದ್ದಿದ್ದು, ಭಾರತದಿಂದ ಹೊರದೇಶಕ್ಕೆ ಹೇಗೆ ಪರಾರಿಯಾದ ? ಎಂಬುದರ ಬಗ್ಗೆ ತನಿಖೆ ಮುಂದುವರಿದಿದೆ.

ಈ ಮುಂಚೆ, ಈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಲ್ಮಾನ್ ವೋಹ್ರಾ ಮತ್ತು ಆಕಾಶ್ ದೀಪ್ ಸಿಂಗ್ ಎಂಬ ಇಬ್ಬರನ್ನು ಮುಂಬೈ ಪೊಲೀಸರು ಬಂಧಿಸಿದ್ದರು. ಇದೀಗ ಝೀಶಾನ್ ಅಖ್ತರ್ ನ ಬಂಧನದೊಂದಿಗೆ ಪ್ರಕರಣದ ತನಿಖೆಯು ಹೊಸ ತಿರುವು ಪಡೆಯುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಹಿರ್ಗಾನ ಸಂತ ಮರಿಯ ಗೊರೆಟ್ಟಿ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ: ಸದೃಢ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳಿಗೆ ಕರೆ

ಬೈಲೂರು ವಲಯದ ಹಿರ್ಗಾನ ಕಾರ್ಯಕ್ಷೇತ್ರದ ಸಂತ ಮರಿಯ ಗೊರೆಟ್ಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಗಳ ಜಂಟಿ ಆಶ್ರಯದಲ್ಲಿ "ಸ್ವಾಸ್ಥ್ಯ ಸಂಕಲ್ಪ" ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು

ಧಾರ್ಮಿಕ ಸೌಹಾರ್ದಕ್ಕೆ ಬೈಲೂರು ಮಾದರಿ: ಭಜನಾ ಪರಿಕರ ವಿತರಣಾ ಸಮಾರಂಭಕ್ಕೆ ಸಿದ್ಧತೆ

ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಗಳಲ್ಲಿ ಸಕ್ರಿಯವಾಗಿರುವ ಭಜನಾ ಮಂಡಳಿಗಳಿಗೆ ಉತ್ತೇಜನ ನೀಡುವ ದೃಷ್ಟಿಯಿಂದ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್, ಭಜನಾ ಮಂಡಳಿಗಳ ಒಕ್ಕೂಟ ಹಾಗೂ ಕರಾವಳಿ ಭಜನಾ ಸಂಸ್ಕಾರ ವೇದಿಕೆ

ಮೈಕ್ರೋಸಾಫ್ಟ್ ಶೇರ್‌ಪಾಯಿಂಟ್‌ಗೆ ಸೈಬರ್ ದಾಳಿ: ರಾಷ್ಟ್ರ-ಪ್ರಾಯೋಜಿತ ಹ್ಯಾಕರ್‌ಗಳಿಂದ ಸೂಕ್ಷ್ಮ ಡೇಟಾ ಸೋರಿಕೆ!

ಮೈಕ್ರೋಸಾಫ್ಟ್‌ನ ಶೇರ್‌ಪಾಯಿಂಟ್ ಪ್ಲಾಟ್‌ಫಾರ್ಮ್ ಮೇಲೆ ಇತ್ತೀಚೆಗೆ ಪ್ರಮುಖ ಭದ್ರತಾ ಘಟನೆಯೊಂದು ಪರಿಣಾಮ ಬೀರಿದೆ.

ಜು.28ರ ‘ಏಕ ವಿನ್ಯಾಸ’ ಸಮಸ್ಯೆ ವಿರುದ್ಧ ಬಿಜೆಪಿ ಪ್ರತಿಭಟನೆ ಯಶಸ್ವಿಗೊಳಿಸಲು ಕುತ್ಯಾರು ಕರೆ

ಜಿಲ್ಲೆಯ ಸಂಸದರು, ಶಾಸಕರು, ಪಕ್ಷದ ಪ್ರಮುಖರು ಪಾಲ್ಗೊಳ್ಳುವ ಈ ಪ್ರತಿಭಟನೆಯನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಹಾಗೂ ಸದ್ರಿ ಸಮಸ್ಯೆಯನ್ನು ಎದುರಿಸುತ್ತಿರುವ ಸಾರ್ವಜನಿಕರು ಸೇರಿ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.