ಸಾವಿನಲ್ಲೂ ಒಂದಾದ ದಂಪತಿ: ಪತಿಯ ಹೃದಯಾಘಾತದ ಸುದ್ದಿ ಕೇಳಿ ಪತ್ನಿಗೂ ಹಾರ್ಟ್ ಅಟ್ಯಾಕ್

Date:

spot_img

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಬೀಳಗಿ ಗ್ರಾಮದಲ್ಲಿ ದಂಪತಿಗಳಿಬ್ಬರ ಸಾವು ಇಡೀ ಊರನ್ನು ದುಃಖದಲ್ಲಿ ಮುಳುಗಿಸಿದೆ. ತುಳಸಿ ಪೂಜೆ ಮುಗಿಸಿ ಖುಷಿಯಿಂದಲೇ ಇದ್ದ ಪತಿಗೆ ಅಚಾನಕ್ ಆಗಿ ಎದೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟಿದ್ದಾರೆ.

ಪತಿಯ ಶವ ಕಂಡು ಪತ್ನಿಯೂ ನಿಧನ

ಮೃತ ಶಶಿಧರ್ ಪತ್ತಾರ (40) ಅವರು ಚಿನ್ನದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಸೋಮವಾರ ರಾತ್ರಿ ಶಶಿಧರ್ ಅವರು ಪತ್ನಿ ಸರೋಜಿನಿ (35) ಜೊತೆ ತುಳಸಿ ಪೂಜೆ ಮಾಡಿ ಸಂತೋಷದಿಂದ ಕಾಲ ಕಳೆದಿದ್ದರು. ಆನಂತರ ಶಶಿಧರ್ ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡ ಕಾರಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ದುರದೃಷ್ಟವಶಾತ್ ಮಾರ್ಗ ಮಧ್ಯದಲ್ಲಿಯೇ ಶಶಿಧರ್ ಉಸಿರು ಚೆಲ್ಲಿದ್ದಾರೆ.

ಪತಿಯ ಮೃತಪಟ್ಟಿರುವ ವಿಷಯ ತಿಳಿಯದೆ ಆಸ್ಪತ್ರೆಗೆ ಬಂದ ಪತ್ನಿ ಸರೋಜಿನಿ ಅವರು ಗಂಡನ ಶವ ಕಂಡು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ಪತಿಯ ಮೃತದೇಹದ ಎದುರೇ ತೀವ್ರ ಹೃದಯಾಘಾತ (ಹಾರ್ಟ್ ಅಟ್ಯಾಕ್) ಆಗಿ ಸರೋಜಿನಿ ಕೂಡ ಪ್ರಾಣ ಬಿಟ್ಟಿದ್ದಾರೆ. ಈ ದಂಪತಿ ಸಾವಿನಲ್ಲೂ ಒಂದಾಗಿದ್ದು, ಈ ದಾರುಣ ಘಟನೆ ಊರ ಜನರನ್ನು ಕಣ್ಣೀರಲ್ಲಿ ಮುಳುಗಿಸಿದೆ.

ಮಕ್ಕಳು ಅನಾಥ; ವಿಚಿತ್ರ ಕಾಕತಾಳೀಯ

ಕಳೆದ 15 ವರ್ಷಗಳಿಂದ ಸಂಸಾರ ನಡೆಸುತ್ತಿದ್ದ ಈ ದಂಪತಿಗೆ ಇಬ್ಬರು ಗಂಡುಮಕ್ಕಳಿದ್ದು, ಇದೀಗ ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದಾರೆ. ಮೃತ ಸರೋಜಿನಿಗೆ ನಾಲ್ವರು ಸಹೋದರಿಯರಿದ್ದು, ಮೂವರು ಈಗಾಗಲೇ ಮೃತಪಟ್ಟಿದ್ದಾರೆ. ಸರೋಜಿನಿ ಸೇರಿ ಉಳಿದ ಮೂರೂ ಸಹೋದರಿಯರು ತುಳಸಿ ಪೂಜೆಯ ಸಂದರ್ಭದಲ್ಲಿಯೇ ಮೃತಪಟ್ಟಿರುವುದು ಆಶ್ಚರ್ಯಕರ ಸಂಗತಿಯಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ವಿಳಂಬ: ಹೈಕಮಾಂಡ್ ನಿರ್ಧಾರ ಶೀಘ್ರ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಮತ್ತೆ ವಿಳಂಬಗೊಂಡಿದೆ. ಹೈಕಮಾಂಡ್ ಅನುಮೋದನೆಗಾಗಿ ನಾಯಕರು ಕಾಯುತ್ತಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

ಇಂಡಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ 16 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ನೋಟ್ ಪತ್ತೆಯಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಐಐಟಿ ರೂರ್ಕಿಯಲ್ಲಿ ರಾಜಕೀಯ ಪೋಸ್ಟ್‌ಗೆ ನಿಷೇಧ: ಜಾಲತಾಣದಲ್ಲಿ ಆಕ್ರೋಶ

ಐಐಟಿ ರೂರ್ಕಿ ತನ್ನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ರಾಜಕೀಯ ಪೋಸ್ಟ್ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಂಜೊಟ್ಟಿಯಲ್ಲಿ ಜುಲೈ 26 ರಂದು ‘ಕೆಸರ್ಡ್ ಒಂಜಿ ದಿನ’ ಕ್ರೀಡಾಕೂಟ!

ಬೊಮ್ಮಾರಬೆಟ್ಟು ಗ್ರಾಮಸ್ಥರಿಗಾಗಿ ಹಿರಿಯಡ್ಕ ಮಂಜೊಟ್ಟಿಯಲ್ಲಿ 'ಕೆಸರ್ಡ್ ಒಂಜಿ ದಿನ' ಗ್ರಾಮೀಣ ಕ್ರೀಡಾಕೂಟ ಆಯೋಜನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ