
ಕಾರ್ಕಳ : ಅಜೆಕಾರು ಗ್ರಾಮದ ದೆಪುತ್ತೆಯ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆಗಿರುವ ಅವರ ಪತ್ನಿ ಪ್ರತಿಮಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ಕಾರ್ಕಳದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸಂಚಾರಿ ಪೀಠದ ನ್ಯಾಯಾಧೀಶ ಸಮೀವುಲ್ಲಾ, ಸರಕಾರಿ ಅಭಿಯೋಜಕ ಬೇಳೂರು ಪ್ರಕಾಶ್ಚಂದ್ರ ಶೆಟ್ಟಿ ಅವರ ವಾದ ಆಲಿಸಿದ ನಂತರ ಜಾಮೀನು ನೀಡಲು ನಿರಾಕರಿಸಿ ಆದೇಶ ಹೊರಡಿಸಿದ್ದಾರೆ.
ಈ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ದಿಲೀಪ್ ಹೆಗ್ಡೆ ಕೂಡ ಜಾಮೀನು ಅರ್ಜಿ ಸಲ್ಲಿಸಿದ್ದರೂ, ಅದನ್ನೂ ನ್ಯಾಯಾಲಯ ತಿರಸ್ಕರಿಸಿತ್ತು. ಈ ಮೂಲಕ ಪ್ರಕರಣದ ಎರಡೂ ಪ್ರಮುಖ ಆರೋಪಿಗಳು ನ್ಯಾಯಾಂಗ ಬಂಧನದಲ್ಲೇ ಉಳಿದಿದ್ದಾರೆ.
ಪ್ರಕರಣದ ಹಿನ್ನೆಲೆ:
2024ರ ಅಕ್ಟೋಬರ್ 20ರಂದು ಮರ್ಣಿ ಗ್ರಾಮದ ಅಜೆಕಾರು ಪ್ರದೇಶದಲ್ಲಿ ಬಾಲಕೃಷ್ಣ ಪೂಜಾರಿ ಕೊಲೆಯಾಗಿದ್ದರು. ತನಿಖೆಯಲ್ಲಿ ಪತ್ನಿ ಪ್ರತಿಮಾ ಮತ್ತು ಆಕೆಯ ಪ್ರಿಯಕರ ಎನ್ನಲಾದ ದಿಲೀಪ್ ಹೆಗ್ಡೆ ಮುಖ್ಯ ಆರೋಪಿಗಳೆಂದು ತಿಳಿದುಬಂದಿದೆ.
ಇವರಿಬ್ಬರು ಕೊಲೆಗೆ ಸಂಚು ರೂಪಿಸಿ, ಕೃತ್ಯ ಎಸಗಿದರೆಂದು ಆರೋಪ ಕೇಳಿಬಂದಿದ್ದು ಘಟನೆಯ ಬಳಿಕ ಆಗಸ್ಟ್ 25ರಂದು ಪೊಲೀಸರು ಆರೋಪಿಗಳನ್ನು ಬಂಧಿಸಿ, ತನಿಖೆ ಆರಂಭಿಸಿದ್ದರು.
ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ನ್ಯಾಯಾಲಯ ಜಾಮೀನು ನಿರಾಕರಿಸಿರುವುದು ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.