spot_img

ಕುದಿಗ್ರಾಮದಲ್ಲಿ ಮೂಜನೇ ವರ್ಷೋದ” ಬಲೇ ಕೆಸರ‍್ಡ್ ಗೊಬ್ಬುಗ” ಕಾರ್ಯಕ್ರಮ

Date:

ಕುದಿಗ್ರಾಮ : ಪಾರಂಪರಿಕ ಕೃಷಿ ಸಂಸ್ಕೃತಿಯ ಘನತೆಯನ್ನು ಪ್ರತಿಬಿಂಬಿಸುವ ನಿಟ್ಟಿನಲ್ಲಿ, ಕುದಿಗ್ರಾಮ-82ರಲ್ಲಿ ಶ್ರೀ ಮಹಾಲಿಂಗೇಶ್ವರ ಕೊಂಡಾಡಿ ಬಳಗದ ಆಶ್ರಯದಲ್ಲಿ “ಮೂಜನೇರ್ವದ ಬಲೇ ಕೆಸರ್ ಗೊಬ್ಬುಗ” ಕಾರ್ಯಕ್ರಮವನ್ನು ಜೂನ್ 29ರ ಭಾನುವಾರ ಬೆಳಿಗ್ಗೆ 8 ಗಂಟೆಯಿಂದ ದಿ| ಶಾರದಾ ಉಮನಾಥ ಶೆಟ್ಟಿ ಅವರ ಬಾಕ್ಯಾರ್‌ನಲ್ಲಿ ಆಯೋಜಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಡಾ| ಸೂರಜ್ ಎ.ಆರ್, ದೀರ್ಘಾಯು ಆರ್ಯುವೇದ, ಬಾನಂಪಾಡಿ, ಕುದಿ-82 ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಡಾ| ಸ್ವಾತಿ ಪಿ.ಜೆ. (ಬಾನಂಪಾಡಿ), ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಕೃಷಿಕರಾದ ಕುದಿ ಶ್ರೀನಿವಾಸ ಭಟ್ ಹಾಗೂ ಉಡುಪಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರುಗಳು ಪಾಲ್ಗೊಳ್ಳಲಿದ್ದಾರೆ.

ಕಾರ್ಯಕ್ರಮದ ಸಂದರ್ಭದಲ್ಲಿ ಗಿನ್ನಿಸ್ ದಾಖಲೆ ಪುರಸ್ಕೃತ ಮಹೇಶ್ ಮರ್ಣೆ ಹಾಗೂ ಗಿಡಮೂಲಿಕೆ ಆಧಾರಿತ ಔಷಧ ತಯಾರಕರು ಸುಂದರ ನಾಯ್ಕ (ಕುದಿ, ಕೊಂಡಾಡಿ, ಮಿತ್ತೊಟ್ಟು) ಅವರನ್ನು ಗೌರವಿಸಲಾಗುವುದು.

ಈ ಸಂದರ್ಭದಲ್ಲಿ ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿದ್ದು, ಅದರಲ್ಲಿ ಪ್ರಸನ್ನ ಕುಮಾರ್ ಹೆಗ್ಡೆ (ಚಂದ್ರಗಿರಿ), ಯುವ ಉದ್ಯಮಿ ವಿಠಲ ಚರಣ್, ನಿವೃತ್ತ ಶಿಕ್ಷಕರಾದ ಶಿವರಾಮ್ ನಾಯ್ಕ (ಶಿವಲೀಲಾ, ಹಿರಿಯಡಕ) ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂದೀಪ ಮಡಿವಾಳ (ಕುದಿ 82) ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕೆ. ಹರೀಶ್ ಭಟ್, ಶ್ರೀನಾಥ್ ಶೆಟ್ಟಿ (ಕೊಂಡಾಡಿ) ಹಾಗೂ ಶ್ರೀ ಮಹಾಲಿಂಗೇಶ್ವರ ಕೊಂಡಾಡಿ ಬಳಗದವರು ಈ ಕಾರ್ಯಕ್ರಮಕ್ಕೆ ಸ್ನೇಹಪೂರ್ವಕವಾಗಿ ಸ್ವಾಗತವನ್ನು ಕೋರಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ!

ವಿಜಯವಾಡದ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಕ್ಕೆ ಹದ್ದು ಡಿಕ್ಕಿ ಹೊಡೆದ ಪರಿಣಾಮ, ವಿಮಾನದ ಹಾರಾಟವನ್ನು ರದ್ದುಗೊಳಿಸಲಾಗಿದೆ.

ಹಾಸನದಲ್ಲಿ ದಸರಾ ಉದ್ಘಾಟನೆ ವಿವಾದ: ಭಾನು ಮುಷ್ತಾಕ್ ಮನೆಗೆ ತೆರಳಿ ‘ಆಹ್ವಾನ ತಿರಸ್ಕರಿಸಿ’ ಎಂದು ಮನವಿ

‘ರಾಷ್ಟ್ರ ರಕ್ಷಣಾ ಸೇನೆ’ ಎಂಬ ಸಂಘಟನೆಯ ಕಾರ್ಯಕರ್ತರು ಭಾನು ಮುಷ್ತಾಕ್ ಅವರ ಮನೆಗೆ ಭೇಟಿ ನೀಡಿ, ಉದ್ಘಾಟನೆ ಆಹ್ವಾನವನ್ನು ತಿರಸ್ಕರಿಸುವಂತೆ ಮನವಿ ಮಾಡಿದ್ದಾರೆ.

ಸಮೋಸಾ ತರದಿದ್ದಕ್ಕೆ ಗಂಡನ ಮೇಲೆ ಹಲ್ಲೆ: ಉತ್ತರ ಪ್ರದೇಶದಲ್ಲಿ ನಡೆದ ವಿಚಿತ್ರ ಘಟನೆ

ಸಮೋಸಾ ತರುವ ವಿಷಯದಲ್ಲಿ ಗಂಡ ಮತ್ತು ಹೆಂಡತಿಯ ನಡುವೆ ನಡೆದ ವಾಗ್ವಾದವು ಗಂಭೀರ ಸ್ವರೂಪ ಪಡೆದುಕೊಂಡು, ಪತ್ನಿ ಮತ್ತು ಆಕೆಯ ಕುಟುಂಬ ಸದಸ್ಯರು ಸೇರಿ ಪತಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ಆನಂದಪುರದಲ್ಲಿ ವರದಿಯಾಗಿದೆ.

ಕಾರ್ಕಳದ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಅಶೋಕ್ ಸುವರ್ಣ ಆಯ್ಕೆ

ಕಾರ್ಕಳ ತಾಲೂಕು ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಅಶೋಕ್ ಸುವರ್ಣ ಅವರನ್ನು ನೇಮಕ ಮಾಡಲಾಗಿದೆ.