ಬಲ್ಲಾಡಿ ಶಾಲಾ ವಾರ್ಷಿಕೋತ್ಸವ ಮತ್ತು ಸ್ನೇಹ ಸಮ್ಮಿಲನ

Date:

spot_img

ಹೆಬ್ರಿ: ಮುದ್ರಾಡಿ ಗ್ರಾಮದ ಬಲ್ಲಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಯ ವಾರ್ಷಿಕೋತ್ಸವ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮವು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಾಗೂ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಶಾಲಾ ವಠಾರದಲ್ಲಿ ನಡೆಯಿತು.

ಬೆಳಿಗ್ಗೆ ಧ್ವಜಾರೋಹಣ ಕಾರ್ಯಕ್ರಮವನ್ನು ಬಲ್ಲಾಡಿ ರಾಜಶೇಖರ ಎಂ. ನೆರವೇರಿಸಿದರು. ಮುದ್ರಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ರಮ್ಯಕಾಂತಿ, ಬಲ್ಲಾಡಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಶುಭಧರ ಶೆಟ್ಟಿ, ಪ್ರಶಾಂತ್ ಪೈ ಮುದ್ರಾಡಿ, ಕೃಷ್ಣ ಪೂಜಾರಿ ಬಲ್ಲಾಡಿ, ಉಮಾವತಿ ಭಟ್, ಶಾಲಾ ಅಧ್ಯಾಪಕ ವೃಂದ, ಇನ್ನಿತರರು ಉಪಸ್ಥಿತರಿದ್ದರು.

ಸಂಜೆ ನಡೆದ ಸಭಾ ಕಾರ್ಯಕ್ರಮವನ್ನು ಉದ್ಯಮಿ
ಶ್ರೀನಿವಾಸ ಉಪಾಧ್ಯಾಯ ಕೊಡವೂರು ರವರು ಉದ್ಘಾಟಿಸಿ ಮಾತನಾಡಿ ಗ್ರಾಮೀಣ ಭಾಗದಲ್ಲಿ ರುವ ಈ ಸರಕಾರಿ ಕನ್ನಡ ಶಾಲೆ ಉಳಿವಿಗಾಗಿ ಹಲವಾರು ಮಂದಿ ಶ್ರಮ ಪಟ್ಟಿದ್ದಾರೆ. ಅವರನ್ನು ಸ್ಮರಿಸುತ್ತಾ, ಇವತ್ತು ನಡೆಯುವ ಈ ವಿಜೃಂಭಣೆಯ ವಾರ್ಷಿಕೋತ್ಸವ ನಡೆಯಲು ಸಹಕರಿಸಿದ ಎಲ್ಲರನ್ನೂ ಅಭಿನಂದಿಸುತ್ತೇನೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ರಾಜ್ಯ ಸರಕಾರ ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮುದ್ರಾಡಿ ಮಂಜುನಾಥ ಪೂಜಾರಿ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಶಂಕರ ಸೇರಿಗಾರ್, ಸಿ. ಆರ್. ಪಿ. ಪ್ರೀತೇಶ್ ಕುಮಾರ್ ಶೆಟ್ಟಿ, ಮುದ್ರಾಡಿ ಗ್ರಾಮ ಪಂಚಾಯತ್ ಹಿರಿಯ ಸದಸ್ಯರಾದ ಗಣಪತಿ ಎಂ. ಮುದ್ರಾಡಿ ಎಂ. ಎನ್. ಡಿ. ಎಸ್. ಎಂ. ಪ್ರೌಢಶಾಲೆಯ ಮುಖ್ಯ ಶಿಕ್ಷಕ ಬಲ್ಲಾಡಿ ಚಂದ್ರಶೇಖರ್ ಭಟ್ ಮೊದಲಾದವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಕಲಿಕೆ, ಸಾಂಸ್ಕೃತಿಕ ಮತ್ತು ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ, ನಗದು ಪ್ರೋತ್ಸಾಹ ಧನ ವಿತರಿಸಲಾಯಿತು. ದಾನಿಗಳನ್ನು, ಶಾಲಾ ಅಧ್ಯಾಪಕ ವೃಂದದವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಮುದ್ರಾಡಿ ಗ್ರಾಮ ಪಂಚಾಯತ್ ಸದಸ್ಯರಾದ ರತ್ನ ಪೂಜಾರಿ, ಜಯಂತಿ ಗೌಡ, ಎಸ್. ಡಿ. ಎಂ. ಸಿ. ಅಧ್ಯಕ್ಷರಾದ ಸತೀಶ್ ಆಚಾರ್ಯ, ನೆಲ್ಲಿಕಟ್ಟೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾದ ರವೀಂದ್ರ ಹೆಗ್ಡೆ, ಕಾರ್ಕಳ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ರಮಾನಂದ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸಂತೋಷ್ ಪೂಜಾರಿ ನೆಕ್ಕಾರ್ ಬೆಟ್ಟು, ಶ್ರೀಧರ್ ಕುಲಾಲ್, ಕೊಳಂಬೆ ಗುರುಪ್ರಸಾದ್ ಹೆಗ್ಡೆ, ಶ್ರೀ. ಕ್ಷೇ. ಧ. ಗ್ರಾ. ಯೋಜನೆಯ ಕೃಷಿ ಅಧಿಕಾರಿ ಉಮೇಶ್, ಶುಭಧರ ಶೆಟ್ಟಿ, ಮುದ್ರಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀನಿವಾಸ ಭಂಡಾರಿ, ವಿದ್ಯಾರ್ಥಿ ನಾಯಕಿ ಸುಭಿಕ್ಷ ಮೊದಲಾದವರು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕರಾದ ಎಚ್. ಶ್ರೀಪತಿ ಬಡ್ಕಿಲ್ಲಾಯ ವರದಿ ವಾಚಿಸಿದರು. ಮುದ್ರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ವಸಂತಿ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿ ಮಾತನಾಡಿದರು.
ಶಿಕ್ಷಕರಾದ ಗಣಪತಿ ಸ್ವಾಗತಿಸಿದರು. ಪ್ರಕಾಶ್ ಪೂಜಾರಿ ನಿರೂಪಿಸಿ, ರೇಖಾ ಸುರೇಶ್ ವಂದಿಸಿದರು. ಬಳಿಕ ಸಾಂಸ್ಕೃ ತಿಕ ಕಾರ್ಯಕ್ರಮ ಮತ್ತು ತುಳುನಾಟಕ ಪ್ರದರ್ಶನ ಗೊಂಡಿತು. ವಿವಿಧ ಸಮಿತಿಯ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು, ಎಸ್. ಡಿ. ಎಂ. ಸಿ. ಸದಸ್ಯರು, ಪೋಷಕರು ಸಹಕರಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ