spot_img

ಬಲೂಚಿಸ್ತಾನ ಈಗ ಸ್ವತಂತ್ರ ರಾಷ್ಟ್ರ: ಪಾಕಿಸ್ತಾನ ವಿರುದ್ಧ ಬಲೂಚ್ ನಾಯಕರ ಘೋಷಣೆ, ಭಾರತದಲ್ಲಿ ರಾಯಭಾರ ಕಚೇರಿ ತೆರೆಯಲು ಮನವಿ

Date:

ಹೊಸದಿಲ್ಲಿ: ದಶಕಗಳ ಹಿಂದಿನಿಂದ ಪಾಕಿಸ್ತಾನದ ವಿರುದ್ಧ ಹೋರಾಟ ನಡೆಸುತ್ತಿರುವ ಬಲೂಚ್ ಪ್ರತ್ಯೇಕತಾವಾದಿಗಳಿಗೆ ಬಲ ನೀಡುವಂತ ಬೆಳವಣಿಗೆಯೊಂದರಲ್ಲಿ, ಬುಧವಾರ ಬಲೂಚಿಸ್ತಾನವನ್ನು ಸ್ವತಂತ್ರ ರಾಷ್ಟ್ರವೆಂದು ಘೋಷಣೆ ಮಾಡಲಾಗಿದೆ. ಈ ಘೋಷಣೆಯೊಂದಿಗೆ ಆಪರೇಷನ್ ಸಿಂದೂರ ಕಾರ್ಯಾಚರಣೆಯಿಂದಾಗಿಯೇ ಅಸ್ಥಿರಗೊಂಡಿರುವ ಪಾಕಿಸ್ತಾನಕ್ಕೆ ಮತ್ತೊಂದು ತೀವ್ರ ಆಂತರಿಕ ಹೊಡೆತಬಿದ್ದಂತಾಗಿದೆ.

ಈ ಘೋಷಣೆಯನ್ನು ಬಲೂಚ್ ಪ್ರತ್ಯೇಕತಾವಾದಿ ನಾಯಕ ಹಾಗೂ ಬರಹಗಾರ ಮೀರ್ ಯಾರ್ ಬಲೂಚ್ ಟ್ವಿಟರ್‌ನಲ್ಲಿ ಅಧಿಕೃತವಾಗಿ ಪ್ರಕಟಿಸಿದ್ದಾರೆ. “ಬಲೂಚಿಸ್ತಾನ ಈಗ ಸ್ವತಂತ್ರವಾಗಿದೆ” ಎಂದು ಅವರು ಹೇಳಿದ್ದಾರೆ. ಪಾಕಿಸ್ತಾನದ ಬಲ್ಲೋಚಿಸ್ತಾನ್ ಪ್ರಾಂತ್ಯದಲ್ಲಿರುವ ದೇರಾಬುಗ್ತಿ ಪ್ರದೇಶದ ಶತಕ್ಕೂ ಹೆಚ್ಚು ಅನಿಲ ಬಾವಿಗಳ ಮೇಲೆ ಬಲೂಚಿಸ್ಥಾನ ಹೋರಾಟಗಾರರು ನಿಯಂತ್ರಣ ಸಾಧಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಮೀರ್ ಯಾರ್ ಬಲೂಚ್ ಅವರು ವಿಶ್ವಸಂಸ್ಥೆಗೆ ಮತ್ತು ಭಾರತ ಸರ್ಕಾರಕ್ಕೆ ಹಲವು ಬೇಡಿಕೆಗಳನ್ನುಇಟ್ಟಿದ್ದಾರೆ. ಅವರ ಮಾತಿನಲ್ಲಿ, ಬಲೂಚಿಸ್ತಾನಕ್ಕೆ ಪ್ರತ್ಯೇಕ ರಾಷ್ಟ್ರದ ಮಾನ್ಯತೆ ನೀಡಬೇಕು, ಭಾರತದಲ್ಲಿ ರಾಯಭಾರ ಕಚೇರಿ ತೆರೆಯಲು ಅವಕಾಶ ಕಲ್ಪಿಸಬೇಕು, ಬಲೂಚಿಸ್ತಾನ ತನ್ನದೇ ಆದ ಕರೆನ್ಸಿ ಮತ್ತು ಪಾಸ್‌ಪೋರ್ಟ್ ಮುದ್ರಿಸಲು ಅನುಮತಿ ಹಾಗೂ ಆರ್ಥಿಕ ನೆರವು ನೀಡಬೇಕು ಎಂಬ ಬೇಡಿಕೆಗಳು ಇವೆ.

ಇತ್ತೀಚೆಗಿನ “ಆಪರೇಷನ್ ಸಿಂದೂರ” ಕಾರ್ಯಾಚರಣೆ ಪಾಕಿಸ್ತಾನದಲ್ಲಿ ಭಾರೀ ಚರ್ಚೆಗೂ, ಭೀತಿಗೂ ಕಾರಣವಾಗಿದ್ದರೆ, ಅದರ ಬೆನ್ನಲ್ಲೇ ಬಲೂಚಿಸ್ತಾನದ ಈ ಸ್ವಾತಂತ್ರ್ಯ ಘೋಷಣೆ ಅಲ್ಲಿ ಆಂತರಿಕ ರಾಜಕೀಯ ಹಾಗೂ ಭದ್ರತಾ ಸ್ಥಿತಿಗತಿಗಳನ್ನು ಮತ್ತಷ್ಟು ತೀವ್ರಗೊಳಿಸಿದೆ.

ರಾಜಕೀಯ ವಿಶ್ಲೇಷಕರು ಈ ಬೆಳವಣಿಗೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಇದು ದಕ್ಷಿಣ ಏಷ್ಯಾದ ಭೌಗೋಳಿಕ ರಾಜಕಾರಣದ ಮೇಲೆ ಮಹತ್ವದ ಪರಿಣಾಮ ಬೀರಬಹುದೆಂದು ಅಭಿಪ್ರಾಯಪಟ್ಟಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

‘ಸು ಫ್ರಮ್‌ ಸೋʼ ಚಿತ್ರ ಒಟಿಟಿಗೆ ಲಗ್ಗೆ: 7 ನಿಮಿಷಗಳ ದೃಶ್ಯಕ್ಕೆ ಕತ್ತರಿ?

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಈ ವರ್ಷ ದೊಡ್ಡ ಹಿಟ್ ಆಗಿ ಹೊರಹೊಮ್ಮಿದ ಹಾರರ್-ಕಾಮಿಡಿ ʼಸು ಫ್ರಮ್ ಸೋʼ ಈಗ ಒಟಿಟಿಗೆ ಬಂದಿದೆ. ಥಿಯೇಟರ್‌ಗಳಲ್ಲಿ 45 ದಿನಗಳ ಯಶಸ್ವಿ ಪ್ರದರ್ಶನದ ಬಳಿಕ, ಈ ಚಿತ್ರ ಇಂದು (ಸೆಪ್ಟೆಂಬರ್ 9) ಜಿಯೋ ಸಿನಿಮಾ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಪ್ರಸಾರ ಆರಂಭಿಸಿದೆ.

ಬಜಗೋಳಿ ವಲಯ ಮಟ್ಟದ ಕ್ರೀಡಾಕೂಟ: ಇರ್ವತ್ತೂರು ಶಾಲೆಗೆ ನಾಲ್ಕು ಪ್ರಥಮ ಪ್ರಶಸ್ತಿಗಳು

ಬಜಗೋಳಿ ವಲಯ ಮಟ್ಟದ 14 ವರ್ಷದೊಳಗಿನ ಬಾಲಕ-ಬಾಲಕಿಯರ ವಾಲಿಬಾಲ್ ಮತ್ತು ತ್ರೋಬಾಲ್ ಪಂದ್ಯಾಟದಲ್ಲಿ ಇರ್ವತ್ತೂರು ಶಾಲೆಯು ಭರ್ಜರಿ ಸಾಧನೆ ಮಾಡಿದೆ. ಸ್ಪರ್ಧಿಸಿದ ನಾಲ್ಕೂ ವಿಭಾಗಗಳಲ್ಲಿ ಪ್ರಥಮ ಪ್ರಶಸ್ತಿಗಳನ್ನು ಗೆಲ್ಲುವ ಮೂಲಕ ಶಾಲೆಯು ಹೊಸ ದಾಖಲೆಯನ್ನು ನಿರ್ಮಿಸಿದೆ.

ದಿನ ವಿಶೇಷ – ಕ್ಯಾಪ್ಟನ್ ವಿಕ್ರಮ್ ಬತ್ರಾ ಜನ್ಮದಿನ

ನಮ್ಮ ದೇಶದ ಇತಿಹಾಸದಲ್ಲಿ ದೇಶಭಕ್ತಿ ಮತ್ತು ಧೈರ್ಯದ ಸಂಕೇತವಾಗಿ ನಿಂತಿರುವ ಹೆಸರುಗಳಲ್ಲಿ ಕ್ಯಾಪ್ಟನ್ ವಿಕ್ರಮ್ ಬತ್ರಾ ಅವರದ್ದು ಅಮರ

ಫುಟ್‌ಬಾಲ್ : ಕಾರ್ಕಳ ಜ್ಞಾನಸುಧಾ ತಂಡ ಜಿಲ್ಲಾಮಟ್ಟಕ್ಕೆ

ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.