ಸೇನಾ ಕಾರ್ಯಾಚರಣೆ ನೇರ ಪ್ರಸಾರಕ್ಕೆ ತಡೆ: ಮಾಧ್ಯಮಗಳಿಗೆ ಕೇಂದ್ರ ಸರ್ಕಾರದ ಕಟ್ಟುನಿಟ್ಟಿನ ಸೂಚನೆ

Date:

spot_img

ನವದೆಹಲಿ: ದೇಶದ ಭದ್ರತೆಯ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಕ್ರಮವೊಂದನ್ನು ಕೈಗೊಂಡಿದೆ. ಇದೀಗ ಸೇನಾ ಮತ್ತು ಭದ್ರತಾ ಪಡೆಗಳ ಕಾರ್ಯಾಚರಣೆ ಸಂಬಂಧಿತ ನೇರ ಪ್ರಸಾರ ಹಾಗೂ ತಕ್ಷಣದ ವರದಿ (ರಿಯಲ್ ಟೈಮ್ ಕವರೇಜ್)ಗಳಿಗೆ ನಿರ್ಬಂಧ ವಿಧಿಸಲಾಗಿದೆ.

ಈ ಕುರಿತು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ಸ್ಪಷ್ಟ ನಿರ್ದೇಶನ ನೀಡಿ, ಎಲ್ಲಾ ಮಾಧ್ಯಮ ಸಂಸ್ಥೆಗಳಿಗೆ ಅಧಿಕೃತ ಸೂಚನಾ ಪತ್ರವನ್ನೇ ಬಿಡುಗಡೆ ಮಾಡಿದೆ. ಇದರ ಮೂಲಕ, ಭದ್ರತಾ ಕಾರ್ಯಾಚರಣೆ ಕುರಿತ “ಮೂಲಗಳ ಪ್ರಕಾರ” ಎನ್ನುವ ನಮೂನೆಯ ವರದಿಗಳನ್ನು ಸಹ ಅನಧಿಕೃತವೆಂದು ಪರಿಗಣಿಸಲಾಗುತ್ತದೆ.

ರಾಷ್ಟ್ರೀಯ ಭದ್ರತೆ ಮತ್ತು ಜನರ ಸುರಕ್ಷತೆಯ ದೃಷ್ಟಿಯಿಂದ , ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಸೇನಾ ಕಾರ್ಯಾಚರಣೆ ವೇಳೆ ನಡೆಯುವ ಸುದ್ದಿಯ ವಿಸ್ತೃತ ವರದಿ ಅಥವಾ ನೇರ ಪ್ರಸಾರದಿಂದ ದುಷ್ಪರಿಣಾಮ ಉಂಟಾಗಬಹುದೆಂಬ ಆತಂಕದಿಂದ, ಈ ನಿರ್ಬಂಧವನ್ನು ಹೇರಲಾಗಿದೆ.

ಕೇಂದ್ರ ಸರ್ಕಾರವು ಮಾಹಿತಿಯ ಸತ್ಯತೆ ಹಾಗೂ ಭದ್ರತಾ ಸಂಘಟನೆಗಳ ನಿರ್ವಹಣೆಯ ನಡುವೆ ಸಮತೋಲನ ಕಾಪಾಡಲು ಮಾಧ್ಯಮಗಳು ಜವಾಬ್ದಾರಿಯುತ ವರದಿ ಪ್ರಕ್ರಿಯೆ ಪಾಲಿಸಬೇಕೆಂದು ಸೂಚನೆ ನೀಡಿದೆ ಮತ್ತು ನಿಯಮ ಉಲ್ಲಂಘನೆಯಾದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ