spot_img

ಸರ್ಕಾರಿ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಬಾಟಲಿ ನೀರಿಗೆ ನಿರ್ಬಂಧ: ರಾಜ್ಯ ಸರ್ಕಾರದ ಖಡಕ್ ಆದೇಶ!

Date:

spot_img

ಬೆಂಗಳೂರು: ರಾಜ್ಯಾದ್ಯಂತ ಸರ್ಕಾರ ನಡೆಸುವ ಎಲ್ಲ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಬಾಟಲಿಯ ನೀರಿನ ಬಳಕೆಗೆ ಸಂಪೂರ್ಣ ನಿಷೇಧ ಹೇರಲು ರಾಜ್ಯ ಸರ್ಕಾರ ಖಡಕ್ ಆದೇಶ ಹೊರಡಿಸಿದೆ. ಇದೀಗ ಪ್ಲಾಸ್ಟಿಕ್ ಬಾಟಲಿಯ ನೀರಿನ ಬದಲು ಗ್ಲಾಸ್, ಸ್ಟೀಲ್ ಅಥವಾ ಪೇಪರ್ ಲೋಟಗಳಲ್ಲಿ ಮಾತ್ರ ನೀರು ಪೂರೈಕೆ ಮಾಡಬೇಕು ಎಂದು ಸರ್ಕಾರ ಕಡ್ಡಾಯ ಸೂಚನೆ ನೀಡಿದೆ.

ಪರಿಸರ ಸಂರಕ್ಷಣೆಗೆ ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ

ಪ್ಲಾಸ್ಟಿಕ್ ವಸ್ತುಗಳ ಅತಿಯಾದ ಬಳಕೆಯಿಂದ ಆರೋಗ್ಯ ಹಾಗೂ ಪರಿಸರದ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ತಡೆಯುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. 2016ರಲ್ಲಿ ರಾಜ್ಯ ಸರ್ಕಾರ ಪ್ಲಾಸ್ಟಿಕ್ ವಸ್ತುಗಳ ನಿಷೇಧಕ್ಕೆ ಆದೇಶ ಹೊರಡಿಸಿದ್ದರೂ, ಸರಿಯಾಗಿ ಅನುಷ್ಠಾನವಾಗದ ಕಾರಣ ಮತ್ತೊಮ್ಮೆ ಖಡಕ್ ನಿಯಮ ಜಾರಿಗೆ ತಂದಿದೆ.

ಸರ್ಕಾರಿ ಕಚೇರಿಗಳಲ್ಲೂ ಕಟ್ಟುನಿಟ್ಟಿನ ನಿಯಮ

ಸಚಿವಾಲಯ ಸೇರಿದಂತೆ ಎಲ್ಲಾ ಸರ್ಕಾರಿ ಕಚೇರಿಗಳು, ಮಂಡಳಿಗಳು, ನಿಗಮಗಳು, ವಿಶ್ವವಿದ್ಯಾನಿಲಯಗಳು ಹಾಗೂ ಸರ್ಕಾರಿ ಅನುದಾನ ಪಡೆಯುವ ಎಲ್ಲಾ ಸಂಸ್ಥೆಗಳು ಈ ನಿಷೇಧವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಯಾವುದೇ ಸರ್ಕಾರಿ ಸಭೆ, ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿಯ ನೀರನ್ನು ಬಳಸಲು ಅವಕಾಶ ಇಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಪಾಲಿಸದಿದ್ದರೆ ಕಠಿಣ ಕ್ರಮ

ಈ ಆದೇಶ ಉಲ್ಲಂಘನೆ ಮಾಡಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಎಚ್ಚರಿಸಿದೆ. ಎಲ್ಲಾ ಇಲಾಖೆಗಳ ಮುಖ್ಯಸ್ಥರು ತಮ್ಮ ಅಧೀನದ ಎಲ್ಲಾ ಸಂಸ್ಥೆಗಳಲ್ಲಿ ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಲು ಕ್ರಮ ವಹಿಸಬೇಕು ಎಂದು ಸೂಚಿಸಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಶಾಲಾ ಮಕ್ಕಳಿಗೆ ‘ಫ್ಲೇವರ್ಡ್’ ನಂದಿನಿ ಹಾಲು: ಬಮೂಲ್‌ನಿಂದ ಸಿಹಿಸುದ್ದಿ!

ಶಾಲಾ ಮಕ್ಕಳಿಗೆ ವಿತರಿಸಲಾಗುತ್ತಿರುವ ಹಾಲು ಕಾಳಸಂತೆಯಲ್ಲಿ ಮಾರಾಟವಾಗುವುದನ್ನು ತಡೆಯಲು ಮತ್ತು ಪೌಷ್ಟಿಕಾಂಶ ಹೆಚ್ಚಿಸಲು, ಬಮೂಲ್ ನೂತನ ನಿರ್ದೇಶಕ ಡಿ.ಕೆ. ಸುರೇಶ್ ಅವರು ಶಾಲಾ ಮಕ್ಕಳಿಗೆ 'ಫ್ಲೇವರ್ಡ್' ನಂದಿನಿ ಹಾಲು ಪೂರೈಸುವ ಮಹತ್ವದ ಪ್ರಸ್ತಾಪವನ್ನು ಶಾಲಾ ಶಿಕ್ಷಣ ಇಲಾಖೆಯ ಮುಂದಿಟ್ಟಿದ್ದಾರೆ.

ಬಡ ವರ್ತಕರನ್ನು ಜಿ.ಎಸ್.ಟಿ ಸಂಕಟದಿಂದ ಪಾರು ಮಾಡಿದ ರಾಜ್ಯ ಕಾಂಗ್ರೆಸ್ ಸರಕಾರ

ಅವೈಜ್ಙಾನಿಕ ನೋಟಿಸ್ ಜಾರಿಗೊಳಿಸಿದ ಕೇಂದ್ರ ಸರ್ಕಾರದ ತೆರಿಗೆ ಇಲಾಖೆಯ ಕ್ರಮದಿಂದ ಆತಂಕ ಹಾಗೂ ಗೊಂದಲಕ್ಕೊಳಗಾಗಿದ್ದ ರಾಜ್ಯದ ವರ್ತಕ ವಲಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ವಿಶೇಷ ಕಾಳಜಿಯಿಂದ ರಕ್ಷಿಸಿದ್ದಾರೆಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ್ ರಾವ್ ಹರ್ಷ ವ್ಯಕ್ತಪಡಿಸಿದ್ದಾರೆ.

ದಶಕಗಳಿಂದ ಕಾಂಗ್ರೆಸ್ ಆಡಳಿತದಲ್ಲಿರುವ ಹಾರಾಡಿ ಗ್ರಾ.ಪಂ. ನ ಮಾನ ಹರಾಜು ಹಾಕಿದ ಕಾಂಗ್ರೆಸ್ ಮುಖಂಡ ಪ್ರಸಾದ್ ಕಾಂಚನ್ : ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಪ್ರದೀಪ್ ಕುಂದರ್ ಹೊನ್ನಾಳ

ಕಾಂಗ್ರೆಸ್ ಮುಖಂಡ ಪ್ರಸಾದ್ ಕಾಂಚನ್ ರವರು ಕೀಳು ಮಟ್ಟದ ಹೇಳಿಕೆಯನ್ನು ಮುಂದುವರಿಸಿದಲ್ಲಿ ಜಿಲ್ಲಾ ಯುವ ಮೋರ್ಚಾ ತಕ್ಕ ಉತ್ತರ ನೀಡಲಿದೆ ಎಂದು ಪ್ರದೀಪ್ ಕುಂದರ್ ಹೊನ್ನಾಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾರ್ಕಳದ ಮುಂಡ್ಲಿ ಯಕ್ಷಗಾನ ನಿರ್ಬಂಧ ಪ್ರಕರಣ: ಆಯೋಜಕರ ವಿರುದ್ಧದ ದೂರಿಗೆ ಹೈಕೋರ್ಟ್ ತಡೆ!

ಕಾರ್ಕಳದ ಮುಂಡ್ಲಿ ಗ್ರಾಮದಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ವಿಧಿಸಲಾಗಿದ್ದ ನಿರ್ಬಂಧದ ವಿರುದ್ಧದ ದೂರಿಗೆ ಹೈಕೋರ್ಟ್ ತಡೆ ನೀಡಿದ್ದು, ನ್ಯಾಯವಾದಿ ಮಹೇಂದ್ರ ಎಸ್. ಎಸ್. ಬೆಂಗಳೂರು ಅವರ ವಾದಕ್ಕೆ ಜಯ ಲಭಿಸಿದೆ.