ನಂಬಿದ ಗ್ರಾಹಕರಿಗೆ ಮ್ಯಾನೇಜರ್ ನಾಮ: 3 ಕೋಟಿ ಲೂಟಿ ಮಾಡಿ ಎಸ್ಕೇಪ್ ಆದ ಕೆನರಾ ಬ್ಯಾಂಕ್ ಅಧಿಕಾರಿ!

Date:

spot_img

ಬೆಂಗಳೂರು: ಕೆನರಾ ಬ್ಯಾಂಕ್‌ನ ಹಿರಿಯ ವ್ಯವಸ್ಥಾಪಕರೊಬ್ಬರು ಗ್ರಾಹಕರ ನಂಬಿಕೆಯನ್ನೇ ಬಂಡವಾಳವಾಗಿಸಿಕೊಂಡು ಕೋಟ್ಯಾಂತರ ರೂಪಾಯಿ ಹಣದೊಂದಿಗೆ ನಾಪತ್ತೆಯಾಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಬೃಹತ್ ವಂಚನೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆ, ಆರೋಪಿಯ ಬಂಧನಕ್ಕಾಗಿ ಈಗ ವಿಶೇಷ ತನಿಖಾ ತಂಡವನ್ನು (SIT) ರಚಿಸಿದೆ.

ಬೆಂಗಳೂರಿನ ಮಲ್ಲೇಶ್ವರಂ ಪ್ರಾದೇಶಿಕ ಕಚೇರಿಯ ವ್ಯಾಪ್ತಿಗೆ ಬರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಹಿರಿಯ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎನ್. ರಘು ಎಂಬುವವರೇ ಈ ಕೃತ್ಯ ಎಸಗಿದ ಆರೋಪಿ. ಬ್ಯಾಂಕಿನ ಸಹಾಯಕ ಪ್ರಧಾನ ವ್ಯವಸ್ಥಾಪಕ ಕಬೀಂದ್ರ ಕುಮಾರ್ ಸಾಹು ಅವರು ನೀಡಿದ ದೂರಿನ ಅನ್ವಯ ತನಿಖೆ ಚುರುಕುಗೊಂಡಿದೆ. ಆರೋಪಿ ರಘು ಸುಮಾರು 41 ಗ್ರಾಹಕರ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ 3 ಕೋಟಿಗೂ ಅಧಿಕ ಮೊತ್ತವನ್ನು ಲಪಟಾಯಿಸಿ ತಲೆಮರೆಸಿಕೊಂಡಿದ್ದಾರೆ.

ತನಿಖೆಯ ವೇಳೆ ತಿಳಿದುಬಂದಂತೆ, ರಘು ಅವರು ತಮಗೆ ಪರಿಚಯವಿದ್ದ ಗ್ರಾಹಕರಿಗೆ “ನನ್ನ ಮನೆಯಲ್ಲಿ ಆರ್ಥಿಕ ಸಂಕಷ್ಟವಿದೆ, ನನ್ನ ಬಳಿ ಇರುವ ಚಿನ್ನವನ್ನು ನಿಮ್ಮ ಹೆಸರಿನಲ್ಲಿ ಅಡವಿಟ್ಟು ಸಾಲ ಪಡೆಯುತ್ತೇನೆ” ಎಂದು ನಂಬಿಸಿದ್ದರು. ಬ್ಯಾಂಕ್ ಮ್ಯಾನೇಜರ್ ಸ್ಥಾನದಲ್ಲಿದ್ದ ವ್ಯಕ್ತಿಯ ಮಾತು ನಂಬಿದ ಗ್ರಾಹಕರು ತಮ್ಮ ಆಧಾರ್ ಕಾರ್ಡ್, ಬ್ಯಾಂಕ್ ವಿವರ ಹಾಗೂ ಒಟಿಪಿ (OTP) ಹಂಚಿಕೊಂಡಿದ್ದರು. ಇದನ್ನು ದುರುಪಯೋಗಪಡಿಸಿಕೊಂಡ ರಘು, ಬ್ಯಾಂಕಿನಲ್ಲಿ ಯಾವುದೇ ಭೌತಿಕ ಚಿನ್ನವನ್ನು ಅಡಮಾನ ಇಡದೆಯೇ ಕಾಗದದ ಮೇಲೆ ಸಾಲ ಮಂಜೂರು ಮಾಡಿಕೊಂಡು, ಹಣವನ್ನು ನೇರವಾಗಿ ತಮ್ಮ ವೈಯಕ್ತಿಕ ಖಾತೆಗೆ ವರ್ಗಾಯಿಸಿಕೊಂಡಿದ್ದರು.

ಬ್ಯಾಂಕಿನ ನಿಯಮಿತ ತ್ರೈಮಾಸಿಕ ಆಡಿಟಿಂಗ್ (ಲೆಕ್ಕ ಪರಿಶೋಧನೆ) ನಡೆದಾಗ ಈ ಭೀಕರ ಹಗರಣ ಬಯಲಾಗಿದೆ. ಸಾಲದ ದಾಖಲೆಗಳಿದ್ದರೂ ಲಾಕರ್‌ನಲ್ಲಿ ಚಿನ್ನ ಇಲ್ಲದಿರುವುದನ್ನು ಕಂಡು ಅಧಿಕಾರಿಗಳು ದಬಾಯಿಸಿದಾಗ ವಂಚನೆ ಪತ್ತೆಯಾಗಿದೆ. ಸದ್ಯ ಆರೋಪಿ ಆಂಧ್ರಪ್ರದೇಶದಲ್ಲಿ ಅಡಗಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿದ್ದು, ಉತ್ತರ ವಿಭಾಗದ ಜಂಟಿ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ವಿಶೇಷ ತಂಡವೊಂದು ನೆರೆ ರಾಜ್ಯಕ್ಕೆ ತೆರಳಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರಾಹುಲ್ ಗಾಂಧಿ ಬಂಧನ: ಕಾರ್ಕಳ ಕಾಂಗ್ರೆಸ್ ಆಕ್ರೋಶ

ರಾಹುಲ್ ಗಾಂಧಿ ಬಂಧನ ಹಾಗೂ ವಿದ್ಯಾರ್ಥಿಗಳ ಮೇಲಿನ ಬಲಪ್ರಯೋಗ ಖಂಡಿಸಿ ಕಾರ್ಕಳ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಪೆರ್ವಾಜೆ ಸಾಯಿಬಾಬಾ ಮಂದಿರ ಅರ್ಚಕ ಲಕ್ಷ್ಮೀನಾರಾಯಣ ಭಟ್ ನಿಧನ

ಕಾರ್ಕಳದ ಪೆರ್ವಾಜೆ ಸಾಯಿಬಾಬಾ ಮಂದಿರದ ಪ್ರಧಾನ ಅರ್ಚಕ ಲಕ್ಷ್ಮೀನಾರಾಯಣ ಭಟ್ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.