spot_img

ಗಡಿ ಉದ್ವಿಗ್ನತೆ ನಡುವೆ ಬ್ಯಾಂಕಿಂಗ್ ಸೇವೆ ನಿರಂತರವಾಗಿರಲಿ: ಬ್ಯಾಂಕುಗಳಿಗೆ ನಿರ್ಮಲಾ ಸೀತಾರಾಮನ್ ನಿರ್ದೇಶನ

Date:

spot_img

ನವದೆಹಲಿ: ಗಡಿ ಪ್ರದೇಶಗಳಲ್ಲಿ ಉದ್ವಿಗ್ನತೆಯ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಬ್ಯಾಂಕುಗಳಿಗೆ ಎಚ್ಚರಿಕೆಯ ಸೂಚನೆ ನೀಡಲಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ದೇಶದ ಎಲ್ಲ ಬ್ಯಾಂಕುಗಳಿಗೆ ಮಹತ್ವದ ನಿರ್ದೇಶನೆ ನೀಡಿದ್ದು, ಯಾವುದೇ ಅಡ್ಡಿಯಿಲ್ಲದೆ ನಗದು ಲಭ್ಯತೆ, ಯುಪಿಐ, ಇಂಟರ್‌ನೆಟ್ ಬ್ಯಾಂಕಿಂಗ್ ಹಾಗೂ ಅಗತ್ಯ ಬ್ಯಾಂಕಿಂಗ್ ಸೇವೆಗಳಿಗೆ ನಿರಂತರ ಪ್ರವೇಶ ಒದಗಿಸಬೇಕೆಂದು ಹೇಳಿದ್ದಾರೆ.

ಡಿಜಿಟಲ್ ಮತ್ತು ಕೋರ್ ಬ್ಯಾಂಕಿಂಗ್ ವ್ಯವಸ್ಥೆಗಳಿಗೆ ಫೈರ್ವಾಲ್ ವ್ಯವಸ್ಥೆ ಕಡ್ಡಾಯಗೊಳಿಸುವ ಜೊತೆಗೆ, ದಿನದ 24 ಗಂಟೆಗಳಿಗೂ ಸೈಬರ್ ಭದ್ರತಾ ಮೇಲ್ವಿಚಾರಣೆ ಇರಬೇಕು ಎಂದು ಅವರು ತಿಳಿಸಿದ್ದಾರೆ. ಸೈಬರ್ ಭದ್ರತೆ ಹಾಗೂ ಡೇಟಾ ಸೆಂಟರ್‌ಗಳ ಲೆಕ್ಕಪರಿಶೋಧನೆ ನಿಯಮಿತವಾಗಿ ನಡೆಯಬೇಕು ಎಂಬುದನ್ನು ಖಚಿತಪಡಿಸಿಕೊಳ್ಳಲು ಸೂಚನೆ ನೀಡಲಾಗಿದೆ.

ಸಭೆಯ ವೇಳೆ, “ಇದು ಆರ್ಥಿಕ ಸ್ಥಿರತೆಗೆ ಬಹುಮುಖ್ಯವಾದ ಸಮಯ. ಬ್ಯಾಂಕುಗಳು ಯಾವುದೇ ಬಿಕ್ಕಟ್ಟನ್ನು ನಿಭಾಯಿಸಲು ಪೂರ್ಣ ಪ್ರಮಾಣದಲ್ಲಿ ಸಿದ್ಧವಾಗಿರಬೇಕು,” ಎಂದು ಸೀತಾರಾಮನ್ ಹೇಳಿದ್ದಾರೆ. ವಿಶೇಷವಾಗಿ ಗಡಿ ಪ್ರದೇಶಗಳಲ್ಲಿ ಬ್ಯಾಂಕಿಂಗ್ ಸೇವೆಗಳಿಗೆ ಅಡಚಣೆ ಇಲ್ಲದಂತೆ ನೋಡಿಕೊಳ್ಳಬೇಕೆಂದು ಅವರು ಒತ್ತಿ ಹೇಳಿದರು.

ಅದೇ ರೀತಿ ಗಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬ್ಯಾಂಕ್ ಸಿಬ್ಬಂದಿ ಮತ್ತು ಅವರ ಕುಟುಂಬಗಳ ಭದ್ರತೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವಂತೆ ಸೂಚನೆ ನೀಡಿದ್ದು, ಭದ್ರತಾ ಸಂಸ್ಥೆಗಳ ಸಹಯೋಗದೊಂದಿಗೆ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪ್ರೋಟಾನ್‌ನಿಂದ ‘ಲುಮೋ’ AI ಚಾಟ್‌ಬಾಟ್ ಬಿಡುಗಡೆ

ಸುರಕ್ಷಿತ ಇಮೇಲ್ ಮತ್ತು ವಿಪಿಎನ್‌ ಸೇವೆಗಳಿಗೆ ಹೆಸರುವಾಸಿಯಾಗಿರುವ ಪ್ರೋಟಾನ್ ಕಂಪನಿಯು, ಹೊಸ ಎಐ ಚಾಟ್‌ಬಾಟ್ ಒಂದನ್ನು ಬಿಡುಗಡೆ ಮಾಡಿದೆ. ‘ಲುಮೋ’ (Lumo) ಎಂದು ಹೆಸರಿಸಲಾದ ಈ ಚಾಟ್‌ಬಾಟ್ ಅನ್ನು ಗೌಪ್ಯತೆಯನ್ನು ಪ್ರಥಮ ಆದ್ಯತೆಯಾಗಿಟ್ಟುಕೊಂಡು ವಿನ್ಯಾಸಗೊಳಿಸಲಾಗಿದೆ.

ಹುಲಿಕಲ್ ಘಾಟಿಯಲ್ಲಿ ಮತ್ತೊಮ್ಮೆ ಭಾರೀ ಕುಸಿತ; ಶೀಘ್ರವೇ ಬೃಹತ್ ವಾಹನಗಳ ಸಂಚಾರ ನಿಷೇಧ ಸಾಧ್ಯತೆ!

ರಾಜ್ಯದ ಪ್ರಮುಖ ಘಾಟ್‌ಗಳಲ್ಲಿ ಒಂದಾದ ಹುಲಿಕಲ್ ಘಾಟ್ (ಬಾಳೆಬರೆ) ರಸ್ತೆಯಲ್ಲಿ ಮತ್ತೆ ದೊಡ್ಡ ಪ್ರಮಾಣದ ಕುಸಿತ ಸಂಭವಿಸಿದ್ದು, ಇದು ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ.

ಧರ್ಮಸ್ಥಳ ಪ್ರಕರಣ: 11ನೇ ಸ್ಥಳದಲ್ಲಿ ಶೋಧ ವಿಫಲ; 6ನೇ ಸ್ಥಳದ ಅಸ್ಥಿಪಂಜರ ಕೇಸ್ SITಗೆ ವರ್ಗಾವಣೆ!

ಹಲವಾರು ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಧರ್ಮಸ್ಥಳ ಪ್ರಕರಣದ ತನಿಖೆ ಮುಂದುವರೆದಿದೆ. ಆದರೆ, ಆಗಸ್ಟ್ 5ರಂದು ನಡೆಸಿದ ಶೋಧಕಾರ್ಯದಲ್ಲಿ ದೂರುದಾರರು ಗುರುತು ಮಾಡಿದ್ದ 11ನೇ ಸ್ಥಳದಲ್ಲಿ ಯಾವುದೇ ಕುರುಹು ಪತ್ತೆಯಾಗಿಲ್ಲ.

ಕಾಂಗ್ರೆಸ್ ಸಿದ್ಧಾಂತ ಜನರಿಗೆ ತಲುಪಿಸಿ: ಯಶಸ್ಸು ತಾತ್ಕಾಲಿಕವಲ್ಲ ಎಂದ ಕಿಮ್ಮನೆ ರತ್ನಾಕರ್

ಕಾಂಗ್ರೆಸ್ ಪಕ್ಷದ ಸೈದ್ಧಾಂತಿಕ ನಿಲುವು ಮತ್ತು ವಿಚಾರಧಾರೆಗಳನ್ನು ಜನಸಾಮಾನ್ಯರಿಗೆ ಪರಿಣಾಮಕಾರಿಯಾಗಿ ತಲುಪಿಸುವಂತೆ ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿಯ ಉಪಾಧ್ಯಕ್ಷ ಕಿಮ್ಮನೆ ರತ್ನಾಕರ್ ಅವರು ಕಾರ್ಯಕರ್ತರಿಗೆ ಕರೆ ನೀಡಿದರು.