ಕರ್ನಾಟಕ ವಿಧಾಸಭೆಯಲ್ಲಿ ಶಗುನ್ ಎಸ್ ವರ್ಮ ಹೆಗ್ಡೆ ಗುಣಗಾನ ಮಾಡಿ ಅಭಿನಂದನೆ ಸಲ್ಲಿಸಿದ ಸಭಾಧ್ಯಕ್ಷರಾದ ಯು.ಟಿ.ಖಾದರ್

Date:

spot_img

ಸಭಾಪತಿ ಹಾಗೂ ಸಭಾಧ್ಯಕ್ಷರ ಕಚೇರಿಯಲ್ಲಿ ಸಾಧಕಿಗೆ ಸನ್ಮಾನ

ಬೆಳಗಾವಿ : ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಶೂನ್ಯ ವೇಳೆಯಲ್ಲಿ ಭಾರತ U15 ಬಾಲಕಿಯರ ವಾಲಿಬಾಲ್ ತಂಡದ ನಾಯಕಿ ಶಗುನ್ ಎಸ್ ವರ್ಮ ಹೆಗ್ಡೆ ಇವರ ಸಾಧನೆಯನ್ನು ಗುಣಗಾನ ಮಾಡಿದ ಸಭಾಧ್ಯಕ್ಷ ಯು. ಟಿ ಖಾದರ್ ರವರು ಬಾಲಕಿಯ ಸಾಧನೆಗೆ ಅಭಿನಂದನೆ ಸಲ್ಲಿಸಿದರು.

ಸಾರ್ವಜನಿಕರಿಂದ ಕಿಕ್ಕಿರಿದು ತುಂಬಿದ್ದ ಕಲಾಪ ವೀಕ್ಷಣಾ ಗ್ಯಾಲರಿಯ ಮುಂಭಾಗದಲ್ಲಿ ಕುಳಿತಿದ್ದ ಶಗುನ್ ಎದ್ದು ನಿಂತು ಸಭಾಧ್ಯಕ್ಷರಿಗೆ ಕೃತಜ್ಞತೆ ಸಲ್ಲಿಸುತ್ತಿದಂತೆ ಸಭೆಯಲ್ಲಿ ಉಪಸ್ಥಿತರಿದ್ದ ಸಚಿವರು ಹಾಗೂ ಶಾಸಕರು ಮೇಜು ತಟ್ಟಿ ಬಾಲಕಿಯ ಸಾಧನೆಗೆ ಅಭಿನಂದನೆಗಳನ್ನು ಸಲ್ಲಿಸಿದರು.

ಕಲಾಪದ ನಂತರ ಸಭಾಧ್ಯಕ್ಷರಾದ ಶ್ರೀ ಯು.ಟಿ ಖಾದರ್ ರವರ ಕಚೇರಿ ಹಾಗೂ ವಿಧಾನ ಪರಿಷತ್ ಸಭಾಪತಿಗಳಾದ ಶ್ರೀ ಬಸವರಾಜ್ ಹೊರಟ್ಟಿಯವರ ಕಚೇರಿಯಲ್ಲಿ ಶಗುನ್ ವರ್ಮ ಅವರಿಗೆ ಶಾಲು ಹೊದಿಸಿ ಗೌರವ ಸಲ್ಲಿಸಿ ಶುಭಾಶೀರ್ವಾದ ಮಾಡಿದರು.

ಈ ಸಂದರ್ಭದಲ್ಲಿ ಹಿರಿಯ ಸಚಿವರಾದ ಬೋಸರಾಜ್ ವಿಧಾನ ಪರಿಷತ್ ಸದಸ್ಯರಾದ ಬಿ.ಕೆ ಹರಿಪ್ರಸಾದ್, ಕುಣಿಗಲ್ ಶಾಸಕ ರಂಗನಾಥ್, ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರಾದ ಶುಭದರಾವ್, ಸಾಮಾಜಿಕ ಧುರೀಣ ಸುಗ್ಗಿ ಸುಧಾಕರ್ ಶೆಟ್ಟಿ, ಸಂದೇಶ್ ವರ್ಮ ತರಬೇತುದಾರ ಜೀವನ್ ಡಿಸಿಲ್ವಾ, ರಾಮ್ ಪ್ರಸಾದ್ ಮಾದಲಾದವರು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಖರ್ಗೆ ವಾಗ್ದಾಳಿ: ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ತೀವ್ರ ಆಕ್ರೋಶ

ನೀಟ್ ಅಕ್ರಮ ಹಾಗೂ ಮಂದಿರದ ಟ್ರಸ್ಟ್ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧ: ಸಿಎಂ ಡಿ.ಕೆ. ಶಿವಕುಮಾರ್

ವಿದ್ಯುತ್ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಹಾಗೂ ಕೆಪಿಸಿಎಲ್ ಸಂಸ್ಥಾಪನಾ ದಿನದ ಪೂರ್ಣ ಮಾಹಿತಿ ಇಲ್ಲಿದೆ ಓದಿ.