ಬೆಳ್ತಂಗಡಿ: 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಚೆಕ್‌ಬೌನ್ಸ್‌ ಆರೋಪಿ ಬಂಧನ

Date:

spot_img

ಬೆಳ್ತಂಗಡಿ: ಹಣಕಾಸಿನ ವಂಚನೆ ಹಾಗೂ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ವ್ಯಕ್ತಿಯನ್ನು ಕೊನೆಗೂ ಧರ್ಮಸ್ಥಳ ಪೊಲೀಸರು ಬೆಂಗಳೂರಿನಲ್ಲಿ ಸೆರೆಹಿಡಿದಿದ್ದಾರೆ.

ತೋಟತ್ತಾಡಿ ಗ್ರಾಮದ ನಿವಾಸಿ, 37 ವರ್ಷದ ಸುಭಾಸ್ (ಟಿ.ಪಿ. ಪ್ರಭಾಕರಣ್ ಅವರ ಪುತ್ರ) ಬಂಧಿತ ಆರೋಪಿಯಾಗಿದ್ದಾನೆ. ಈತ ಸುದೀರ್ಘ ಕಾಲದಿಂದ ನ್ಯಾಯಾಂಗ ಪ್ರಕ್ರಿಯೆಯಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಈತನ ವಿರುದ್ಧ ವಾರಂಟ್ ಜಾರಿಯಾಗಿತ್ತು.

ಕಾರ್ಯಾಚರಣೆಯ ವಿವರ: ಬೆಳ್ತಂಗಡಿ ಉಪ ಅಧೀಕ್ಷಕಿ ರೋಹಿಣಿ ಸಿ.ಕೆ. ಮತ್ತು ವೃತ್ತ ನಿರೀಕ್ಷಕ ರವಿ ಬಿ.ಎಸ್. ಅವರ ಮಾರ್ಗದರ್ಶನದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು. ಧರ್ಮಸ್ಥಳ ಪೊಲೀಸ್ ಉಪ ನಿರೀಕ್ಷಕ ಸಮರ್ಥ್ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ವೃಷಭ ಮತ್ತು ಚರಣ್ ರಾಜ್ ಅವರು ತಾಂತ್ರಿಕ ಮಾಹಿತಿ ಹಾಗೂ ಖಚಿತ ಬಾತ್ಮಿ ಆಧಾರದ ಮೇಲೆ ಬೆಂಗಳೂರಿನ ಸುಂಕದಕಟ್ಟೆ ಎಂಬಲ್ಲಿ ದಾಳಿ ನಡೆಸಿ ಫೆಬ್ರವರಿ 27 ರಂದು ಆರೋಪಿಯನ್ನು ವಶಕ್ಕೆ ಪಡೆದರು.

ಬಂಧಿತನನ್ನು ಫೆಬ್ರವರಿ 28 ರಂದು ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಚಾರಣೆಯ ಹಂತದಲ್ಲಿ ಆರೋಪಿಯು ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದ ಬಾಕಿ ಮೊತ್ತವನ್ನು ಸಂಪೂರ್ಣವಾಗಿ ಬ್ಯಾಂಕ್‌ಗೆ ಪಾವತಿಸಿದ್ದಾನೆ. ಹಣ ಪಾವತಿಯಾದ ಹಿನ್ನೆಲೆಯಲ್ಲಿ ಈ ಸುದೀರ್ಘ ಕಾನೂನು ಹೋರಾಟದ ಪ್ರಕರಣವು ಅಂತಿಮವಾಗಿ ಇತ್ಯರ್ಥಗೊಂಡಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತದ ಮಾರುಕಟ್ಟೆಗೆ ಕಾಲಿಟ್ಟ ಬೋಟ್‌ನ ಹೊಸ ಪ್ರೀಮಿಯಂ ಹೆಡ್‌ಫೋನ್

ಬೋಟ್ ಕಂಪನಿಯು 80 ಗಂಟೆಗಳ ಬ್ಯಾಟರಿ ಹಾಗೂ 45dB ಹೈಬ್ರಿಡ್ ANC ಬೆಂಬಲಿಸುವ ಪ್ರೀಮಿಯಂ ನಿರ್ವಾಣ ಯುಟೋಪಿಯಾ 2 ಹೆಡ್‌ಫೋನ್ ಭಾರತದಲ್ಲಿ ಬಿಡುಗಡೆ ಮಾಡಿದೆ.

ದಿನ ವಿಶೇಷ – ಆದಾಯ ತೆರಿಗೆ ದಿನ

ಭಾರತದಲ್ಲಿ ಪ್ರತಿ ವರ್ಷ ಜುಲೈ 24 ರಂದು ಆದಾಯ ತೆರಿಗೆ ದಿನವನ್ನು ಆಚರಿಸಲಾಗುತ್ತದೆ. ಇದರ ಇತಿಹಾಸ, ಪ್ರಾಮುಖ್ಯತೆ ಮತ್ತು ITR ಸಲ್ಲಿಕೆಯ ಕುರಿತು ವಿವರ ಇಲ್ಲಿದೆ.

ನಿಮ್ಮ ಅಡುಗೆಮನೆಯಲ್ಲಿರುವ ಈ ಒಂದು ಎಣ್ಣೆ ನೂರಾರು ಕಾಯಿಲೆಗಳಿಗೆ ಮನೆಮದ್ದು: ಕ್ಯಾಸ್ಟರ್ ಆಯಿಲ್ ಬಳಸುವ ಸರಿಯಾದ ವಿಧಾನ ಇಲ್ಲಿದೆ.

ಹರಳೆಣ್ಣೆಯ ಆರೋಗ್ಯಕರ ಪ್ರಯೋಜನಗಳು, ಕೂದಲ ರಕ್ಷಣೆ ಮತ್ತು ಮಲಬದ್ಧತೆಗೆ ಇದನ್ನು ಬಳಸುವ ಸರಿಯಾದ ವಿಧಾನಗಳ ಕುರಿತು ಇಲ್ಲಿದೆ ಪೂರ್ಣ ಮಾಹಿತಿ.

ಉದ್ಯಮಿ ಸಂಪತ್‌ ಶೆಟ್ಟಿಗೆ ಪ್ರತಿಷ್ಠಿತ ಧರ್ಮಯೋಗಿ ಪುರಸ್ಕಾರ

ಗ್ರಾಮೀಣ ಉದ್ಯಮಿ ಮಂದಾರ್ತಿ ಸಂಪತ್ ಶೆಟ್ಟಿ ಅವರಿಗೆ ಮುದ್ರಾಡಿಯಲ್ಲಿ ಧರ್ಮಯೋಗಿ ಸನ್ಮಾನ ಪ್ರಶಸ್ತಿ ಘೋಷಣೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ