ನಾಗರಬಾವಿ: ಆಸ್ಪತ್ರೆ ಡ್ರೆಸಿಂಗ್ ರೂಮ್‌ನಲ್ಲಿ ಗುಪ್ತವಾಗಿ ವಿಡಿಯೋ ಮಾಡುತ್ತಿದ್ದ ಕಾಮುಕ ಸಿಬ್ಬಂದಿ ಅರೆಸ್ಟ್

Date:

spot_img

ಬೆಂಗಳೂರು: ರಾಜಧಾನಿಯ ನಾಗರಬಾವಿಯಲ್ಲಿರುವ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಹಿಳಾ ಸಿಬ್ಬಂದಿಯ ಖಾಸಗಿತನಕ್ಕೆ ಧಕ್ಕೆ ತಂದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಶಸ್ತ್ರಚಿಕಿತ್ಸಾ ಘಟಕದ ಡ್ರೆಸಿಂಗ್ ಕೊಠಡಿಯಲ್ಲಿ ಮಹಿಳೆಯರು ಬಟ್ಟೆ ಬದಲಿಸುವ ದೃಶ್ಯವನ್ನು ರಹಸ್ಯವಾಗಿ ಚಿತ್ರೀಕರಿಸುತ್ತಿದ್ದ ಜೂನಿಯರ್ ಟೆಕ್ನಿಷಿಯನ್‌ನನ್ನು ಅನ್ನಪೂರ್ಣೇಶ್ವರಿ ನಗರದ ಪೊಲೀಸರು ಸದ್ಯ ಕಂಬಿ ಹಿಂದೆ ತಳ್ಳಿದ್ದಾರೆ.

ಪಶ್ಚಿಮ ಬಂಗಾಳ ಮೂಲದ ಸುವೆಂದು ಮೊಹತಾ (23) ಬಂಧಿತ ಆರೋಪಿಯಾಗಿದ್ದಾನೆ. ಈತ ಕಳೆದ 1 ವರ್ಷದಿಂದ ನಾಗರಬಾವಿ 2ನೇ ಹಂತದಲ್ಲಿರುವ ಆಸ್ಪತ್ರೆಯಲ್ಲಿ ತಾಂತ್ರಿಕ ಸಹಾಯಕನಾಗಿ ಕಾರ್ಯನಿರ್ವಹಿಸುತ್ತಿದ್ದನು. ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು 8:30ರ ವೇಳೆಗೆ ಮಹಿಳಾ ಸಿಬ್ಬಂದಿ ಆಸ್ಪತ್ರೆಯ ಡ್ರೆಸಿಂಗ್ ರೂಮ್‌ಗೆ ಹೋದಾಗ, ಅಲ್ಲಿ ಆರೋಪಿಯು ರಹಸ್ಯವಾಗಿ ಇರಿಸಿದ್ದ ಮೊಬೈಲ್ ಫೋನ್ ಪತ್ತೆಯಾಗಿದೆ.

ಸಹೋದ್ಯೋಗಿಯೊಬ್ಬರು ಮೊಬೈಲ್ ಅನ್ನು ಗಮನಿಸಿ ಪರಿಶೀಲಿಸಿದಾಗ, ಅದರಲ್ಲಿ ವಿಡಿಯೋ ರೆಕಾರ್ಡಿಂಗ್ ಚಾಲ್ತಿಯಲ್ಲಿರುವುದು ತಿಳಿದುಬಂದಿದೆ. ಇದರಿಂದ ಬೆಚ್ಚಿಬಿದ್ದ ಸಿಬ್ಬಂದಿ ಕೂಡಲೇ ಆಸ್ಪತ್ರೆಯ ಆಡಳಿತ ಮಂಡಳಿಗೆ ದೂರು ನೀಡಿದ್ದಾರೆ. ಘಟನೆಯ ಗಂಭೀರತೆಯನ್ನು ಅರಿತ ಆಸ್ಪತ್ರೆಯ ನಿರ್ದೇಶಕ ಡಾ. ಚೇತನ್ ಅವರು ಪೊಲೀಸರಿಗೆ ದೂರು ನೀಡಿದ್ದು, ತನಿಖೆ ಕೈಗೆತ್ತಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆತನ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಳ್ಳಲಾಗಿದ್ದು, ಅದರಲ್ಲಿರುವ ದೃಶ್ಯಗಳನ್ನು ಯಾರೊಂದಿಗಾದರೂ ಹಂಚಿಕೊಂಡಿದ್ದಾನೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.