spot_img

ಬೆಂಗಳೂರಿನಲ್ಲಿ ಜೆಲ್ಲಿ ಚಾಕೊಲೇಟ್ ರೂಪದಲ್ಲಿ ಗಾಂಜಾ ಮಾರಾಟ: ‘ಜೆಲ್ಲಿ ಗಾಂಜಾ’ ಗ್ಯಾಂಗ್‌ನ ಇಬ್ಬರ ಬಂಧನ

Date:

spot_img
spot_img

ಬೆಂಗಳೂರು : ಬೆಂಗಳೂರು ನಗರದಲ್ಲಿ ಇದೀಗ ಹೊಸ ಮಾದರಿಯ ಮಾದಕ ವಸ್ತು ತಂತ್ರದಿಂದ ಗಾಂಜಾ ಮಾರಾಟ ನಡೆಯುತ್ತಿರುವ ಶಾಕಿಂಗ್ ಪ್ರಕರಣ ಬೆಳಕಿಗೆ ಬಂದಿದೆ. ಜೆಲ್ಲಿ ಚಾಕೊಲೇಟ್‌ನಂತೆ ಕಾಣುವ ಈ ನಕಲಿ ಉತ್ಪಾದನೆಗಳಲ್ಲಿ ಗಾಂಜಾ ಮಿಶ್ರಿತ ರಸವನ್ನು ಸೇರಿಸಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡಲಾಗುತ್ತಿದ್ದು, ವಿಶೇಷವಾಗಿ ಮೆಡಿಕಲ್ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಟಾರ್ಗೆಟ್ ಆಗಿದ್ದಾರೆ.

ಬ್ಯಾಟರಾಯನಪುರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಕೆ. ಜೀವನ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಈ ‘ಜೆಲ್ಲಿ ಗಾಂಜಾ’ ಗ್ಯಾಂಗ್‌ನ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಮೊಹಮದ್ ಜಾಹೀದ್ ಮತ್ತು ಇಸ್ಮಾಯಿಲ್ ಅದ್ಮಾನ್ ಎಂದು ಗುರುತಿಸಲಾಗಿದೆ. ಇನ್ನೊಬ್ಬ ಆರೋಪಿ ಪರಾರಿಯಾಗಿದ್ದು, ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ.

ಕಾರ್ಯಾಚರಣೆ ವೇಳೆ ₹3 ಲಕ್ಷ ಮೌಲ್ಯದ 1440 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಚಾಕೊಲೇಟ್ ಜೆಲ್ಲಿ ರೂಪದಲ್ಲಿ ಗಾಂಜಾ ರಸವನ್ನು ಮಿಕ್ಸ್ ಮಾಡಿ ಮಾರಾಟ ಮಾಡುತ್ತಿರುವ ಈ ಗ್ಯಾಂಗ್‌ನ ಪದ್ದತಿ ತೀವ್ರ ಆತಂಕ ಹುಟ್ಟುಹಾಕಿದೆ. ಹೆಬ್ಬಾಳದ ವಿಶ್ವನಾಥ ನಾಗೇನಹಳ್ಳಿಯಲ್ಲಿ ಆರೋಪಿಗಳು ವಾಸವಿದ್ದು, ಮಂಗಳೂರು ಮೂಲದ ವ್ಯಕ್ತಿಯ ಸಹಾಯದಿಂದ ಈ ದಂಧೆ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ.

ಪ್ರಸ್ತುತ ಪೊಲೀಸರು ಈ ಜೆಲ್ಲಿ ಗಾಂಜಾ ತಯಾರಿಕೆಯಾಗುತ್ತಿದ್ದ ಸ್ಥಳ ಹಾಗೂ ಇತರ ಸಂಪರ್ಕಿತ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಬಡತನ ನಿರ್ಮೂಲನೆಗಾಗಿ ಅಂತಾರಾಷ್ಟ್ರೀಯ ದಿನ

ಪ್ರತಿ ವರ್ಷ ಅಕ್ಟೋಬರ್ 17 ರಂದು ಜಗತ್ತಿನಾದ್ಯಂತ 'ಬಡತನ ನಿರ್ಮೂಲನೆಗಾಗಿ ಅಂತಾರಾಷ್ಟ್ರೀಯ ದಿನ' (International Day for the Eradication of Poverty) ವನ್ನು ಆಚರಿಸಲಾಗುತ್ತದೆ.

ಸರ್ಕಾರಿ ಶಾಲೆ ಉಳಿಯಲಿ ಬೆಳೆಯಲಿ ಗುಣಮಟ್ಟದ ಶಿಕ್ಷಣ ಸಿಗುವಂತಾಗಲಿ

ಅತ್ಯುತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಪೆರ್ವಾಜೆ ಸರ್ಕಾರಿ ಪ್ರೌಢಶಾಲೆಗೆ ಉಡುಪಿ ಜಿಲ್ಲಾ ಮಟ್ಟದ ಅತ್ಯುತ್ತಮ SDMC ಪ್ರಶಸ್ತಿ ಲಭಿಸಿತು.

ದೀಪಾವಳಿ ಪ್ರಯುಕ್ತ: ಶ್ರೀ ವಿಶ್ವಕರ್ಮ ಸಮಾಜೋದ್ಧಾರಕ ಸಂಘದಿಂದ ಕೊಂಡಾಡಿ ಭಜನೆಕಟ್ಟೆಯಲ್ಲಿ ಗೂಡುದೀಪ ಸ್ಪರ್ಧೆ

ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ವಿಶ್ವಕರ್ಮ ಸಮಾಜೋದ್ಧಾರಕ ಸಂಘ (ರಿ) ಕೊಂಡಾಡಿ ಭಜನೆಕಟ್ಟೆ, ಹಿರಿಯಡಕ ಇವರ ವತಿಯಿಂದ ಗೂಡುದೀಪ ಸ್ಪರ್ಧೆಯು ನಡೆಯಲಿದೆ.

ನೋಡೋಕಷ್ಟೆ ಮುಳ್ಳು; ಅನೇಕ ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ ಈ ಪಾಪಸ್​ ಕಳ್ಳಿ!

ಪಾಪಸ್ ಕಳ್ಳಿ (Cereus Night Bloom Cactus) ನೋಡುವುದಕ್ಕೆ ಮುಳ್ಳುಗಳಿಂದ ಕೂಡಿದ್ದರೂ, ಇದು ಅನೇಕ ಆರೋಗ್ಯ ಸಮಸ್ಯೆಗಳಿಗೆ ರಾಮಬಾಣವಾಗಿ ಕಾರ್ಯನಿರ್ವಹಿಸುತ್ತದೆ.